Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ 'ಅಣ್ಣಾತೆ' ಸಿನಿಮಾದ ಕಥೆ ಲೀಕ್: ಕೀರ್ತಿ, ಖುಷ್ಬೂ, ಮೀನಾ ಪಾತ್ರ ರಿವೀಲ್
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷೆಯ ಅಣ್ಣಾತೆ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು, ಸ್ವಲ್ಪ ಭಾಗ ಚಿತ್ರೀಕರಣ ಮಾಡಿ ಮುಗಿಸಿದೆ ಸಿನಿಮಾತಂಡ. ಕೊರೊನಾ ಲಾಕ್ ಡೌನ್ ನಿಂದ ಸದ್ಯ ಚಿತ್ರೀಕರಣ ಸ್ಥಗಿತವಾಗಿದೆ. ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಆದರೀಗ ಕೊರೊನಾ ಆತಂಕದ ಹಿನ್ನಲೆ ಹೈದರಾಬಾದ್ ನಿಂದ ಚೆನ್ನೈಗೆ ಶಿಫ್ಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
Recommended Video
ಈ ನಡುವೆ ಚಿತ್ರದ ಕಥೆ ಲೀಕ್ ಆಗಿರುವ ಸುದ್ದಿ ವೈರಲ್ ಆಗಿದೆ. ಅಣ್ಣಾತೆ ಸಿನಿಮಾದ ಕಥೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಸಿನಿಮಾತಂಡ ಯಾವುದು ಮಾಹಿತಿ ನೀಡಿಲ್ಲ. ಸದ್ಯ ಹರಿದಾಡುತ್ತಿರುವ ಕಥೆಯಲ್ಲಿ ಸಿನಿಮಾದ ಎಲ್ಲಾ ಪಾತ್ರಗಳ ಹೆಸರು ಇದೆ. ಮುಂದೆ ಓದಿ..
ನಿರ್ಮಾಪಕರಿಗೆ ಈ ಚಿತ್ರದ ಸಂಪೂರ್ಣ ಸಂಭಾವನೆ ವಾಪಸ್ ನೀಡಿದ್ದಾರಂತೆ ರಜನಿಕಾಂತ್!
ಹಳ್ಳಿಯ ಗೌರವಾನ್ವಿತ ವ್ಯಕ್ತಿ ಸೂಪರ್ ಸ್ಟಾರ್
ಸೋರಿಕೆಯಾದ ಕಥೆಯ ಪ್ರಕಾರ ರಜನಿಕಾಂತ್ ಹಳ್ಳಿಯ ಗೌರವಾನ್ವಿತ ವ್ಯಕ್ತಿಯಾಗಿರುತ್ತಾರೆ. ಅವರನ್ನು ಪ್ರೀತಿಯಿಂದ ಅಣ್ಣಾತೆ ಎಂದು ಕರೆಯುತ್ತಿರುತ್ತಾರೆ. ಖುಷ್ಬೂ ಮತ್ತು ಮೀನಾ ರಜನಿಕಾಂತ್ ಸಂಬಂಧಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರು ರಜನಿಕಾಂತ್ ಅವರನ್ನು ಮದುವೆಯಾಗಲು ಸ್ಪರ್ಧಿಸುತ್ತಿರುತ್ತಾರೆ. ಆದರೆ ರಜನಿಕಾಂತ್ ಮತ್ತೊಬ್ಬರನ್ನು ಪ್ರೀತಿಸಿ ಮದುವೆಯಾಗುತ್ತಾರೆ.
ರಜನಿಕಾಂತ್ ಮಗಳ ಪಾತ್ರದಲ್ಲಿ ಕೀರ್ತಿ ಸುರೇಶ್
ರಜನಿಕಾಂತ್ ಹೆಣ್ಣುಮಗು ಜನಿಸುತ್ತೆ. ಆ ಹೆಣ್ಣು ಮಗುವೆ ಕೀರ್ತಿ ಸುರೇಶ್. ಕೀರ್ತಿ ಸುರೇಶ್ ದೊಡ್ಡವಳಾದ ಮೇಲೆ ಮೀನಾ ಮತ್ತು ಖುಷ್ಬೂ ಇಬ್ಬರು ಸೊಸೆಯಾಗಿ ಮಾಡಿಕೊಳ್ಳಬೇಕೆಂದು ಪ್ರಯತ್ನಪಡುತ್ತಾರೆ. ನಯನತಾರಾ ಸಿನಿಮಾದಲ್ಲಿ ವಕೀಲೆಯಾಗಿ ಬಣ್ಣಹಚ್ಚಿದ್ದಾರಂತೆ. ಸಿನಿಮಾದ ಕೊನೆಯಲ್ಲಿ ಯಾರು ಕೀರ್ತಿ ಸುರೇಶ್ ಅವರನ್ನು ಮದುವೆಯಾಗುತ್ತಾರೆ ಎನ್ನುವುದೇ ಸಿನಿಮಾದ ಕಥೆ. ಈ ಕಥೆ ಈಗ ವೈರಲ್ ಆಗಿದೆ.
ಕೊನೆಯ ಸಿನಿಮಾದಲ್ಲಿ ಐವರಿಗೆ ಗೌರವ ಸಲ್ಲಿಸಿ ಹೋದ ಸುಶಾಂತ್, ಯಾರವರು?
ದೊಡ್ಡ ತಾರಾಬಳಗವಿದೆ
ಅಣ್ಣಾತೆ ನಿರ್ದೇಶಕ ಸಿರುಥೈ ಶಿವಾ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. ರಜನಿಕಾಂತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಖುಷ್ಬೂ, ಮೀನಾ, ಕೀರ್ತಿ ಸುರೇಶ್, ನಯನತಾರಾ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ದೊಡ್ಡ ತಾರಾಬಳಗವೆ ಸಿನಿಮಾದಲ್ಲಿದೆ. ಚಿತ್ರಕ್ಕೆ ಸನ್ ಪಿಕ್ಟರ್ಸ್ ಬಂಡವಾಳ ಹೂಡುತ್ತಿದೆ.
ಹೈದರಾಬಾದ್ ನಿಂದ ಚೆನ್ನೈಗೆ ಚಿತ್ರೀಕರಣ ಶಿಫ್ಟ್
ಅಣ್ಣಾತೆ ಸಿನಿಮಾ ಮತ್ತೆ ಚಿತ್ರೀಕರಣಕ್ಕೆ ಹೊರಡಲು ಸಿದ್ಧತೆ ನಡೆಸುತ್ತಿದೆ. ಹೈದರಾಬಾದ್ ನಿಂದ ಚೆನ್ನೈಗೆ ಚಿತ್ರೀಕರಣ ಶಿಫ್ಟಾ ಮಾಡಲಾಗಿದೆ. ಉಳಿದ ಭಾಗವನ್ನು ಚೆನ್ನೈನಲ್ಲಿಯೇ ಚಿತ್ರೀಕರಣ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ತಮಿಳುನಾಡು ಸರ್ಕಾರ ಅನುಮತಿ ನೀಡಿದ ನಂತರ ಚಿತ್ರೀಕರಣಕ್ಕೆ ಹೊರಡುತ್ತಿದೆಯಂತೆ. ಸಿನಿಮಾ ಮುಂದಿನ ತೆರೆಗೆ ಬರುತ್ತಿದೆ.