Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಕೀಯ ಪ್ರವೇಶದ ಬಗ್ಗೆ ರಜನೀಕಾಂತ್ ಮಹತ್ವದ ಹೇಳಿಕೆ
ನಟ ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಕಳೆದ ಕೆಲ ವರ್ಷಗಳಿಂದ ಚರ್ಚೆ ಜೋರಾಗಿ ನಡೆಯುತ್ತಿದೆ. ಇದೇ ವಿಷಯವಾಗಿ ಇಂದು ರಜನೀಕಾಂತ್ ಸಭೆ ನಡೆಸಿದ್ದು, ಸಭೆ ನಂತರ ರಜನೀ ಆಡಿದ ಮಾತುಗಳು ಭಾರಿ ಕುತೂಹಲ ಕೆರಳಿಸಿವೆ.
ರಜನಿಕಾಂತ್ ಇಂದು 'ರಜನಿ ಮಕ್ಕಳ್ ಮುಂದ್ರಂ' ಸಂಘಟನೆಯ ಜಿಲ್ಲಾ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಸಭೆ ನಡೆಸಿದರು. ಈ ಸಭೆಯಲ್ಲಿ ರಾಜಕೀಯ ಪಕ್ಷ ಸ್ಥಾಪನೆ ಮತ್ತು ಪ್ರವೇಶದ ಕುರಿತಾಗಿಯೇ ಚರ್ಚೆ ನಡೆಸಲಾಗಿದೆ.
ಸಭೆಯ ನಂತರ ಮಾಧ್ಯಮಗಳೊಟ್ಟಿಗೆ ಮಾತನಾಡಿದ ರಜನಿಕಾಂತ್, 'ರಾಜಕೀಯ ಪ್ರವೇಶದ ಬಗ್ಗೆ ನನ್ನ ನಿರ್ಧಾರವನ್ನು ಶೀಘ್ರವಾಗಿ ತಿಳಿಸುತ್ತೇನೆ, ನಮ್ಮ ಜಿಲ್ಲಾ ಮುಖಂಡರು, ನನ್ನ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದಾರೆ' ಎಂದು ರಜನೀ ಹೇಳಿದರು.
ಸಭೆಯಲ್ಲಿ ಮಾತನಾಡಿದ್ದ ರಜನೀ, 'ಜನವರಿಯಲ್ಲಿ ಪಕ್ಷವನ್ನು ಘೋಷಿಸಿದರೆ ನೀವು ಸಿದ್ಧರಿದ್ದೀರಾ?' ಎಂಬ ಪ್ರಶ್ನೆಯನ್ನು ಮುಖಂಡರ ಮುಂದಿಟ್ಟಿದ್ದರು, ಇದಕ್ಕೆ ಎಲ್ಲರೂ ಸಿದ್ಧರಿದ್ದೀವೆಂದು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲಿಗೆ ರಜನೀಕಾಂತ್ ಅವರು ತಮ್ಮ ಪಕ್ಷವನ್ನು ಜನವರಿಯಲ್ಲಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ.
Recommended Video
ಕಳೆದ ತಿಂಗಳೇ ರಜನೀಕಾಂತ್ ತಮ್ಮ ರಾಜಕೀಯ ಪ್ರವೇಶವನ್ನು ಅಧಿಕೃತವಾಗಿ ಘೋಷಿಸುತ್ತಾರೆ ಎನ್ನಲಾಗಿತ್ತು. ಆದರೆ ಅವರ ಆರೋಗ್ಯದಲ್ಲಿ ವ್ಯತ್ಯಾಸ ಬಂದ ಕಾರಣ ರಜನೀಕಾಂತ್ ತಡ ಮಾಡಿದ್ದರು ಎನ್ನಲಾಗಿದೆ.