Don't Miss!
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೇಶ್ ಬಾಬು ಸವಾಲು ಪೂರ್ಣಗೊಳಿಸಿದ ತಮಿಳು ನಟ ವಿಜಯ್
ಟಾಲಿವುಡ್ನಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಗ್ರೀನ್ ಇಂಡಿಯಾ ಚಾಲೆಂಜ್ನ್ನು ಈಗ ತಮಿಳು ನಟ ವಿಜಯ್ ಪೂರ್ಣಗೊಳಿಸಿದ್ದಾರೆ. ಮಂಗಳವಾರ ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಗಿಡವನ್ನು ನೆಡುವ ಮೂಲಕ ತೆಲುಗು ನಟ ಮಹೇಶ್ ಬಾಬು ನೀಡಿದ್ದ ಸವಾಲನ್ನು ಯಶಸ್ವಿಗೊಳಿಸಿದ್ದಾರೆ.
Recommended Video
ಮಂಗಳವಾರ ಟ್ವಿಟ್ಟರ್ನಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿರುವ ವಿಜಯ್, ನಾಮನಿರ್ದೇಶನ ಮಾಡಿದ್ದ ನಟ ಮಹೇಶ್ ಬಾಬುಗೆ ಧನ್ಯವಾದ ಅರ್ಪಿಸಿದ್ದಾರೆ.
ನಟಿ ಸಮಂತಾ ಹಾಕಿದ ಸವಾಲು ಸ್ವೀಕರಿಸಿದ ಕಿರಿಕ್ ಸುಂದರಿ ರಶ್ಮಿಕಾ ಮಂದಣ್ಣ
''ಇದು ನಿಮಗಾಗಿ ಮಹೇಶ್ ಬಾಬು ಅವರೇ. ಒಳ್ಳೆಯ ಆರೋಗ್ಯಕ್ಕಾಗಿ ಗ್ರೀನರ್ ಇಂಡಿಯಾ. ಥ್ಯಾಂಕ್ ಯೂ ನನ್ನನ್ನು ನಾಮನಿರ್ದೇಶನ ಮಾಡಿದ್ದಕ್ಕೆ'' ಎಂದು ಟ್ವೀಟ್ ಮಾಡಿದ್ದಾರೆ.
ವಿಜಯ್ ಟಾಸ್ಕ್ ಪೂರ್ಣಗೊಳಿಸಿದ್ದಕ್ಕಾಗಿ ಮಹೇಶ್ ಬಾಬು ಸಹ ವಿಜಯ್ ಗೆ ಧನ್ಯವಾದ ಹೇಳಿದ್ದಾರೆ. ಇನ್ನು ಇತ್ತೀಚಿಗಷ್ಟೆ ಮಹೇಶ್ ಬಾಬು 45ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಸರಳವಾಗಿ ಮನೆಯಲ್ಲಿ ಆಚರಿಸಿಕೊಂಡ ಮಹೇಶ್ ಬಾಬು ಹಸಿರು ಗಿಡ ನೆಡುವ ಮೂಲಕ ಗ್ರೀನ್ ಇಂಡಿಯಾ ಚಾಲೆಂಜ್ನಲ್ಲಿ ಪಾಲ್ಗೊಂಡಿದ್ದರು.
ನಂತರ, ತೆಲುಗು ನಟ ಎನ್ ಟಿ ಆರ್, ನಟಿ ಶ್ರುತಿ ಹಾಸನ್ ಹಾಗೂ ವಿಜಯ್ ಅವರನ್ನು ಮುಂದಿನ ಚಾಲೆಂಜ್ಗೆ ನಾಮಿನಿರ್ದೇಶನ ಮಾಡಿದ್ದರು. ಇದಕ್ಕೂ ಮುಂಚೆ ನಾಗಾರ್ಜುನ, ರಶ್ಮಿಕಾ ಮಂದಣ್ಣ, ರಾಶಿ ಖನ್ನಾ, ಪ್ರಭಾಸ್, ಸಮಂತಾ ಸೇರಿದಂತೆ ಹಲವರು ಈ ಚಾಲೆಂಜ್ನಲ್ಲಿ ಭಾಗವಹಿಸಿದ್ದರು.