Don't Miss!
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೂಪರ್ ಸ್ಟಾರ್ ರಜನಿಕಾಂತ್ ಕಂಡಕ್ಟರ್: ಹಳೇ ಫೋಟೋ ವೈರಲ್
ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ನಟ ಆಗುವುದಕ್ಕೂ ಮೊದಲು ಬಸ್ ಕಂಡಕ್ಟರ್ ಆಗಿದ್ದರು. ಇಂದಿನ ಜನರೇಷನ್ ಅವರು ಈ ವಿಷಯವನ್ನು ಕೇಳಿ ಅಥವಾ ಓದಿ ತಿಳಿದಿರಬಹುದು. ಆದ್ರೆ, ಕಣ್ಣಾರೆ ನೋಡುವ ಅವಕಾಶ ಇರಲಿಲ್ಲ.
ಇದೀಗ, ರಜನಿಕಾಂತ್ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಕ್ಲಿಕ್ಕಿಸಿರುವ ಹಳೇಯ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋದಲ್ಲಿ ಬಸ್ ಎದುರುಗಡೆ ನಾಲ್ಕು ಜನ ನಿಂತಿದ್ದು, ಈ ಪೈಕಿ ಒಬ್ಬರು ರಜನಿಕಾಂತ್.
'ಬಾಷಾ' ಶೂಟಿಂಗ್ ಬಳಿಕ ರಜನಿ-ನಾನಾ ಪಾಟೇಕರ್ ನಡುವೆ ಮುಂಬೈನಲ್ಲಿ ನಡೆದಿದ್ದೇನು?
ಭಾರತೀಯ ಚಿತ್ರರಂಗ ಮಾತ್ರವಲ್ಲ ಜಗತ್ತಿನಾದ್ಯಂತ ರಜನಿಕಾಂತ್ ಅಭಿಮಾನಿಗಳು ಇದ್ದಾರೆ. ಒಂದು ಸಮಯದಲ್ಲಿ ಭಾರತೀಯ ಸಿನಿ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟ ರಜನಿಕಾಂತ್.
ಬಸ್ ಕಂಡಕ್ಟರ್ ಆಗಿದ್ದವರು ಇಂದು ಸೂಪರ್ ಸ್ಟಾರ್ ಪಟ್ಟದಲ್ಲಿದ್ದಾರೆ ಅಂದ್ರೆ ಅದು ಅನೇಕರಿಗೆ ಸ್ಫೂರ್ತಿ. ಅಂದ್ಹಾಗೆ, ರಜನಿಕಾಂತ್ ಮೂಲ ಹೆಸರು ಶಿವಾಜಿ ರಾವ್ ಗಾಯಕ್ವಾಡ್. ಬೆಂಗಳೂರಿನ ಮರಾಠಿ ಕುಟುಂಬದಲ್ಲಿ ಜನಿಸಿದ್ದ ರಜನಿ, ಜೀವನಕ್ಕಾಗಿ ಕೂಲಿ, ಕಾರ್ಪೆಂಟರ್ ವೃತ್ತಿ ಮಾಡಿದ್ದಾರೆ.
ಇದಾದ ಬಳಿಕ ಬಿಟಿಎಸ್ ಬಸ್ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಕಂಡಕ್ಟರ್ ವೃತ್ತಿ ಮಾಡಬೇಕಾದರೆ ಜೊತೆ ಜೊತೆಗೆ ನಾಟಕಗಳಲ್ಲಿಯೂ ನಟಿಸುತ್ತಿದ್ದರು. ನಂತರ ಸಿನಿಮಾ ಮೇಲಿನ ಆಸ್ತಿಯಿಂದ ಮದ್ರಾಸಿಗೆ ಹೋಗಿ ನಟನೆಯಲ್ಲಿ ಡಿಪ್ಲೋಮಾ ಸಹ ಪಡೆದರು.
ಆ ನಂತರ 1975ರಲ್ಲಿ ಕೆ ಬಾಲಚಂದಿರ್ ನಿರ್ದೇಶನದ ಅಪೂರ್ವ ರಾಗಂಗಳ್ ಚಿತ್ರದ ಮೂಲಕ ಪ್ರಪ್ರಥಮ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ಕಮಲ್ ಹಾಸನ್ ನಾಯಕರಾಗಿದ್ದ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದ ರಜನಿ ನಂತರ ಕನ್ನಡದಲ್ಲಿ ಸಿನಿ ಜರ್ನಿ ಆರಂಭಿಸಿದರು.
Recommended Video
ಕನ್ನಡ, ತೆಲುಗು ಮತ್ತು ತಮಿಳು ಇಂಡಸ್ಟ್ರಿಯಲ್ಲಿ ಹೆಚ್ಚು ಸಿನಿಮಾಗಳನ್ನು ಮಾಡಿದರು. ದಿನಕಳೆದಂತೆ ತಮಿಳಿನಲ್ಲಿ ಶಾಶ್ವತ ನೆಲೆ ಕಂಡರು. ಸೂಪರ್ ಸ್ಟಾರ್ ಎಂಬ ಪಟ್ಟ ಸಹ ಅಲಂಕರಿಸಿದರು.