Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಸ್.ಪಿ.ಬಾಲಸುಬ್ರಹ್ಮಣ್ಯಂ ಕೊರೊನಾ ವೈರಸ್ ನೆಗೆಟಿವ್
ಕೊರೊನಾ ಸೋಂಕಿಗೆ ತುತ್ತಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆ ಕಾಣಿಸಿಕೊಂಡಿದೆ.
Recommended Video
ಅವರ ಇತ್ತೀಚಿನ ಕೊರೊನಾ ವೈರಸ್ ಪರೀಕ್ಷಾ ವರದಿ ಬಂದಿದ್ದು, ಕೊರೊನಾ ವೈರಸ್ ಎಸ್ಪಿ ಬಾಲಸುಬ್ರಹ್ಮಣ್ಯಂ ದೇಹ ಬಿಟ್ಟು ತೊಲಗಿದೆ. ಅವರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.
ಕೊರೊನಾ ನೆಗೆಟಿವ್ ಬಂದಿದೆಯಾದರೂ, ಎಸ್ಪಿ ಬಾಲಸುಬ್ರಹ್ಮಣ್ಯಂ ಅವರನ್ನು ತೀವ್ರ ನಿಗಾಘಟಕದಲ್ಲಿಯೇ ಇಟ್ಟು ಚಿಕಿತ್ಸೆ ಮುಂದುವರೆಸಲಾಗುತ್ತಿದೆ.
ಈ ವಿಷಯವನ್ನು ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ.ಚರಣ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 'ಕೊರೊನಾ ವರದಿ ನೆಗೆಟಿವ್ ಬಂದಿದೆ ಆದರೆ, ಅವರ ಶ್ವಾಸಕೋಶಗಳು ಪೂರ್ಣ ಆರೋಗ್ಯಯುತವಾಗುವವರೆಗೂ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ' ಎಂದು ಹೇಳಿದ್ದಾರೆ ಚರಣ್.
ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ ಎಸ್ಪಿಬಿ
ಎಸ್.ಬಿ.ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ದಿಂದ ಚೇತರಿಸಿಕೊಂಡಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಶ್ವಾಸಕೋಶಗಳು ಮೊದಲಿನ ಸ್ಥಿತಿಗೆ ಬರುತ್ತಿವೆ. ಅವರು ಪೂರ್ಣ ಆರೋಗ್ಯವಂತರಾಗುವ ವರೆಗೂ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ ಎಂದಿದ್ದಾರೆ ಚರಣ್.
ಕ್ರಿಕೆಟ್, ಟೆನ್ನಿಸ್ ನೋಡುತ್ತಿದ್ದಾರೆ
ಆಸ್ಪತ್ರೆಯಲ್ಲಿಯೇ ಅವರು ಸಕ್ರಿಯವಾಗಿದ್ದಾರೆ. ಬರವಣಿಗೆ ಮಾಡುತ್ತಿದ್ದಾರೆ. ಅವರ ಇಷ್ಟದ ಕ್ರಿಕೆಟ್ ಹಾಗೂ ಟೆನ್ನಿಸ್ ಮ್ಯಾಚ್ಗಳನ್ನು ಆಸ್ಪತ್ರೆಯಲ್ಲಿದ್ದುಕೊಂಡೇ ನೋಡುತ್ತಿದ್ದಾರೆ. ಐಪಿಎಲ್ ಪ್ರಾರಂಭವಾಗಲು ಎಸ್ಪಿಬಿ ಕಾಯುತ್ತಿದ್ದಾರೆಂದು ಚರಣ್ ಹೇಳಿದ್ದಾರೆ.
ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ
ಕೆಲವು ದಿನಗಳ ಹಿಂದಷ್ಟೆ ಅಪ್ಪ-ಅಮ್ಮನ ವಿವಾಹ ವಾರ್ಷಿಕೋತ್ಸವ ಇತ್ತು ಅಂದು ಆಸ್ಪತ್ರೆಯಲ್ಲಿಯೇ ಸಣ್ಣದಾಗಿ ಸಂಭ್ರಮಿಸಿದೆವು. ಅವರು ಸಕ್ರಿಯರಾಗಿದ್ದಾರೆ, ಎಲ್ಲರೊಂದಿಗೆ ಮಾತನಾಡುತ್ತಿದ್ದಾರೆ. ಅವರಿಗೆ ಬರುತ್ತಿರುವ ಸಂದೇಶಗಳಿಗೆ ಪ್ರತಿಕ್ರಿಯಿಸುತ್ತಿದ್ದಾರೆ ಎಂದರು ಚರಣ್.
ಫಲಿಸಿದ ಪ್ರಾರ್ಥನೆ
ಎಸ್.ಬಿ.ಬಾಲಸುಬ್ರಹ್ಮಣ್ಯಂ ಅವರು ಶೀಘ್ರವಾಗಿ ಗುಣಮುಖವಾಗಲಿ ಎಂದು ಕನ್ನಡ ಚಿತ್ರರಂಗದ ಸದಸ್ಯರು ಸೇರಿದಂತೆ ಹಲವಾರು ಸ್ಟಾರ್ ನಟ-ನಟಿಯರು, ಗಾಯಕರು ಪ್ರಾರ್ಥಿಸಿದ್ದರು. ಎಲ್ಲರ ಪ್ರಾರ್ಥನೆ ಫಲಿಸಿದ್ದು, ಎಸ್ಪಿಬಿ ಗುಣಮುಖವಾಗುತ್ತಿದ್ದಾರೆ.