Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ನಟ ಸೂರ್ಯಾ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಕರೆ
ತಮಿಳು ಚಿತ್ರರಂಗದ ಖ್ಯಾತ ನಟ ಸೂರ್ಯಾ ಕಚೇರಿಗೆ ನಿನ್ನೆ (ಸೋಮವಾರ) ಸಂಜೆ ಅಗಂತುಕನೊಬ್ಬನಿಂದ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ.
ಚೆನ್ನೈನ ಅಲ್ವಾರ್ಪೇಟೆಯಲ್ಲಿ ನಟ ಸೂರ್ಯಾ ಕಚೇರಿಯೊಂದನ್ನು ಹೊಂದಿದ್ದಾರೆ. ಈ ಕಚೇರಿಯನ್ನು ಅವರು ಹೆಚ್ಚಿಗೆ ಬಳಸುವುದಿಲ್ಲ. ಅವರು ಹೊಸದೊಂದು ಕಚೇರಿ ನಿರ್ಮಿಸಿಕೊಂಡಿದ್ದಾರೆ. ಆದರೆ ನಿನ್ನೆ ಸಂಜೆ ಬೆದರಿಕೆ ಕರೆ ಬಂದಿದ್ದು ಸೂರ್ಯಾ ರ ಹಳೆ ಕಚೇರಿ ಕುರಿತು.
ಸಿನಿಮಾದಲ್ಲಿ ಈ ಡೈಲಾಗ್ ಬಳಸಿದ್ದಕ್ಕೆ ಮಣಿರತ್ನಂಗೆ ಬಾಂಬ್ ಕರೆ.!
ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿದ ಅಗಂತುಕನೊಬ್ಬ, ಸೂರ್ಯಾರ ಚೆನ್ನೈನ ಅಲ್ವಾರ್ಪೇಟೆಯ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಹೇಳಿದ್ದ. ಕೂಡಲೇ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ತಲುಪಿದ ಪೊಲೀಸರು, ಸುಮಾರು ಎರಡು ಗಂಟೆ ವರೆಗೆ ಬಾಂಬ್ ಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಬಾಂಬ್ ಪತ್ತೆಯಾಗಿಲ್ಲ. ಹುಸಿ ಕರೆ ಮಾಡಿದವನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ವಿಜಯ್, ರಜನೀಕಾಂತ್, ಅಜಿತ್ ಗೂ ಬಾಂಬ್ ಬೆದರಿಕೆ ಕರೆ
ಈ ಕೆಲವು ದಿನಗಳ ಹಿಂದೆ ನಟ ವಿಜಯ್, ಅಜಿತ್, ರಜನೀಕಾಂತ್ ನಿವಾಸಗಳಲ್ಲಿ ಬಾಂಬ್ ಇಟ್ಟುರುವುದಾಗಿ ಹುಸಿ ಬಾಂಬ್ ಕರೆ ಮಾಡಲಾಗಿತ್ತು. ಅದರಲ್ಲಿ ಅಜಿತ್ ಮತ್ತು ವಿಜಯ್ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದವರು ಮಾನಸಿಕ ಅಸ್ವಸ್ಥರು ಎನ್ನಲಾಯಿತು.
ಸೂರ್ಯಾ ಸಿನಿಮಾಗಳಿಗೆ ನಿಷೇಧ
ಇನ್ನು ನಟ ಸೂರ್ಯಾ ಅವರು ಇತ್ತೀಚೆಗೆ ಕೆಲವು ವಿವಾದಗಳಲ್ಲಿ ಸಿಲುಕಿಕೊಂಡಿದ್ದರು. ಅವರ ನಿರ್ಮಾಣದ ಪತ್ನಿ ಜ್ಯೋತಿಕ ನಟಿಸಿದ್ದ 'ಪೊನ್ಮಗಳ್ ವಂದಾಳ್' ಸಿನಿಮಾವನ್ನು ಸೂರ್ಯಾ ಒಟಿಟಿಗೆ ಮಾರಾಟ ಮಾಡಿದ್ದರು. ಇದನ್ನು ಚಿತ್ರಮಂದಿರಗಳ ಸಂಘ ವಿರೋಧಿಸಿ ಸೂರ್ಯಾ ಸಿನಿಮಾಕ್ಕೆ ನಿಷೇಧ ಹೇರಿದೆ.
Recommended Video
ಸೂರರೈ ಪೊಟ್ರು ಸಿನಿಮಾ ಒಟಿಟಿಗೆ
ಈ ನಡುವೆ ಸೂರ್ಯಾ ನಟನೆಯ ಮುಂದಿನ ಸಿನಿಮಾ ಸೂರರೈ ಪೊಟ್ರು ಸಿನಿಮಾವನ್ನು ಸಹ ಒಟಿಟಿಗೆ ನೀಡಲಾಗಿದೆ. ಅದು ಕೆಲವೇ ದಿನಗಳಲ್ಲಿ ಅಮೆಜಾನ್ ಪ್ರೈಂ ನಲ್ಲಿ ಬಿಡುಗಡೆ ಆಗಲಿದೆ. ಕರ್ನಾಟಕದ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧರಿಸಿದ ಸಿನಿಮಾ ಅದಾಗಿದೆ.