Just In
- 8 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 9 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 9 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 12 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪಕ್ಷ ಘೋಷಣೆಗೂ ಮುನ್ನಾ ಚಿತ್ರೀಕರಣ ಮುಗಿಸಲಿದ್ದಾರೆ ರಜನೀಕಾಂತ್
ನಟ ರಜನೀಕಾಂತ್, ತಾವು ರಾಜಕೀಯ ಪ್ರವೇಶಿಸುವುದಾಗಿ ಕೆಲವು ದಿನಗಳ ಹಿಂದಷ್ಟೆ ಘೋಷಿಸಿದ್ದಾರೆ. ಪಕ್ಷದ ಹೆಸರನ್ನು ಡಿಸೆಂಬರ್ 31 ರಂದು ಘೋಷಿಸಿ, ಪಕ್ಷದ ಅಧಿಕೃತ ಉದ್ಘಾಟನೆಯನ್ನು ಜನವರಿಯಲ್ಲಿ ಮಾಡುವುದಾಗಿ ಈಗಾಗಲೇ ಹೇಳಿದ್ದಾರೆ.
ರಜನೀಕಾಂತ್, ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳುವುದಕ್ಕೆ ಮುನ್ನಾ ಒಪ್ಪಿಕೊಂಡಿರುವ ಸಿನಿಮಾ ಮುಗಿಸುವ ದಾವಂತದಲ್ಲಿದ್ದಾರೆ. ರಜನೀಕಾಂತ್ ನಟಿಸುತ್ತಿರುವ ಮುಂದಿನ ಚಿತ್ರ 'ಅನ್ನಾತೆ'ಯ ಚಿತ್ರೀಕರಣದಲ್ಲಿ ಅವರು ಡಿಸೆಂಬರ್ 15 ರಿಂದ ಪಾಲ್ಗೊಳ್ಳಲಿದ್ದಾರೆ.
ರಜನಿಕಾಂತ್ ಹುಟ್ಟುಹಬ್ಬಕ್ಕೆ ಶುಭಕೋರಿದ ಸುದೀಪ್, ಪವನ್ ಒಡೆಯರ್
ನಿನ್ನೆ (ಡಿಸೆಂಬರ್ 12) ರಂದು 70ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ರಜನೀಕಾಂತ್, ಇಂದು ಚೆನ್ನೈನಿಂದ ಹೈದರಾಬಾದ್ ಗೆ ಬಂದಿದ್ದು, ಹೈದರಾಬಾದ್ನ ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.
ಅನ್ನಾತೆ ಸಿನಿಮಾವನ್ನು ಶಿವ ನಿರ್ದೇಶಿಸುತ್ತಿದ್ದಾರೆ. ಕೊರಿಯಾಗ್ರಫರ್ ಆಗಿದ್ದ ಶಿವ ನಂತರ ನಿರ್ದೇಶಕರಾಗಿ ಬದಲಾಗಿ ಹಲವಾರು ಮಾಸ್ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಅಜಿತ್ ನಟನೆಯ 'ವಿಸ್ವಾಸಂ, ವೇದಾಲಂ, ವೀರಂ, ವಿವೇಗಂ ಸಿನಿಮಾಗಳನ್ನು ನಿರ್ದೇಶಿಸಿರುವುದು ಇದೇ ಶಿವ.
'ರಜನಿ-ಅಂಬಿ ಸ್ನೇಹದಲ್ಲಿ ನನ್ನದೂ ಚಿಕ್ಕ ಪಾಲಿದೆ': ತಲೈವಾಗೆ ಶುಭಕೋರಿದ ಸುಮಲತಾ
ಅನ್ನಾತೆ ಸಿನಿಮಾದಲ್ಲಿ ರಜನೀಕಾಂತ್ ಜೊತೆಗೆ, ಖುಷ್ಬು, ಮೀನಾ, ಕೀರ್ತಿ ಸುರೇಶ್, ನಯನತಾರಾ ಅವರುಗಳು ಸಹ ಇರಲಿದ್ದಾರೆ. ಜಾಕಿ ಶ್ರಾಫ್, ಪ್ರಕಾಶ್ ರೈ ಅವರುಗಳು ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ. ಇತ್ತೀಚೆಗಷ್ಟೆ ನಿಧನರಾದ ತಮಿಳು ನಟ ತವಸಿ ಸಹ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದೇ ಅವರ ಕೊನೆಯ ಸಿನಿಮಾ.
ರಜನೀಕಾಂತ್ ಅವರು 'ಅನ್ನಾತೆ' ಸಿನಿಮಾದ ನಂತರ ಚಂದ್ರಮುಖಿ 2 ಸಿನಿಮಾದಲ್ಲಿ ಸಹ ನಟಿಸಲಿದ್ದಾರೆ. ಚಂದ್ರಮುಖಿ 2 ಸಿನಿಮಾದಲ್ಲಿ ರಜನೀಕಾಂತ್ ಜೊತೆಗೆ ರಾಘವ್ ಲಾರೆನ್ಸ್ ಸಹ ನಟಿಸಲಿದ್ದಾರೆ. ಪಿ ವಾಸು ಈ ಸಿನಿಮಾ ನಿರ್ದೇಶಿಸಲಿದ್ದಾರೆ.