Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ಸಿನಿಮಾದ ಚಿತ್ರೀಕರಣ ಮುಗಿಸಿದ ಸತೀಶ್ ನೀನಾಸಂ
ಕನ್ನಡದ ನಟ ಸತೀಶ್ ನೀನಾಸಂ ಸದ್ದಿಲ್ಲದೆ ತಮ್ಮ ಚೊಚ್ಚಿಲ ತಮಿಳಿನ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ.
ನಟ ಸತೀಶ್ ನೀನಾಸಂ ಅವರು ಈ ವರ್ಷದ ಆರಂಭದಲ್ಲಿ 'ಪಗೈವಾನುಕು ಅರುಲ್ವಾಯ್' ತಮಿಳು ಸಿನಿಮಾದ ಎರಡನೇ ಶೆಡ್ಯೂಲ್ನಲ್ಲಿ ನಟಿಸಲು ಆರಂಭಿಸಿದ್ದರು. ಖ್ಯಾತ ನಟ ಶಶಿಕುಮಾರ್ ಮುಖ್ಯ ಭೂಮಿಕೆಯಲ್ಲಿರುವ ಈ ಸಿನಿಮಾದಲ್ಲಿ ನಟ ಸತೀಶ್ ಅವರದ್ದೂ ಸಹ ಪ್ರಧಾನ ಪಾತ್ರವೇ.
ಸಿನಿಮಾದ ಚಿತ್ರೀಕರಣ ಮುಗಿಸಿರುವ ಖುಷಿಯನ್ನು ಚಿತ್ರದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ನಟ ಸತೀಶ್ ಅವರು ಹಂಚಿಕೊಂಡಿದ್ದಾರೆ. ಶಶಿಕುಮಾರ್, ಸತೀಶ್ ನೀನಾಸಂ ಜೊತೆಗೆ ಬಿಂದು ಮಾಧವಿ ಹಾಗೂ ವಾಣಿ ಭೋಜನ್ ಅವರು ಸಿನಿಮಾದಲ್ಲಿ ನಟಿಸಿದ್ದಾರೆ.
''ಪಗೈವಾನುಕು ಅರುಲ್ವಾಯ್' ಸಿನಿಮಾದ ಚಿತ್ರೀಕರಣ ಮುಗಿದಿದೆ. ನಿಮ್ಮೊಂದಿಗೆ ಕೆಲಸ ಮಾಡಿದ್ದು ಅದ್ಭುತವಾದ ಅನುಭವ. ನನ್ನನ್ನು ಆತ್ಮೀಯವಾಗಿ ಸ್ವಾಗತಿಸಿದ ಚಿತ್ರತಂಡದ ಎಲ್ಲರಿಗೂ ಧನ್ಯವಾದ' ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ ನಟ ನೀನಾಸಂ ಸತೀಶ್.
ಈ ಸಿನಿಮಾದ ಕತೆಯು ಷೇಕ್ಸ್ಫಿಯರ್ ಅವರ ಕತೆಯಿಂದ ಪ್ರೇರಣೆಗೊಂಡಿದೆ ಎನ್ನಲಾಗುತ್ತಿದ್ದು. ನೀನಾಸಂ ಸತೀಶ್ ಅವರು ಜೈಲು ಖೈದಿಯೊಬ್ಬನ ಪಾತ್ರದಲ್ಲಿ ನಟಿಸಿದ್ದಾರೆ ಎನ್ನಲಾಗುತ್ತಿದೆ.
Recommended Video
ಕನ್ನಡದ 'ಪೆಟ್ರೊಮ್ಯಾಕ್ಸ್' ಸಿನಿಮಾವನ್ನು ಸತೀಶ್ ನೀನಾಸಂ ಈಗಾಗಲೇ ಮುಗಿಸಿದ್ದಾರೆ. ನೀರ್ದೋಸೆ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಸಿನಿಮಾದ ಬಿಡುಗಡೆ ದಿನಾಂಕ ಶೀಘ್ರದಲ್ಲಿಯೇ ಘೋಷಣೆ ಆಗಲಿದೆ.