Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಿವಂಗತ ನಟ ವಿವೇಕ್ಗೆ ವಿಶೇಷ ಗೌರವ ಸಲ್ಲಿಸಿದ ರಮ್ಯಾ ಪಾಂಡಿಯನ್
ತಮಿಳು ಹಾಸ್ಯ ನಟ ವಿವೇಕ್ ಅವರ ಸಾವಿನ ಸುದ್ದಿ ಇಡೀ ಚಿತ್ರರಂಗಕ್ಕೆ ಆಘಾತ ತಂದಿತ್ತು. ವಿವೇಕ್ ಅವರು ಇನ್ನಿಲ್ಲ ಎನ್ನುವುದನ್ನೂ ಈಗಲೂ ಊಹಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಸ್ನೇಹಿತರು, ಆಪ್ತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ವಿವೇಕ್ ಅವರು ಸಿನಿಮಾಗಳಲ್ಲಿ ನಟಿಸುವುದರ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ವಿಶೇಷ ಸಂಗತಿಯೆಂದರೆ ತಮಿಳುನಾಡಿನಾದ್ಯಂತ ಸುಮಾರು 33 ಲಕ್ಷ ಮರಗಳನ್ನು ನೆಡುವ ಕೆಲಸದಲ್ಲಿ ವಿವೇಕ್ ಪ್ರಮುಖ ಪಾತ್ರ ವಹಿಸಿದ್ದರು.
Breaking: ಆಸ್ಪತ್ರೆಯಲ್ಲಿದ್ದ ತಮಿಳು ಹಾಸ್ಯ ನಟ ವಿವೇಕ್ ನಿಧನ
ವಿವೇಕ್ ಅವರ ಈ ಸಾಮಾಜಿಕ ಕಾರ್ಯದಿಂದ ಸ್ಫೂರ್ತಿಯಾಗಿರುವ ನಟಿ ರಮ್ಯಾ ಪಾಂಡಿಯನ್ ಈಗ ದಿವಂಗತ ನಟನಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.
ವಿವೇಕ್ ಅವರ ಅಗಲಿಕೆ ಹಿನ್ನೆಲೆ ತಿರುವಳ್ಳೂರ್ ಎಸ್ ಪಿ ಕಚೇರಿಯಲ್ಲಿ 59 ಸಸಿಗಳನ್ನು ನೆಡುವ ಮೂಲಕ ನಟಿ ರಮ್ಯಾ ಪಾಂಡಿಯನ್ ಕೃತಜ್ಞತೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರಮ್ಯಾ ''ವಿವೇಕ್ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಮತ್ತು ಅವರು ಬಿಟ್ಟುಹೋದ ಪರಂಪರೆಯನ್ನು ಮುಂದುವರೆಸುವ ಭರವಸೆ ನೀಡುತ್ತಿದ್ದೇನೆ. ಅವರು ಯಾವಾಗಲೂ ನಮ್ಮ ಹೃದಯದಲ್ಲಿ ವಾಸಿಸುತ್ತಾರೆ'' ಎಂದರು.
ಈ ವೇಳೆ ತಿರುವಳ್ಳೂರ್ ಎಸ್ಪಿ ಅರವಿಂದನ್ ಅವರು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Recommended Video
ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ರಮ್ಯಾ ಪಾಂಡಿಯನ್ 2015ರಲ್ಲಿ 'ಡಮ್ಮಿ ತಪ್ಪಾಸು' ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದರು. ನಂತರ 'ಜೋಕರ್' ಮತ್ತು 'ಆನ್ ದೇವತೈ' ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಪ್ರಸ್ತುತ 2ಡಿ ಎಂಟರ್ಟೈನ್ಮೆಂಟ್ ಸಂಸ್ಥೆ ನಿರ್ಮಾಣದಲ್ಲಿ ಹೊಸ ಸಿನಿಮಾ ಮಾಡ್ತಿದ್ದಾರೆ. ವೆಬ್ ಸಿರೀಸ್ನಲ್ಲಿ ನಟಿಸಿದ್ದಾರೆ. ಬಿಗ್ ಬಾಸ್ 4ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.