Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Breaking: ಆಸ್ಪತ್ರೆಯಲ್ಲಿದ್ದ ತಮಿಳು ಹಾಸ್ಯ ನಟ ವಿವೇಕ್ ನಿಧನ
ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ (59) ಶನಿವಾರ ಬೆಳಗ್ಗೆ 5 ಗಂಟೆಗೆ ನಿಧನರಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
Recommended Video
ಶುಕ್ರವಾರ ಮಧ್ಯಾಹ್ನ ನಟ ವಿವೇಕ್ ಎಸ್ಇಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯಾಘಾತ ಸಂಭವಿಸಿದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದರು. ವಿವೇಕ್ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದ ಹಿನ್ನೆಲೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ, ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಇಂದು (ಏಪ್ರಿಲ್ 17) ಮುಂಜಾನೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯಿಂದ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.
ವಿವೇಕ್ ಸ್ಥಿತಿ ಗಂಭೀರ: ಹೃದಯಾಘಾತಕ್ಕೆ ಕೊರೊನಾ ಲಸಿಕೆ ಕಾರಣವಲ್ಲ ಎಂದ ವೈದ್ಯರು
ನಟ ವಿವೇಕ್ ತಮ್ಮ ಪತ್ನಿ ಹಾಗೂ ಮಗಳನ್ನು ಬಿಟ್ಟು ಅಗಲಿದ್ದಾರೆ. ವಿವೇಕ್ ಅವರ ನಿಧನಕ್ಕೆ ದಕ್ಷಿಣ ಚಿತ್ರರಂಗ ಸಂತಾಪ ಸೂಚಿಸಿದೆ. ಹಾಸ್ಯನಟನ ಸಾವಿನ ಸುದ್ದಿ ಬೆಳ್ಳಂಬೆಳಗ್ಗೆ ಆಘಾತ ತಂದಿದ್ದು, ಹಲವರು ಈ ಸುದ್ದಿಯಿಂದ ತೀರಾ ಬೇಸರಗೊಂಡಿದ್ದಾರೆ.
ಅಂದ್ಹಾಗೆ, ನಟ ವಿವೇಕ್ ಗುರುವಾರ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಕೊರೊನಾ ವೈರಸ್ ಲಸಿಕೆ ಪಡೆದ ಮರುದಿನವೇ ಹೃದಯಾಘಾತಕ್ಕೆ ಒಳಗಾಗಿದ್ದ ಅನುಮಾನ ಮೂಡಿಸಿತ್ತು. ಬಳಿಕ ವೈದ್ಯರು ಈ ಕುರಿತು ಸ್ಪಷ್ಟನೆ ನೀಡಿದ್ದರು. ಕೋವಿಡ್ ಲಸಿಕೆ ಪಡೆದುದ್ದರಿಂದ ಹೃದಯಾಘಾತ ಸಂಭವಿಸಿಲ್ಲ ಎಂದು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದರು.
ತಮಿಳು ಇಂಡಸ್ಟ್ರಿಯಲ್ಲಿ ಸಿನಿ ಜರ್ನಿ ಆರಂಭಿಸಿದ್ದ ವಿವೇಕ್ ಕಳೆದ ಮೂರುವರೆ ದಶಕದಿಂದ ಸಕ್ರಿಯರಾಗಿದ್ದಾರೆ. ಕೆ ಬಾಲಚಂದಿರ್ ಅವರು ವಿವೇಕ್ ಅವರನ್ನು ಚಿತ್ರರಂಗಕ್ಕೆ ಪರಿಚಿಯಿಸಿದ್ದರು. ತಮಿಳಿನ ಜೊತೆಗೆ ತೆಲುಗು ಹಾಗೂ ಕನ್ನಡದ (ಚಂದ್ರ) ಒಂದು ಚಿತ್ರದಲ್ಲಿ ನಟಿಸಿದ್ದಾರೆ.
ಚಿತ್ರರಂಗಕ್ಕೆ ವಿವೇಕ್ ನೀಡಿರುವ ಕೊಡುಗೆ ಗೌರವಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿತ್ತು. ಅದಲ್ಲದೇ ಫಿಲಂ ಫೇರ್ ಪ್ರಶಸ್ತಿ, ತಮಿಳು ರಾಜ್ಯ ಚಲಚನಚಿತ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.