Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಲಿಸದ ಚಿಕಿತ್ಸೆ: ನೃತ್ಯ ನಿರ್ದೇಶಕ ಶಿವಶಂಕರ್ ನಿಧನ
ಕೊರೊನಾ ಕಾರಣದಿಂದಾಗಿ ಕಳೆದ ಒಂದು ವಾರದಿಂದ ಹೈದರಾಬಾದ್ ಎಐಜಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜನಪ್ರಿಯ ನೃತ್ಯ ನಿರ್ದೇಶಕ ಶಿವಶಂಕರ್ (72) ನಿನ್ನೆ (ನವೆಂಬರ್ 28) ರಂದು ನಿಧನ ಹೊಂದಿದ್ದಾರೆ.
ಕೊರೊನಾ ಪಾಸಿಟಿವ್ ಆಗಿದ್ದ ಶಿವಶಂಕರ್ ಅವರ ಆರೋಗ್ಯ ತೀರಾ ಹದಗೆಟ್ಟಿತ್ತು, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಶಿವಶಂಕರ್ ಕುಟುಂಬದ ಬಹುತೇಕ ಸದಸ್ಯರಿಗೆ ಕೊರೊನಾ ಆಗಿತ್ತು, ಶಿವಶಂಕರ್ ಮೊದಲ ಪುತ್ರನಿಗೂ ಆರೋಗ್ಯ ವಿಷಮ ಸ್ಥಿತಿಯಲ್ಲಿದ್ದು ಅವರಿಗೂ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಮಾರು 800 ಕ್ಕೂ ಹೆಚ್ಚು ಸಿನಿಮಾಗಳಿಗೆ ಕೆಲಸ ಮಾಡಿರುವ ಶಿವಶಂಕರ್ ಅವರ ಕುಟುಂಬವು ಆರ್ಥಿಕ ಸಹಾಯಕ್ಕೆ ಮನವಿ ಮಾಡಿತ್ತು. ನೃತ್ಯ ನಿರ್ದೇಶಕರ ಸಂಘ, ನಟ ಸೋನು ಸೂದ್, ನಟ ಮೆಗಾಸ್ಟಾರ್ ಚಿರಂಜೀವಿ, ನಟ ಧನುಶ್ ಅವರುಗಳು ನೆರವಿನ ಹಸ್ತ ಚಾಚಿದ್ದರು. ಆದರೆ ಶಿವಶಂಕರ್ ಅವರನನ್ನು ಉಳಿಸಿಕೊಳ್ಳಲು ಆಗಲಿಲ್ಲ.
ಕೊರೊನಾದಿಂದಾಗಿ ಶಿವಶಂಕರ್ ಅವರ ಶ್ವಾಸಕೋಶಕ್ಕೆ ತೀವ್ರ ಹಾನಿಯಾಗಿತ್ತು, ಇದಲ್ಲದೆ ಅವರ ಇತರೆ ಅಂಗಾಂಗಗಳು ಸಹ ವಿಫಲವಾದವು ಹಾಗಾಗಿ ಶಿವಶಂಕರ್ ನಿಧನರಾದರು ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಇನ್ನು ಶಿವಶಂಕರ್ ಅವರ ಪ್ರಥಮ ಪುತ್ರ ವಿಜಯ್ ಶಂಕರ್ ಆರೋಗ್ಯ ಸಹ ಗಂಭೀರ ಸ್ಥಿತಿಯಲ್ಲಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಶಿವಶಂಕರ್ ಪತ್ನಿ ಸುಗನ್ಯಾಗೆ ಸಹ ಕೋವಿಡ್ ಆಗಿದ್ದು ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಶಂಕರ್ ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಜನಪ್ರಿಯ ನೃತ್ಯ ನಿರ್ದೇಶಕ. ಈವರೆಗೆ ಸುಮಾರು 800 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನೃತ್ಯ ನಿರ್ದೇಶನಕ್ಕಾಗಿ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಕೆಲವು ಅತ್ಯುತ್ತಮ ಸಿನಿಮಾಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. 'ಮಗಧೀರ' ಸಿನಿಮಾದ 'ಧೀರ ಧೀರ ಧೀರ ಮನಸಾಗಲೇದುರಾ...' ಹಾಡಿಗೆ ಮಾಡಿದ್ದ ನೃತ್ಯ ನಿರ್ದೇಶನಕ್ಕೆ ಶಿವಶಂಕರ್ಗೆ ರಾಷ್ಟ್ರಪ್ರಶಸ್ತಿ ಧಕ್ಕಿದೆ. ಕನ್ನಡತಿ ಛಾಯಾಸಿಂಗ್, ಧನುಶ್ ಒಟ್ಟಿಗೆ ಕುಣಿದಿದ್ದ 'ಮನ್ಮತ ರಾಜ' ಹಾಡಿಗೆ ಇವರೇ ನೃತ್ಯ ನಿರ್ದೇಶನ ಮಾಡಿದ್ದರು. ಚಿರಂಜೀವಿ ಡ್ಯಾನ್ಸ್ ಸ್ಟಾರ್ ಆಗಿ ಗುರುತು ಪಡೆದುಕೊಂಡ ಹಲವು ಸಿನಿಮಾಗಳಿಗೆ ಶಿವಶಂಕರ್ ನೃತ್ಯ ನಿರ್ದೇಶನ ಮಾಡಿದ್ದಾರೆ.
ಈಗಿನ ಜನಪ್ರಿಯ ನೃತ್ಯ ನಿರ್ದೇಶಕ ಮತ್ತು ನಟ ರಾಘವ್ ಲಾರೆನ್ಸ್ಗೆ ಗುರು ಸಹ ಆಗಿರುವ ಶಿವ ಶಂಕರ್ ತಮಿಳು ಹಾಗೂ ತೆಲುಗಿನಲ್ಲಿ ಹಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ. ಜೊತೆಗೆ ಕೆಲವು ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಸಹ ಭಾಗವಹಿಸಿದ್ದಾರೆ. ಮಹಿಳೆಯರಂತೆ ಮಾತನಾಡುವ, ನಡೆಯುವ ಅವರ ಹಾವ ಭಾವ ಅಭಿಮಾನಿಗಳಿಗೆ ಬಹಳ ಇಷ್ಟವಾಗುತ್ತಿತ್ತು.