Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಇಂದು ಮಹತ್ವದ ನಿರ್ಧಾರ
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶದ ಕುರಿತು ಇಂದು ಸೋಮವಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ತಮಿಳುನಾಡಿನ ವಿಧಾನಸಭೆ ಚುನಾವಣೆ ಹಿನ್ನಲೆ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ನಿರ್ಧಾರದ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ.
ಈ ಹಿಂದೆ ಸೂಪರ್ ಸ್ಟಾರ್ ಅನಾರೋಗ್ಯದ ಕಾರಣ ರಾಜಕೀಯದಿಂದ ಅಂತರ ಕಾಯ್ದುಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಬಗ್ಗೆ ರಜನಿಕಾಂತ್ ಪ್ರತಿಕ್ರಿಯೆ ನೀಡಿರುವ ಮೂಲಕ ವದಂತಿಗಳಿಗೆ ಬ್ರೇಕ್ ಹಾಕಿದ್ದರು.
ನಟ ತವಸಿಯ ಜೀವ ಉಳಿಸಲಿಲ್ಲ ರಜನೀಕಾಂತ್, ವಿಜಯ್ ಸೇತುಪತಿ ನೆರವು
ಇಂದು (ನವೆಂಬರ್ 30) ಮಕ್ಕಳ್ ಮಂದ್ರಂ ಸಂಘಟನೆಯ ಜಿಲ್ಲಾ ಕಾರ್ಯದರ್ಶಿಗಳ ಸಭೆ ಇಂದು ನಿಗದಿಯಾಗಿದೆ. ಸಭೆಯಲ್ಲಿ ರಾಜಕೀಯ ಪ್ರವೇಶ, ಚುನಾವಣೆ ಸ್ಪರ್ಧೆ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕೊರೊನಾ ವೈರಸ್ ಹಿನ್ನಲೆ ಇಂದು ಸಭೆ ನಡೆಯುವ ಸಭೆ ಆನ್ ಲೈನ್ ನಲ್ಲಿ ನಡೆಯುತ್ತಾ ಅಥವಾ ಎಲ್ಲರೂ ಭಾಗಿಯಾಗುತ್ತಾರಾ ಎನ್ನುವುದು ಬಹಿರಂಗವಾಗಿಲ್ಲ.
ಕಳೆದ ತಿಂಗಳು ರಾಜಕೀಯ ಪ್ರವೇಶ, ವಿಳಂಬವಾಗಲಿದೆ. ಕೊರೊನಾ ಸಮಯದಲ್ಲಿ ಚುನಾವಣೆ ಪ್ರಚಾರದ ಬಗ್ಗೆ ಕಾಳಜಿ ವಹಿಸುವಂತೆ ವೈದ್ಯರು ಸೂಚಿಸಿದ್ದಾರೆ, ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ಹಾಗಾಗಿ ಕೊರೊನಾ ವೈರಸ್ ಸಮಯದಲ್ಲಿ ಎಚ್ಚರಿಕೆಯಿಂದ ಇರಬೇಕೆನ್ನುವ ಕಾರಣಕ್ಕೆ ರಾಜಕೀಯ ಪ್ರವೇಶ ವಿಳಂಬವಾಗಲಿದೆ ಎನ್ನುವ ಪತ್ರ ವೈರಲ್ ಆಗಿತ್ತು.
ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿದ ರಜನಿಕಾಂತ್, ವೈದ್ಯರ ಸಲಹೆ ನಿಜ ಆದರೆ ಪತ್ರ ನನ್ನದಲ್ಲ' ಎಂದು ಹೇಳಿದ್ದರು. ಹಾಗಾಗಿ ಇವತ್ತು ನಡೆಯುತ್ತಿರುವ ಸಭೆಯ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಹಾಗೂ ರಜನಿಕಾಂತ್ ನಿರ್ಧಾರವೇನಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.