Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಗೆ ವಿಲನ್ ಆಗುವ ಆಫರ್ ರಿಜೆಕ್ಟ್ ಮಾಡಿದ್ರು ರಕ್ಷಿತ್
ಸೂಪರ್ ಸ್ಟಾರ್ ರಜನಿಕಾಂತ್ ಭೇಟಿ ಮಾಡಬೇಕು ಎನ್ನುವುದು ಎಷ್ಟೋ ಕಲಾವಿದರ ಆಸೆ ಆಗುತ್ತಿರುತ್ತದೆ. ಎಷ್ಟೋ ಸ್ಟಾರ್ ಗಳು ಅವರ ಜೊತೆಗೆ ಒಂದು ಸಿನಿಮಾ ಸಿಕ್ಕರೆ ಸಾಕು ಎಂದು ಕಾಯುತ್ತಿದ್ದಾರೆ. ಹೀಗಿರುವಾಗ ಕನ್ನಡ ನಟ ರಕ್ಷಿತ್ ಶೆಟ್ಟಿ ಅವರಿಗೆ ರಜನಿಕಾಂತ್ ಜೊತೆಗೆ ನಟಿಸುವ ಅವಕಾಶ ಹುಡುಕಿಕೊಂಡು ಬಂದಿತ್ತು.
ರಕ್ಷಿತ್ ಶೆಟ್ಟಿಗೆ ರಜನಿಕಾಂತ್ ಜೊತೆಗೆ ನಟಿಸುವ ಚಾನ್ಸ್ ಸಿಕ್ಕರೆ ಬಿಡುವುದುಂಟೆ ಎಂದು ನೀವು ಅಂದುಕೊಳ್ಳಬಹುದು. ಆದರೆ, ತಮಗೆ ಬಂದ ಅವಕಾಶವನ್ನು ರಕ್ಷಿತ್ ಶೆಟ್ಟಿ ನಿರಾಕರಿಸಿದ್ದರು. ರಜನಿಕಾಂತ್ 'ಪೆಟ್ಟಾ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟಿಸುವ ಅವಕಾಶ ಬಂದಿದ್ದು, ಆದರೆ, ಒಂದು ಕಾರಣದಿಂದ ಅವರು ಆ ಸಿನಿಮಾದಲ್ಲಿ ನಟಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರಂತೆ.
'ಅವನೇ ಶ್ರೀಮನ್ನಾರಾಯಣ' ಟ್ರೈಲರ್ ನೋಡಿ ಸ್ಟಾರ್ ನಟರು ಹೇಳಿದ್ದೇನು?
ಸದ್ಯ, 'ಅವನೇ ಶ್ರೀಮನ್ನಾರಾಯಣ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟಿಸುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ತಮಿಳು ಸಂದರ್ಶನ ಮಾತನಾಡಿರುವ ರಕ್ಷಿತ್ ತಮಿಳು ಆಫರ್ ವಿಷಯವನ್ನು ಹಂಚಿಕೊಂಡಿದ್ದಾರೆ. ಮುಂದೆ ಓದಿ...
'ಪೆಟ್ಟಾ' ಸಿನಿಮಾ ಆಫರ್ ಬಂದಿತ್ತು
ರಜನಿಕಾಂತ್ ನಾಯಕನಾಗಿ ನಟಿಸಿದ 'ಪೆಟ್ಟಾ' ಸಿನಿಮಾದಲ್ಲಿ ನಟಿಸುವ ಅವಕಾಶ ರಕ್ಷಿತ್ ಶೆಟ್ಟಿಗೆ ಬಂದಿತ್ತು. 'ಪೆಟ್ಟಾ' ಚಿತ್ರದ ನಿರ್ದೇಶಕ ಕಾರ್ತಿಕ್ ಸುಬ್ಬರಾಜು ಹಾಗೂ ರಕ್ಷಿತ್ ಶೆಟ್ಟಿ ಇಬ್ಬರು ಒಳ್ಳೆಯ ಸ್ನೇಹಿತರು. ಹೀಗಾಗಿ, ತಮ್ಮ ಸಿನಿಮಾದ ಒಂದು ಪಾತ್ರಕ್ಕಾಗಿ ರಕ್ಷಿತ್ ಶೆಟ್ಟಿರನ್ನು ಸಂಪರ್ಕ ಮಾಡಿದ್ದರು. ಆದರೆ, ರಕ್ಷಿತ್ ಶೆಟ್ಟಿ ಈ ಸಿನಿಮಾವನ್ನು ನಿರಾಕರಿಸಿದರು.
'ಶ್ರೀಮನ್ನಾರಾಯಣ' ಟ್ರೈಲರ್ ರಿಲೀಸ್ ವೇಳೆ ರಕ್ಷಿತ್ ಕಣ್ಣೀರಿಟ್ಟಿದ್ದೇಕೆ?
'ಅವನೇ ಶ್ರೀಮನ್ನಾರಾಯಣ' ಚಿತ್ರದ ಕೆಲಸ ಇತ್ತು
'ಪೆಟ್ಟಾ' ಚಿತ್ರದ ಸಮಯದಲ್ಲಿಯೇ ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾದಲ್ಲಿ ಬ್ಯುಸಿ ಇದ್ದರು. 'ಅವನೇ ಶ್ರೀಮನ್ನಾರಾಯಣ' ತಮ್ಮ ಕನಸಿನ ಸಿನಿಮಾ ಆಗಿರುವ ಕಾರಣ ಅದಕ್ಕೆ ಹೆಚ್ಚು ಶ್ರಮವಹಿಸಿ ಕೆಲಸ ಮಾಡುತ್ತಿದ್ದರು. ಈ ಸಿನಿಮಾದ ಸಮಯದಲ್ಲಿಯೇ 'ಪೆಟ್ಟಾ'ದಲ್ಲಿ ನಟಿಸಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ರಕ್ಷಿತ್ ಆ ಸಿನಿಮಾದಿಂದ ಹಿಂದೆ ಬಂದರು.
'ಅವನೇ ಶ್ರೀಮನ್ನಾರಾಯಣ' ಟ್ರೈಲರ್ ಕಂಡು 'ಪೇಟಾ' ನಿರ್ದೇಶಕ ಹೇಳಿದ್ದೇನು?
ರಕ್ಷಿತ್ ಜಾಗಕ್ಕೆ ವಿಜಯ್ ಸೇತುಪತಿ ಬಂದ್ರು
ರಕ್ಷಿತ್ ಶೆಟ್ಟಿ ನಟಿಸಬೇಕಾಗಿದ್ದ ಪಾತ್ರಕ್ಕೆ ನಂತರ ವಿಜಯ್ ಸೇತುಪತಿಗೆ ಆಫರ್ ನೀಡಲಾಗಿತ್ತು. ಕಾರ್ತಿಕ್ ಸುಬ್ಬರಾಜು ಅವಕಾಶವನ್ನು ವಿಜಯ್ ಸೇತುಪತಿ ಒಪ್ಪಿಕೊಂಡರು. ಸಿನಿಮಾದಲ್ಲಿ ವಿಲನ್ ಆಗಿ ಕಾಣಿಸಿಕೊಂಡರು. ಈ ಸಿನಿಮಾ ವಿಜಯ್ ಸೇತುಪತಿ ಮತ್ತಷ್ಟು ಹೆಸರು, ಅಭಿಮಾನಿ ಬಹಳವನ್ನು ತಂದುಕೊಟ್ಟಿತು. 'ಪೆಟ್ಟಾ' ಸಿನಿಮಾ ಹಿಟ್ ಆಯ್ತು.
'ಶ್ರೀಮನ್ನಾರಾಯಣ' ಟ್ರೈಲರ್ ನಲ್ಲಿ ಹಾಲಿವುಡ್ ಚಿತ್ರದ 'ನೆರಳು': ಇದು ಕಾಪಿನಾ? ಸ್ಫೂರ್ತಿನಾ?
ಮುಂದೆ ಒಳ್ಳೆಯ ಅವಕಾಶ ಸಿಗಬಹುದು
ರಜನಿಕಾಂತ್ ಅವರ ಜೊತೆಗೆ ಕಾಣಿಸಿಕೊಳ್ಳುವುದು ಒಳ್ಳೆಯ ಅವಕಾಶ. ಆದರೆ, ಆ ಸಮಯದಲ್ಲಿ ನಾನು ಆ ಸಿನಿಮಾ ಮಾಡಿದ್ದರೆ, 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಇನ್ನಷ್ಟು ತಡ ಆಗುತ್ತಿತ್ತು. ಆ ಸಿನಿಮಾಗಾಗಿ ನಾನು ಅಭಿಮಾನಿಗಳನ್ನು ಮತ್ತಷ್ಟು ಕಾಯಿಸಲು ಇಷ್ಟ ಪಡಲಿಲ್ಲ. ಹಾಗಾಗಿ ಆ ಅವಕಾಶ ಬಿಟ್ಟೆ. ಮುಂದೆ ಇಂತಹ ಒಳ್ಳೆಯ ಅವಕಾಶ ಮತ್ತೆ ಸಿಗಬಹುದು ಎಂದು ರಕ್ಷಿತ್ ತಿಳಿಸಿದ್ದಾರೆ.