Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ನಲ್ಲಿಯೇ ಕಿರುಚಿತ್ರ ನಿರ್ದೇಶಿಸಿದ ಸುಹಾಸಿನಿ ಮಣಿರತ್ನಂ
ನಟಿ, ನಿರ್ದೇಶಕಿ ಸುಹಾಸಿನಿ ಮಣಿರತ್ನಂ ಲಾಕ್ ಡೌನ್ ಅವಧಿಯಲ್ಲಿಯೇ ಕಿರುಚಿತ್ರವೊಂದನ್ನು ನಿರ್ದೇಶಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ಸುಹಾಸಿನಿ, ಕೊರೊನಾ ವೈರಸ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸುತ್ತಿದ್ದರು. ವಿದೇಶದಿಂದ ಬಂದ ಮಗ ನಂದನ್ ಸ್ವಯಂ ದಿಗ್ಬಂಧನಕ್ಕೆ ಒಳಗಾದ ಇತ್ತೀಚಿನ ವಿಡಿಯೋ ವೈರಲ್ ಆಗಿತ್ತು.
Recommended Video
ಈ ಎಲ್ಲ ಚಟುವಟಿಕೆಗಳ ನಡುವೆಯೇ ಲಾಕ್ ಡೌನ್ ಸಮಯವನ್ನು ಅವರು ಕಿರುಚಿತ್ರ ನಿರ್ದೇಶನಕ್ಕೆ ಬಳಸಿಕೊಂಡಿದ್ದಾರೆ. 20 ನಿಮಿಷಗಳ ಈ ಕಿರುಚಿತ್ರದ ಹೆಸರು 'ಚಿನ್ನಂಜಿರು ಕಿಲಿಯೆ'. ಈ ಕಿರುಚಿತ್ರವನ್ನು ಅವರು ಸಂಪೂರ್ಣವಾಗಿ ಒಳಾಂಗಣದಲ್ಲಿಯೇ ಚಿತ್ರೀಕರಿಸಿದ್ದಾರಂತೆ.
ಚಿತ್ರದ ಶೀರ್ಷಿಕೆಯ ಲುಕ್ಅನ್ನು ಇನ್ಸ್ಟಾಗ್ರಾಂನಲ್ಲಿ ಸುಹಾಸಿನಿ ಹಂಚಿಕೊಂಡಿದ್ದಾರೆ. 'ನನ್ನ ಲಾಕ್ ಡೌನ್ ಕಥೆಗಳು. ಮೊದಲ ಕಥೆ 20 ನಿಮಿಷಗಳ ಶಾರ್ಟ್ ಫಿಲಂ ಮುಂದೆ ಬರಲಿದೆ. ಅದರ ಮೊದಲ ಔಟ್ಪುಟ್ ಇಂದು ಸಿಕ್ಕಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಕಿರುಚಿತ್ರವನ್ನು ನೀವು ನೋಡಬಹುದು' ಎಂದು ಅವರು ತಿಳಿಸಿದ್ದಾರೆ.
ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ ನಟಿ ಅಹಾನಾ ಕೃಷ್ಣ ಈ ಕಿರುಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಐಫೋನ್ ಬಳಸಿ ತಮ್ಮ ತಮ್ಮ ಮನೆಗಳಲ್ಲಿಯೇ ಸಂಪೂರ್ಣ ಕಿರುಚಿತ್ರ ಚಿತ್ರೀಕರಿಸಲಾಗಿದೆ. ಜೇಮ್ಸ್ ವಸಂತನ್ ಇದಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.