Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಸೆಮಣೆ ಏರಿದ ಖ್ಯಾತ ಕಾಮಿಡಿ ನಟ ಯೋಗಿ ಬಾಬು
ತಮಿಳಿನ ಖ್ಯಾತ ಕಾಮಿಡಿ ನಟ ಯೋಗಿ ಬಾಬು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗೆಳತಿ ಮಂಜು ಭಾರ್ಗವಿ ಜೊತೆ ಯೋಗಿ ಸಪ್ತಪದಿ ತುಳಿಸಿದ್ದಾರೆ. ಇಂದು ಬೆಳಗ್ಗೆ ಚೆನ್ನೈನ ತಿರುಪತಿಯ ಮುರುಗನ್ ದೇವಸ್ಥಾನದಲ್ಲಿ ಇಬ್ಬರ ವಿವಾಹ ನಡೆದಿದೆ. ಇದು ಯೋಗಿ ಬಾಬು ಅವರ ಮನೆದೇವರಂತೆ. ಹಾಗಾಗಿ ಅದೆ ಮುರುಗನ್ ದೇವಸ್ಥಾನದಲ್ಲಿಯೆ ಯೋಗಿ ಸಪ್ತಪದಿ ತುಳಿಸಿದ್ದಾರೆ.
ತೀರ ಸರಳವಾಗಿ ನಡೆದ ವಿವಾಹ ಸಂಭ್ರಮದಲ್ಲಿ ಕುಟುಂಬಸ್ಥರು ಮತ್ತು ತೀರಾ ಆಪ್ತರು ಮಾತ್ರ ಭಾಗಿಯಾಗಿ ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ. ಅಂದ್ಹಾಗೆ ಇಂದು ಸರಳವಾಗಿ ಮತ್ತು ತೀರಾ ಆಪ್ತರ ಸಮ್ಮುಖದಲ್ಲಿ ಮದುವೆಯಾದ ಯೋಗಿ ಗ್ರ್ಯಾಂಡ್ ಆಗಿ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ವಿಶಿಷ್ಟವಾಗಿ ನಡೆದ ನಟ ಚೇತನ್-ಮೇಘ ಆರತಕ್ಷತೆಯಲ್ಲಿ ನಟರು, ರಾಜಕಾರಣಿಗಳು ಭಾಗಿ.!
ಮಾರ್ಚ್ ನಲ್ಲಿ ಆರತಕ್ಷತೆ
ಇಂದು ಬೆಳಗ್ಗೆ ಗೌವ್ಯವಾಗಿ ಹಸೆಮಣೆ ಏರಿರುವ ಯೋಗಿ, ಮುಂದಿನ ತಿಂಗಳು ಚೆನ್ನೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸ್ನೇಹಿತರು, ಕುಟುಂಬದರ ಜೊತೆಗೆ ಚಿತ್ರರಂಗದ ಗಣ್ಯರನ್ನು ಆಹ್ವಾನಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಯೋಗಿ ಬಾಬು ಕೊನೆಯದಾಗಿ ದರ್ಬಾರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.
ಮಗನ ಮದುವೆ ಮಾಡಿ ಸಂತೋಷ ಪಟ್ಟ ನಟ ದೊಡ್ಡಣ್ಣ
ಸೂಪರ್ ಸ್ಟಾರ್ ಜೊತೆ ಅಭಿನಯ
ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ದರ್ಬಾರ್ ಸಿನಿಮಾದಲ್ಲಿ ಯೋಗಿ ಮಿಂಚಿದ್ದಾರೆ. ಈ ಚಿತ್ರದಲ್ಲಿನ ಯೋಗಿ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆಯ ಮಹಾಪೂರವೆ ಹರಿದುಬಂದಿದೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ಯೋಗಿ ಇತ್ತೀಚಿಗಷ್ಟೆ ಧನುಷ್ ಅಭಿನಯದ ಕರ್ಣನ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಏನಲ್ಲ ಅಂದರು ಯೋಗಿ ಬಳಿ ಸದ್ಯ 20 ಚಿತ್ರಗಳಿವೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಮೊದಲ ಸಲ' ನಟಿ ಭಾಮಾ
ನಾಯಕನಾಗಿಯೂ ಮಿಂಚಿದ್ದಾರೆ
ವಿಶೇಷ ಅಂದರೆ ಕಳೆದ ವರ್ಷ 2019ರಲ್ಲಿಯೆ ಯೋಗಿ ಸುಮಾರು 30 ಚಿತ್ರಗಳಲ್ಲಿ ಮಿಂಚಿದ್ದಾರೆ. ಕಾಮಿಡಿ ನಟನಾಗಿ ಮಾತ್ರವಲ್ಲದೆ ನಾಯಕನಾಗಿಯು ಬಣ್ಣಹಚ್ಚಿದ್ದಾರೆ. 'ಧರ್ಮಪ್ರಭು' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಯೋಗಿ ಯಮನ ಮಗನ ಪಾತ್ರದಲ್ಲಿ ಮಿಂಚಿದ್ದರು. ಆದರೆ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೇಳುವಷ್ಟು ಹೆಸರು ಮಾಡಲಿಲ್ಲ. ಆ ನಂತರ ಗೂರ್ಖಾ ಸಿನಿಮಾದಲ್ಲು ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಯೋಗಿ ಬಾಬು ವಿವಾದ
ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿ ಇರುವ ಯೋಗಿ ಬಾಬು ಇತ್ತೀಚಿಗೆ ಒಂದು ವಿವಾದದಲ್ಲಿಯೂ ಸಿಲುಕಿಕೊಂಡಿದ್ದರು. 'ಕಾಕ್ಟೇಲ್' ಸಿನಿಮಾದ ಪೋಸ್ಟರ್ ವಿವಾದಕ್ಕೆ ಕಾರಣವಾಗಿತ್ತು. ಈ ಚಿತ್ರದಲ್ಲಿ ಯೋಗಿ, ಮುರುಗನ್ ದೇವರ ಹಾಗೆ ಕಾಣಿಸಿಕೊಂಡಿದ್ದರು. ಈ ಪೋಸ್ಟರ್ ವಿವಾದ ಹುಟ್ಟುಹಾಕಿದ್ದಲ್ಲದೆ, ಯೋಗಿ ವಿರುದ್ದ ಹಿಂದೂ ಮಕ್ಕಲ್ ಕಚ್ಚಿ ದೂರು ದಾಖಲಿಸಿದ್ದರು.