Don't Miss!
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ವಿರುದ್ಧದ ಹೋರಾಟಕ್ಕೆ 50 ಲಕ್ಷ ನೀಡಿದ ರಜನಿಕಾಂತ್
ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ತಮಿಳುನಾಡು ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡುವ ಮೂಲಕ ತಲೈವಾ ಸರ್ಕಾರಕ್ಕೆ ನೆರವಾಗಿದ್ದಾರೆ. ಸೋಮವಾರ (ಮೇ 17) ಖುದ್ದು ರಜನಿಕಾಂತ್ ಅವರೇ ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ಭೇಟಿ ಮಾಡಿ 50 ಲಕ್ಷ ಮೌಲ್ಯದ ಚೆಕ್ನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ.
ಕೊರೊನಾ ಲಾಕ್ಡೌನ್ ನಿಯಮವನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲನೆ ಮೂಲಕ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ರಜನಿ ವಿನಂತಿಸಿದ್ದಾರೆ.
ಚಿತ್ರೀಕರಣದಿಂದ ಹಿಂತಿರುಗುತ್ತಿದ್ದಂತೆ ಕೋವಿಡ್ ಲಸಿಕೆ ಪಡೆದ ರಜನಿಕಾಂತ್
ತಮಿಳಿನ ಮತ್ತೊಬ್ಬ ನಟ ಅಜಿತ್ ಕುಮಾರ್ ಸಹ ಸಿಎಂ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಅಜಿತ್ ಮ್ಯಾನೇಜರ್ ಅಧಿಕೃತವಾಗಿ ತಿಳಿಸಿರುವುದಾಗಿ ವಿಶ್ಲೇಷಕ ರಮೇಶ್ ಬಾಲ ಟ್ವೀಟ್ ಮಾಡಿದ್ದಾರೆ.
Recommended Video
ರಜನಿಕಾಂತ್ ಇತ್ತೀಚಿಗಷ್ಟೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಹೈದರಾಬಾದ್ನಲ್ಲಿ ಅಣ್ಣಾತ್ತೆ ಸಿನಿಮಾದ ಚಿತ್ರೀಕರಣ ಮುಗಿಸಿ ಚೆನ್ನೈಗೆ ಬಂದಿದ್ದ ರಜನಿ, ನಂತರ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.
ಹೈದರಾಬಾದ್ ಶೆಡ್ಯೂಲ್ ಮುಗಿಸಿರುವ ರಜನಿ ಈಗ ಚೆನ್ನೈ ನಿವಾಸದಲ್ಲಿದ್ದಾರೆ. ಸಿರುತೈ ಶಿವ ನಿರ್ದೇಶನದ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್, ನಯನತಾರ, ಖುಷ್ಬೂ, ಮೀನಾ, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ನವೆಂಬರ್ 4 ರಂದು ಅಣ್ಣಾತ್ತೆ ಚಿತ್ರ ತೆರೆಕಾಣಲಿದೆ ಎಂದು ಪ್ರಕಟಿಸಲಾಗಿದೆ.