Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಮಲ್ ನಂತರ ಕೊರೊನಾ ಚಿಕಿತ್ಸೆಗೆ ಕಲ್ಯಾಣಮಂಟಪ ನೀಡಲು ಮುಂದಾದ ರಜನಿಕಾಂತ್
ದೇಶದಾದ್ಯಂತ ಕೊರೊನಾ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಅದರಲ್ಲೂ ತಮಿಳು ನಾಡಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಚಿಕಿತ್ಸ ಕೊಠಡಿಗಳ ಅಗತ್ಯವೂ ಅಷ್ಟೆ ಇದೆ. ಅವಶ್ಯಕತೆಯನ್ನು ನೀಗಿಸಲು ಸೂಪರ್ ಸ್ಟಾರ್ ರಜನಿಕಾಂತ್ ಮುಂದಾಗಿದ್ದಾರೆ.
ಕೊರೊನಾ ವಿರುದ್ಧದ ಈ ಸಂಘರ್ಷದಲ್ಲಿ ಸಿನಿಮಾ ಉದ್ಯಮವು ಸರ್ಕಾರಕ್ಕೆ ದೊಡ್ಡ ನೆರವನ್ನೇ ನೀಡುತ್ತಿದೆ. ನಟ-ನಟಿಯರು ದೊಡ್ಡ ಮೊತ್ತದ ಹಣಕಾಸಿನ ನೆರವನ್ನು ಸರ್ಕಾರಗಳಿಗೆ ಘೋಷಿಸಿದ್ದಾರೆ. ಬಾಲಿವುಡ್ ಸೇರಿದಂತೆ ದೇಶದ ಬಹುತೇಕ ಎಲ್ಲಾ ಸಿನಿರಂಗಗಳಲ್ಲಿಯೂ ನಟ-ನಟಿಯರು ಬರಪೂರ ನೆರವನ್ನು ಸರ್ಕಾರಕ್ಕೆ ನೀಡಿದ್ದಾರೆ. ಹಣಕಾಸಿನ ನೆರವಿನ ಜೊತೆಗೆ ಕೊರೊನಾ ರೋಗಿಗಳ ಚಿಕಿತ್ಸೆಗೆ ತಮ್ಮ ಕಟ್ಟಡವನ್ನು ಬಿಟ್ಟುಕೊಡುತ್ತಿದ್ದಾರೆ. ಸದ್ಯ ಸೂಪರ್ ಸ್ಟಾರ್ ರಜನಿಕಾಂತ್ ಸಹ ಕಲ್ಯಾಣ ಮಂಟಪ ಕೊಡಲು ಮುಂದಾಗಿದ್ದಾರೆ. ಮುಂದೆ ಓದಿ..
ಕೊರೊನಾ ರೋಗಿಗಳ ಉಪಚಾರಕ್ಕೆ ಐಶಾರಾಮಿ ಹೋಟೆಲ್ ಬಿಟ್ಟುಕೊಟ್ಟ ಖ್ಯಾತ ವಿಲನ್
ಕಲ್ಯಾಣ ಮಂಟಪ ನೀಡಲು ಮುಂದಾದ ಸೂಪರ್ ಸ್ಟಾರ್
ರಜನಿಕಾಂತ್ ಒಡೆತನದ ಚೆನ್ನೈನ ಕೋದಂಬಕಂನಲ್ಲಿರುವ ಶ್ರೀ ರಘವೇಂದ್ರ ಕಲ್ಯಾಣ ಮಂಟಪವನ್ನು ಕೊರೊನಾ ಐಸೋಲೇಶನ್ ಚಿಕಿತ್ಸೆಗೆ ನೀಡಲು ಮುಂದಾಗಿದ್ದಾರೆ. ಈಗಾಗಲೆ ಈ ಕುರಿತು ತಮಿಳುನಾಡು ಮುಂಖ್ಯಮಂತ್ರಿಗೆ ಪತ್ರ ಬರೆದಿದ್ದಾರಂತೆ.
ಈ ಹಿಂದೆ ನಿರಾಶ್ರಿತರಿಗೆ ನೀಡಿದ್ದರು
ರಜನಿಕಾಂತ್ ಕಲ್ಯಾಣ ಮಂಟಪ ನೀಡಲು ಮುಂದಾಗಿದ್ದು ಇದೆ ಮೊದಲೇನಲ್ಲ. ಕೆಲವರ್ಷಗಳ ಹಿಂದೆ ರಜನಿಕಾಂತ್ ಚೆನ್ನೈನ ನೆರೆಹಾವಳಿ ಸಂಭವಿಸಿದಗಲೂ ನಿರಾಶ್ರಿತರ ನೆರವಿಗೆ ದಾವಿಸಿದ್ದರು. ಸೂಪರ್ ಸ್ಟಾರ್ ಒಡೆತನದ ಕಲ್ಯಾಣ ಮಂಟಪವನ್ನು ನಿರಾಶ್ರಿತರಿಗೆ ಬಿಟ್ಟುಕೊಡುವ ಮೂಲಕ ಆಶ್ರಯ ಕೊಟ್ಟಿದ್ದರು. ಈಗ ಮತ್ತೆ ಕೊರೊನಾ ವಿರುದ್ಧ ಹೋರಾಟಕ್ಕೂ ಕಲ್ಯಾಣ ಮಂಟಪ ನೀಡಲು ಮುಂದಾಗಿದ್ದಾರೆ.
ಪಕ್ಷದ ಕಚೇರಿ ನೀಡಲು ಮುಂದಾದ ಕಮಲ್ ಹಾಸನ್
ನಟ ಕಮಲ್ ಹಾಸನ್ ಸಹ ಕೊರೋನಾ ವಿರುದ್ಧ ಹೋರಾಟಕ್ಕೆ ತಮ್ಮ ಪಕ್ಷದ ಕಚೇರಿಯನ್ನು ಬಿಟ್ಟುಕೊಡಲು ಮುಂದಾಗಿದ್ದಾರೆ. ಚೆನ್ನೈನ ಎಲ್ಡಾಮ್ ರಸ್ತೆಯಲ್ಲಿರುವ ಕಮಲ್ ಹಾಸನ್ ಹಳೆಯ ಮನೆಯನ್ನೆ ಈಗ ಪಕ್ಷದ ಕಚೇರಿಯಾಗಿ ಪರಿವರ್ತಿಸಿಕೊಂಡಿದ್ದಾರೆ. ಈಗ ಅದೆ ಕಚೇರಿಯನ್ನು ಆಸ್ಪತ್ರೆಯನ್ನಾಗಿಸಿಕೊಂಡು ಕೊರೊನಾ ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳಬಹುದೆಂದು ಹೇಳಿದ್ದಾರೆ.
ಐಶಾರಾಮಿ ಹೋಟೆಲ್ ಬಿಟ್ಟುಕೊಟ್ಟ ಸೂನು ಸೂದ್
ಸೋನು ಸೂದ್ ಅವರು ತಮ್ಮ ಒಡೆತನದ ಆರು ಅಂತಸ್ತಿನ ಐಶಾರಾಮಿ ಹೋಟೆಲ್ ಅನ್ನು ಕೊರೊನಾ ಪೀಡಿತರ ಉಪಚಾರ ಮಾಡುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ವಾಸ್ತವ್ಯಕ್ಕೆ ಬಿಟ್ಟುಕೊಡುವುದಾಗಿ ಹೇಳಿದ್ದಾರೆ. ''ಕೊರೊನಾ ವಿರುದ್ಧ ಹೋರಾಟದಲ್ಲಿ ಇದೊಂದು ನನ್ನ ಸಹಾಯ. ಕೊರೊನಾ ರೋಗಿಗಳನ್ನು ಉಪಚರಿಸಲು ಮಹಾರಾಷ್ಟ್ರದ ಹಲವುಕಡೆಗಳಿಂದ ವೈದ್ಯರು, ನರ್ಸ್ಗಳು, ಇತರ ವೈದ್ಯಕೀಯ ಸಿಬ್ಬಂದಿ ಮುಂಬೈಗೆ ಬಂದಿದ್ದಾರೆ, ಅವರಿಗೆ ವಿಶ್ರಮಿಸಲು, ತಂಗಲು ನನ್ನ ಹೋಟೆಲ್ ಅನ್ನು ಬಿಟ್ಟುಕೊಡಲಿಚ್ಛಿದ್ದೇನೆ, ಈ ಬಗ್ಗೆ ಸ್ಥಳೀಯ ಆಡಳಿತದೊಂದಿಗೆ ಮಾತನಾಡುತ್ತಿದ್ದೇನೆ' ಎಂದು ಸೋನು ಸೂದ್ ಹೇಳಿದ್ದಾರೆ.
ರೋಗಿಗಳ ಉಪಚಾರಕ್ಕೆ ಕಚೇರಿ ಬಿಟ್ಟುಕೊಟ್ಟ ಶಾರುಖ್
ಕೆಲವೇ ದಿನಗಳ ಹಿಂದೆ ಶಾರುಖ್ ಖಾನ್-ಗೌರಿ ಖಾನ್ ದಂಪತಿ ಹಣಕಾಸಿನ ನೆರವು, ಆಹಾರ, ದಿನಸಿ ಸಾಮಗ್ರಿಗಳು, ಆರೋಗ್ಯ ಸಲಕರಣೆಗಳ ನೆರವಿನ ಜೊತೆಗೆ ಕೊರೊನಾ ರೋಗಿಗಳನ್ನು ಉಪರಿಸಲು ತಮ್ಮ ನಾಲ್ಕಂತಸ್ತಿನ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆಗೆ ಬಿಟ್ಟುಕೊಟ್ಟಿದ್ದಾರೆ.