twitter
    For Quick Alerts
    ALLOW NOTIFICATIONS  
    For Daily Alerts

    ಚುನಾವಣೆ ಮುಗಿದ ಬಳಿಕ ಮತ್ತೆ ಚಿತ್ರೀಕರಣಕ್ಕೆ ಹೊರಟ ಸೂಪರ್ ಸ್ಟಾರ್ ರಜನಿಕಾಂತ್

    |

    ಸೂಪರ್ ಸ್ಟಾರ್ ರಜನಿಕಾಂತ್ ಮತ್ತೆ ಚಿತ್ರೀಕರಣಕ್ಕೆ ಹೊರಟಿದ್ದಾರೆ. ತಮಿಳುನಾಡಿನ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಜನಿಕಾಂತ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಬಹುನಿರೀಕ್ಷೆಯ ಅಣ್ಣಾತೆ ಸಿನಿಮಾದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ.

    ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭ ಮಾಡಿದ್ದ ಸಿನಿಮಾತಂಡ ಕಳೆದ ಡಿಸೆಂಬರ್ ನಲ್ಲಿ ಕೆಲವು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಬಳಿಕ ಮತ್ತೆ ಚಿತ್ರೀಕರಣ ಸ್ಥಗಿತಗೊಳಿಸಲಾಗಿತ್ತು. ಅದೇ ಸಮಯದಲ್ಲಿ ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಕೆಲವು ದಿನಗಳ ವಿಶ್ರಾಂತಿ ಪಡೆಯಲು ಸೂಚಿಸಿದ್ದರು.

    ರಜನೀಕಾಂತ್‌ಗಾಗಿ ಲೊಕೇಶನ್ ಬದಲು: ಚಿತ್ರೀಕರಣಕ್ಕೆ ಹಾಜರಾದ ತಲೈವರ್ರಜನೀಕಾಂತ್‌ಗಾಗಿ ಲೊಕೇಶನ್ ಬದಲು: ಚಿತ್ರೀಕರಣಕ್ಕೆ ಹಾಜರಾದ ತಲೈವರ್

    ಕಳೆದ ತಿಂಗಳು ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಿದ್ದ ಸಿನಿಮಾತಂಡ ಕೊಂಚ ಬ್ರೇಕ್ ಪಡೆದಿತ್ತು. ಇದೀಗ ಚುನಾವಣೆ ಮುಗಿಸಿ ಮತ್ತೆ ಶೂಟಿಂಗ್ ಶುರುಮಾಡಿದ್ದು ಸೂಪರ್ ಸ್ಟಾರ್ ಹೈದರಾಬಾದ್ ಗೆ ತೆರಳಿದ್ದಾರೆ. ಈಗಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಬಹಿರಂಗ ಮಾಡಲಾಗಿದೆ. ಸಿನಿಮಾ ನವೆಂಬರ್ 14ರಂದು ತೆರೆಗೆ ಬರುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಆದ ಬಳಿಕ ಚಿತ್ರೀಕರಣ ಬೇಗ ಮುಗಿಸಲು ಸಿನಿಮಾತಂಡ ಪ್ಲಾನ್ ಮಾಡಿದೆ.

    Rajinikanth resumes annaatthe shooting at Hyderabad

    ಸದ್ಯ ರಜನಿಕಾಂತ್ ವಿಶೇಷ ವಿಮಾನದ ಮೂಲಕ ಹೈದರಾಬಾದ್ ಗೆ ತೆರಳಿದ್ದಾರೆ. ಚಿತ್ರದಲ್ಲಿ ನಾಯಕಿಯರಾಗಿ ನಯನತಾರಾ, ಖುಷ್ಬೂ, ಮೀನಾ ಮತ್ತು ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ಕೊರೊನಾ ಮುನ್ನಚ್ಚರಿಯೊಂದಿಗೆ ಚಿತ್ರೀಕರಣದಲ್ಲಿ ಇಡೀ ತಂಡ ಭಾಗಿಯಾಗಿದೆ.

    Recommended Video

    'ದುಬಾರಿ'ಗೆ ಬ್ರೇಕ್ ಹಾಕಿದ ಧ್ರುವ ಸರ್ಜಾ | Filmibeat Kannada

    ಈಗಾಗಲೇ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಸೂಪರ್ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಸದ್ಯದಲ್ಲೇ ಹೈದರಾಬಾದ್ ಚಿತ್ರೀಕರಣ ಮುಗಿಸಿ ಚೆನ್ನೈಗೆ ವಾಪಸ್ ಆಗಲಿದ್ದಾರೆ.

    English summary
    Super Star Rajinikanth resumes annaatthe shooting at Hyderabad.
    Friday, April 9, 2021, 9:33
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X