Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಚಿತ್ರಮಂದಿರದಲ್ಲಿ 100ರಷ್ಟು ಅವಕಾಶ ಕೊಡಿ': ಸಿಎಂಗೆ ಮನವಿ ಮಾಡಿದ ವಿಜಯ್
ಕೊರೊನಾ ಭೀತಿಯ ನಡುವೆಯೂ ಚಿತ್ರಮಂದಿರಗಳಿಗೆ ಅವಕಾಶ ಕೊಟ್ಟಿದ್ದರೂ ಶೇಕಡಾ 100ರಷ್ಟು ಸಮ್ಮತಿ ನೀಡಿಲ್ಲ. ಇದು ದೊಡ್ಡ ನಿರ್ಮಾಪಕರ ಸಿನಿಮಾ ಹಾಗೂ ಸ್ಟಾರ್ ನಟರ ಚಿತ್ರಗಳಿಗೆ ಪೂರಕವಾಗಿಲ್ಲ ಎಂಬ ಅಭಿಪ್ರಾಯ ಇದೆ.
ಶೇಕಡಾ 100 ರಷ್ಟು ಅವಕಾಶ ಸಿಗುವವರೆಗೂ ಬಿಗ್ ಬಜೆಟ್ ಚಿತ್ರಗಳು ಚಿತ್ರಮಂದಿರಕ್ಕೆ ಬರುವುದು ಕಷ್ಟ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಬಿಗ್ ಬಜೆಟ್ ಚಿತ್ರಗಳು ರಿಲೀಸ್ಗೆ ರೆಡಿಯಿದ್ದರೂ ಥಿಯೇಟರ್ಗೆ ಬರ್ತಿಲ್ಲ. ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ತಮಿಳು ನಟ ವಿಜಯ್ ನಟನೆಯ 'ಮಾಸ್ಟರ್' ಬಿಡುಗಡೆ ದಿನಾಂಕ ಘೋಷಿಸಿದೆ.
ವಿಜಯ್ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ: ಸಂಕ್ರಾಂತಿಗೂ ಮಾಸ್ಟರ್ ಅನುಮಾನ?
ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 13 ರಂದು 'ಮಾಸ್ಟರ್' ಸಿನಿಮಾ ಬಿಡುಗಡೆಯಾಗುತ್ತಿದೆ. ಒಂದು ವಾರಕ್ಕೆ ಮುಂಚಿತವಾಗಿ ಅಂದ್ರೆ ಜನವರಿ 7 ರಿಂದ ಟಿಕೆಟ್ ಬುಕ್ಕಿಂಗ್ ಅವಕಾಶ ಕಲ್ಪಿಸಲಾಗುತ್ತದೆ ಎಂಬ ಮಾಹಿತಿ ಇದೆ.
ಈ ಮದ್ಯೆ ನಟ ವಿಜಯ್ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಡಿ ಪಳನಿಸ್ವಾಮಿ ಅವರಿಗೆ ಚಿತ್ರಮಂದಿರಗಳಲ್ಲಿ ಶೇಕಡಾ 100 ರಷ್ಟು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ ಎಂದು ಪಿಂಕ್ ವಿಲ್ಲಾ ವೆಬ್ಸೈಟ್ ವರದಿ ಮಾಡಿದೆ.
ಈ ವಿಚಾರವಾಗಿ ಸಿಎಂ ಪಳನಿಸ್ವಾಮಿ ಅವರನ್ನು ಭೇಟಿ ಮಾಡಿದ ವಿಜಯ್ ಚಿತ್ರೋಧ್ಯಮದ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಅನುಮತಿ ನೀಡಿ ಎಂದು ಕೇಳಿದ್ದಾರಂತೆ. ಆದ್ರೆ, ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲ.
ವಿಜಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್; 'ಮಾಸ್ಟರ್' ಮುಂಗಡ ಟಿಕೆಟ್ ಬುಕ್ಕಿಂಗ್ ಗೆ ರೆಡಿಯಾಗಿ
ಕಳೆದ ವಾರವಷ್ಟೇ ಸೆನ್ಸಾರ್ ಮುಗಿಸಿರುವ ಮಾಸ್ಟರ್ ಸಿನಿಮಾ ಯು/ಎ ಪ್ರಮಾಣಪತ್ರ ಪಡೆದುಕೊಂಡಿದೆ. ಹಿಂದಿಯಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದ್ದು, ''ವಿಜಯ್ ದಿ ಮಾಸ್ಟರ್'' ಎಂದು ಹೆಸರಿಡಲಾಗಿದೆ.
ಇನ್ನುಳಿದಂತೆ ಲೋಕೇಶ್ ಕನಕರಾಜ್ ಈ ಚಿತ್ರ ನಿರ್ದೇಶನ ಮಾಡಿದ್ದು, ಪ್ರಮುಖ ಪಾತ್ರದಲ್ಲಿ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದಾರೆ. ಮಾಳವಿಕಾ ಮೋಹನ್ ನಾಯಕಿಯಾಗಿದ್ದಾರೆ.