Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖಿನ್ನತೆ ಕಾಡ್ತಿದೆ, ಹಿಂಸೆ ಹೆಚ್ಚಾಗಿದೆ, ಆತ್ಮಹತ್ಯೆ ಮಾಡಿಕೊಳ್ಳುವೆ: ತಮಿಳು ನಟಿ ಕಣ್ಣೀರು
ತಮಿಳು ನಟಿ, ಮಾಡೆಲ್ ಮೀರಾ ಮಿಥುನ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ.
ನನಗೆ ಖಿನ್ನತೆ ಕಾಡ್ತಿದೆ, ಸಾಮಾಜಿಕ ಜಾಲತಾಣದಲ್ಲಿ ನನಗೆ ಕಿರುಕುಳ ನೀಡಲಾಗಿದೆ, ಮಾನಸಿಕವಾಗಿ ನಾನು ಬಹಳ ನೊಂದಿದ್ದೇನೆ ಎಂದು ವಿಡಿಯೋ ಸಹ ಮಾಡಿ ಕಣ್ಣೀರಿಟ್ಟಿದ್ದಾರೆ.
ಜಯಶ್ರೀ ರಾಮಯ್ಯ ಸಾವಿನ ಬಗ್ಗೆ ಟಿಎನ್ ಸೀತಾರಾಮ್ ಬೇಸರ
ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಕಾಮೆಂಟ್ಗಳು ನನ್ನನ್ನು ಸಾಯುವಂತೆ ಮಾಡುತ್ತಿದೆ. ಕೆಲವರನ್ನು ನನ್ನ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಸತ್ತು ಹೋಗು ಎಂದು ಹೀಯಾಳಿಸುತ್ತಿದ್ದಾರೆ. ನನಗೆ ಬದುಕಬೇಕು ಎಂದು ಅನಿಸುತ್ತಿಲ್ಲ ಎಂದು ಮೀರಾ ಮಿಥುನ್ ಟ್ವಿಟ್ಟರ್ನಲ್ಲಿ ಅಳಲು ತೋಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನನಗೆ ನೀಡುತ್ತಿರುವ ಕಿರುಕುಳ ನಿಲ್ಲುವುದಿಲ್ಲ. ಈ ಬಗ್ಗೆ ನಾನು ಎಲ್ಲವೂ ದಾಖಲಿಸುತ್ತಿದ್ದೇನೆ, ಮಾನಸಿಕವಾಗಿ ನನ್ನ ಆರೋಗ್ಯ ಹದಗೆಡುತ್ತಿದೆ, ನನ್ನ ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನು ಗಲ್ಲಿಗೇರಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದಾರೆ.
ನಾನೊಬ್ಬಳು ಲೂಸರ್, ನಾನು ಹುಚ್ಚಿ, ನಾನು ಸಾಯಬೇಕು; ದಯಾಮರಣ ನೀಡಿ ಎಂದಿದ್ದ ಜಯಶ್ರೀ
''ಕಳೆದ ಮೂರು ವರ್ಷದಿಂದ ನಿರಂತರವಾಗಿ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಸಮಾಜದಲ್ಲಿ ನನಗೆ ಯಾವುದೇ ರೀತಿ ಗೌರವ ಕೊಡ್ತಿಲ್ಲ. ಪ್ರತಿಕ್ಷಣವೂ ನನಗೆ ಅನ್ಯಾಯವಾಗ್ತಿದೆ. ನನ್ನ ಈ ನೋವನ್ನು ಕೊನೆಯಾಗಿಸಲು ನಾನು ನಿರ್ಧರಿಸಿದ್ದೇನೆ'' ಎಂದು ಆತಂಕ ಸೃಷ್ಟಿಸಿದ್ದಾರೆ.
ಸುಮಾರು 20 ನಿಮಿಷಗಳ ಕಾಲ ವಿಡಿಯೋದಲ್ಲಿ ಕಣ್ಣೀರಿಟ್ಟಿರುವ ನಟಿ ಮೀರಾ ಮಿಥುನ್ ''ಸಿನಿಮಾ ಇಂಡಸ್ಟ್ರಿಯಲ್ಲಿ ಹಾಗೂ ಫ್ಯಾಶನ್ ಇಂಡಸ್ಟ್ರಿಯಲ್ಲಿ ನನ್ನನ್ನು ತುಳಿಯಲಾಗಿದೆ. ನಾನು ಮಾಡಿದ ಕೆಲಸಗಳನ್ನು ಕಾಪಿ ಮಾಡಿದ್ದಾರೆ, ನನ್ನ ಸಾಧನೆಯನ್ನು ಗುರುತಿಸಿ, ಅದನ್ನು ತಾವೇ ಮಾಡಿರವಂತೆ ಕಾಪಿ ಮಾಡಿದ್ದಾರೆ. ನಾನು ತಮಿಳುನಾಡಿನಲ್ಲಿ ಹುಟ್ಟಿದ್ದರೂ, ಓರ್ವ ತಮಿಳು ಹುಡುಗಿಯಾಗಿದ್ದರೂ ನನಗೆ ತೊಂದರೆ ಕೊಟ್ಟಿದ್ದಾರೆ'' ಎಂದು ಆರೋಪಿಸಿದ್ದಾರೆ.
Recommended Video
2017ರಲ್ಲಿ '8 ತೋಟಕ್ಕಲ್' ಚಿತ್ರದಲ್ಲಿ ನಟಿಸುವ ಮೂಲಕ ಇಂಡಸ್ಟ್ರಿ ಪ್ರವೇಶಿಸಿದ್ದರು. 'ಜೋಡಿ ನಂಬರ್ 1' ಹಾಗೂ ಬಿಗ್ ಬಾಸ್ 3ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.