Don't Miss!
- News Lok Sabha Election: ಮತದಾನದ ದಿನ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
168ನೇ ಚಿತ್ರಕ್ಕೆ ಅದೃಷ್ಟದ ಗಾಯಕರನ್ನ ಆಯ್ಕೆ ಮಾಡಿದ ರಜನಿಕಾಂತ್!
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ದರ್ಬಾರ್ ಸಿನಿಮಾ ಬಿಡುಗಡೆಯಾಗಿ ಅದ್ಧೂರಿ ಯಶಸ್ಸು ಸಾಧಿಸಿದೆ. ಈಗ ರಜನಿ ಮುಂದಿನ ಸಿನಿಮಾ ಕುತೂಹಲ ಹೆಚ್ಚಿಸಿದೆ.
ಈಗಾಗಲೇ ರಜನಿಯ 168ನೇ ಚಿತ್ರ ಆರಂಭವಾಗಿದ್ದು, ಚಿತ್ರೀಕರಣ ಆರಂಭಿಸಿದೆ. ವೀರಂ, ವೇದಾಲಂ, ವಿಶ್ವಾಸಂ, ವೀವೇಗಂ ಖ್ಯಾತಿಯ ಶಿವ ನಿರ್ದೇಶನದಲ್ಲಿ ರಜನಿ ನಟಿಸುತ್ತಿದ್ದು, ಮೀನಾ, ಖುಷ್ಬೂ, ಪ್ರಕಾಶ್ ರಾಜ್, ಕೀರ್ತಿ ಸುರೇಶ್ ಅಂತಹ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಶೂಟಿಂಗ್ ಆರಂಭದಲ್ಲೇ ಈ ಚಿತ್ರದ ಶೀರ್ಷಿಕೆ ಗೀತೆ ಹಾಡಲು ಗಾಯಕರನ್ನು ಅಂತಿಮ ಮಾಡಲಾಗಿದೆ. ತಲೈವಾಗೆ ಅದೃಷ್ಟದ ಗಾಯಕ ಎಂದು ಗುರುತಿಸಿಕೊಂಡಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು 168ನೇ ಚಿತ್ರದ ಟೈಟಲ್ ಹಾಡು ಹಾಡಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ರಜನಿಕಾಂತ್ 'ದರ್ಬಾರ್'ಗೆ ಅದೃಷ್ಟ ತಂದ ಎಸ್.ಪಿ ಬಾಲಸುಬ್ರಹ್ಮಣ್ಯಂ
ರಜನಿಕಾಂತ್ ಅಭಿನಯದ ಬಹುತೇಕ ಚಿತ್ರಗಳಲ್ಲಿ ಎಸ್ ಪಿ ಬಿ ಶೀರ್ಷಿಕೆ ಗೀತೆ ಹಾಡಿದ್ದಾರೆ. ದರ್ಬಾರ್ ಸಿನಿಮಾದ ಟೈಟಲ್ ಹಾಡು ಕೂಡ ಎಸ್ ಪಿ ಬಿ ಅವರೇ ಹಾಡಿದ್ದಾರೆ. ಬಾಲಸುಬ್ರಹ್ಮಣ್ಯಂ ಸಿನಿಮಾದ ಮೊದಲ ಹಾಡು ಹೇಳಿದ್ರೆ ಅದು ಪಕ್ಕಾ ಹಿಟ್ ಆಗುತ್ತೆ ಎನ್ನುವುದು ಸ್ವತಃ ರಜನಿಯ ನಂಬಿಕೆ ಕೂಡ ಹೌದು.
ಹಾಗಾಗಿ, ರಜನಿಕಾಂತ್ ಸಿನಿಮಾ ಮಾಡುವ ನಿರ್ದೇಶಕರು ಕೂಡ ಇದೇ ಸಂಪ್ರದಾಯಕ್ಕೆ ಮುಂದಾಗ್ತಾರೆ. ವಿವೇಕ್ ಈ ಹಾಡಿಗೆ ಸಾಹಿತ್ಯ ಬರೆಯಲಿದ್ದು, ಡಿ ಇಮ್ಮಾನ್ ಸಂಗೀತ ನೀಡಲಿದ್ದಾರೆ. ಎಲ್ಲ ಅಂದುಕೊಂಡಂತೆ ಆದರೆ ಅಕ್ಟೋಬರ್ ವೇಳೆ ಈ ಸಿನಿಮಾ ತೆರೆಗೆ ಬರಲಿದೆ.