Don't Miss!
- News Smartphone: ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬರುತ್ತಿದೆ ಸ್ಯಾಮ್ಸಂಗ್ M35 5G
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣೆ ಮುಗಿದ ಬಳಿಕ ಮತ್ತೆ ಚಿತ್ರೀಕರಣಕ್ಕೆ ಹೊರಟ ಸೂಪರ್ ಸ್ಟಾರ್ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ಮತ್ತೆ ಚಿತ್ರೀಕರಣಕ್ಕೆ ಹೊರಟಿದ್ದಾರೆ. ತಮಿಳುನಾಡಿನ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಜನಿಕಾಂತ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಬಹುನಿರೀಕ್ಷೆಯ ಅಣ್ಣಾತೆ ಸಿನಿಮಾದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ.
ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭ ಮಾಡಿದ್ದ ಸಿನಿಮಾತಂಡ ಕಳೆದ ಡಿಸೆಂಬರ್ ನಲ್ಲಿ ಕೆಲವು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಬಳಿಕ ಮತ್ತೆ ಚಿತ್ರೀಕರಣ ಸ್ಥಗಿತಗೊಳಿಸಲಾಗಿತ್ತು. ಅದೇ ಸಮಯದಲ್ಲಿ ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಕೆಲವು ದಿನಗಳ ವಿಶ್ರಾಂತಿ ಪಡೆಯಲು ಸೂಚಿಸಿದ್ದರು.
ರಜನೀಕಾಂತ್ಗಾಗಿ ಲೊಕೇಶನ್ ಬದಲು: ಚಿತ್ರೀಕರಣಕ್ಕೆ ಹಾಜರಾದ ತಲೈವರ್
ಕಳೆದ ತಿಂಗಳು ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಿದ್ದ ಸಿನಿಮಾತಂಡ ಕೊಂಚ ಬ್ರೇಕ್ ಪಡೆದಿತ್ತು. ಇದೀಗ ಚುನಾವಣೆ ಮುಗಿಸಿ ಮತ್ತೆ ಶೂಟಿಂಗ್ ಶುರುಮಾಡಿದ್ದು ಸೂಪರ್ ಸ್ಟಾರ್ ಹೈದರಾಬಾದ್ ಗೆ ತೆರಳಿದ್ದಾರೆ. ಈಗಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಬಹಿರಂಗ ಮಾಡಲಾಗಿದೆ. ಸಿನಿಮಾ ನವೆಂಬರ್ 14ರಂದು ತೆರೆಗೆ ಬರುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಆದ ಬಳಿಕ ಚಿತ್ರೀಕರಣ ಬೇಗ ಮುಗಿಸಲು ಸಿನಿಮಾತಂಡ ಪ್ಲಾನ್ ಮಾಡಿದೆ.
ಸದ್ಯ ರಜನಿಕಾಂತ್ ವಿಶೇಷ ವಿಮಾನದ ಮೂಲಕ ಹೈದರಾಬಾದ್ ಗೆ ತೆರಳಿದ್ದಾರೆ. ಚಿತ್ರದಲ್ಲಿ ನಾಯಕಿಯರಾಗಿ ನಯನತಾರಾ, ಖುಷ್ಬೂ, ಮೀನಾ ಮತ್ತು ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ಕೊರೊನಾ ಮುನ್ನಚ್ಚರಿಯೊಂದಿಗೆ ಚಿತ್ರೀಕರಣದಲ್ಲಿ ಇಡೀ ತಂಡ ಭಾಗಿಯಾಗಿದೆ.
Recommended Video
ಈಗಾಗಲೇ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಸೂಪರ್ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಸದ್ಯದಲ್ಲೇ ಹೈದರಾಬಾದ್ ಚಿತ್ರೀಕರಣ ಮುಗಿಸಿ ಚೆನ್ನೈಗೆ ವಾಪಸ್ ಆಗಲಿದ್ದಾರೆ.