Don't Miss!
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ಸಿನಿಮಾದ ಚಿತ್ರೀಕರಣ ಮುಗಿಸಿದ ಸತೀಶ್ ನೀನಾಸಂ
ಕನ್ನಡದ ನಟ ಸತೀಶ್ ನೀನಾಸಂ ಸದ್ದಿಲ್ಲದೆ ತಮ್ಮ ಚೊಚ್ಚಿಲ ತಮಿಳಿನ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ.
ನಟ ಸತೀಶ್ ನೀನಾಸಂ ಅವರು ಈ ವರ್ಷದ ಆರಂಭದಲ್ಲಿ 'ಪಗೈವಾನುಕು ಅರುಲ್ವಾಯ್' ತಮಿಳು ಸಿನಿಮಾದ ಎರಡನೇ ಶೆಡ್ಯೂಲ್ನಲ್ಲಿ ನಟಿಸಲು ಆರಂಭಿಸಿದ್ದರು. ಖ್ಯಾತ ನಟ ಶಶಿಕುಮಾರ್ ಮುಖ್ಯ ಭೂಮಿಕೆಯಲ್ಲಿರುವ ಈ ಸಿನಿಮಾದಲ್ಲಿ ನಟ ಸತೀಶ್ ಅವರದ್ದೂ ಸಹ ಪ್ರಧಾನ ಪಾತ್ರವೇ.
ಸಿನಿಮಾದ ಚಿತ್ರೀಕರಣ ಮುಗಿಸಿರುವ ಖುಷಿಯನ್ನು ಚಿತ್ರದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ನಟ ಸತೀಶ್ ಅವರು ಹಂಚಿಕೊಂಡಿದ್ದಾರೆ. ಶಶಿಕುಮಾರ್, ಸತೀಶ್ ನೀನಾಸಂ ಜೊತೆಗೆ ಬಿಂದು ಮಾಧವಿ ಹಾಗೂ ವಾಣಿ ಭೋಜನ್ ಅವರು ಸಿನಿಮಾದಲ್ಲಿ ನಟಿಸಿದ್ದಾರೆ.
''ಪಗೈವಾನುಕು ಅರುಲ್ವಾಯ್' ಸಿನಿಮಾದ ಚಿತ್ರೀಕರಣ ಮುಗಿದಿದೆ. ನಿಮ್ಮೊಂದಿಗೆ ಕೆಲಸ ಮಾಡಿದ್ದು ಅದ್ಭುತವಾದ ಅನುಭವ. ನನ್ನನ್ನು ಆತ್ಮೀಯವಾಗಿ ಸ್ವಾಗತಿಸಿದ ಚಿತ್ರತಂಡದ ಎಲ್ಲರಿಗೂ ಧನ್ಯವಾದ' ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ ನಟ ನೀನಾಸಂ ಸತೀಶ್.
ಈ ಸಿನಿಮಾದ ಕತೆಯು ಷೇಕ್ಸ್ಫಿಯರ್ ಅವರ ಕತೆಯಿಂದ ಪ್ರೇರಣೆಗೊಂಡಿದೆ ಎನ್ನಲಾಗುತ್ತಿದ್ದು. ನೀನಾಸಂ ಸತೀಶ್ ಅವರು ಜೈಲು ಖೈದಿಯೊಬ್ಬನ ಪಾತ್ರದಲ್ಲಿ ನಟಿಸಿದ್ದಾರೆ ಎನ್ನಲಾಗುತ್ತಿದೆ.
Recommended Video
ಕನ್ನಡದ 'ಪೆಟ್ರೊಮ್ಯಾಕ್ಸ್' ಸಿನಿಮಾವನ್ನು ಸತೀಶ್ ನೀನಾಸಂ ಈಗಾಗಲೇ ಮುಗಿಸಿದ್ದಾರೆ. ನೀರ್ದೋಸೆ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಸಿನಿಮಾದ ಬಿಡುಗಡೆ ದಿನಾಂಕ ಶೀಘ್ರದಲ್ಲಿಯೇ ಘೋಷಣೆ ಆಗಲಿದೆ.