Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಿರಕಿ ಹೊಡೆದ 'ಆ' ಸುದ್ದಿ ಸುಳ್ಳು ಎಂದ ಕಿಚ್ಚ ಸುದೀಪ್.!
Recommended Video
ಯಾವುದೇ ಪಾತ್ರ ಆದರೂ ಅದನ್ನ ನೀರು ಕುಡಿದಷ್ಟೇ ಸಲೀಸಾಗಿ ನಿಭಾಯಿಸುವುದರಲ್ಲಿ ಕಿಚ್ಚ ಸುದೀಪ್ ಎತ್ತಿದ ಕೈ. ಅಷ್ಟಿಲ್ದೇ ಅವರನ್ನ 'ಅಭಿನಯ ಚಕ್ರವರ್ತಿ' ಅಂತ ಕರೆಯುತ್ತಾರಾ ಹೇಳಿ.?!
'ಈಗ' ಸೇರಿದಂತೆ ಪರಭಾಷೆಯ ಹಲವು ಸಿನಿಮಾಗಳಲ್ಲಿ ಕಿಚ್ಚ ಸುದೀಪ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ತೆರೆಗೆ ಬಂದ 'ದಬಾಂಗ್-3' ಚಿತ್ರದಲ್ಲೂ ಸುದೀಪ್ ನೆಗೆಟಿವ್ ರೋಲ್ ನಲ್ಲಿ ಮಿಂಚಿದ್ದರು. ಇದರ ಬೆನ್ನಲ್ಲೇ ತಮಿಳು ಚಿತ್ರವೊಂದರಲ್ಲೂ ಸುದೀಪ್ 'ಕೇಡಿ'ಯಾಗಲಿದ್ದಾರೆ ಎಂಬ ಗುಸುಗುಸು ಎಲ್ಲೆಡೆ ಗಿರಕಿ ಹೊಡೆದಿತ್ತು.
ಕಾಲಿವುಡ್ ನಟ ಸಿಲಂಬರಸನ್ ಅಭಿನಯದ 'ಮಾನಾಡು' ಚಿತ್ರದಲ್ಲಿ ಸುದೀಪ್ ವಿಲನ್ ಆಗಿ ಆಕ್ಟ್ ಮಾಡ್ತಾರಂತೆ. ಚಿತ್ರದ ನಿರ್ದೇಶಕರು ಈಗಾಗಲೇ ಸುದೀಪ್ ರನ್ನ ಭೇಟಿ ಮಾಡಿ, ಕಥೆ ಹೇಳಿದ್ದಾರಂತೆ. ಪಾತ್ರವನ್ನ ಮೆಚ್ಚಿರುವ ಸುದೀಪ್ ಆಫರ್ ನ ಒಪ್ಪಿಕೊಂಡಿದ್ದಾರಂತೆ ಎಂಬ ಅಂತೆ-ಕಂತೆ ರೆಕ್ಕೆ ಪುಕ್ಕ ಕಟ್ಟಿಕೊಂಡು ಎಲ್ಲಾ ಕಡೆ ಹರಿದಾಡಿತ್ತು.
ಸ್ಪೆಷಲ್ ಗಿಫ್ಟ್ ಕೊಟ್ಟ ಸಲ್ಮಾನ್ ಪ್ರೀತಿಗೆ ಮನಸಾರೆ ಧನ್ಯವಾದ ತಿಳಿಸಿದ ಸುದೀಪ್
ಈ ಗಾಳಿ ಸುದ್ದಿ ಕಿಚ್ಚ ಸುದೀಪ್ ಕಿವಿಗೂ ಬಿದ್ದ ಮೇಲೆ ಸ್ಪಷ್ಟನೆ ಕೊಟ್ಟಿದ್ದಾರೆ. 'ಮಾನಾಡು' ಚಿತ್ರದಲ್ಲಿ ವಿಲನ್ ಆಗಿ ನಟಿಸಲು ಒಪ್ಪಿಕೊಂಡಿರುವ ಸುದ್ದಿ ಸುಳ್ಳು ಎಂದು ಸುದೀಪ್ ಟ್ವಿಟ್ಟರ್ ನಲ್ಲಿ ಸ್ಪಷ್ಟ ಪಡಿಸಿದ್ದಾರೆ.
ಅಂದ್ಹಾಗೆ, 'ಕೋಟಿಗೊಬ್ಬ-3' ಮತ್ತು 'ಬಿಗ್ ಬಾಸ್' ಕಾರ್ಯಕ್ರಮದಲ್ಲಿ ಸದ್ಯ ಸುದೀಪ್ ಬಿಜಿಯಾಗಿದ್ದಾರೆ. ಈ ಎರಡು ಪ್ರಾಜೆಕ್ಟ್ ಕಂಪ್ಲೀಟ್ ಆದ್ಮೇಲೆ ಸುದೀಪ್ ಡೈರೆಕ್ಟರ್ ಕ್ಯಾಪ್ ತೊಡುವ ಸಾಧ್ಯತೆ ಇದೆ.