Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೂರ್ಯ ನಟನೆಯ 'ಕಾಪ್ಪಾನ್' ಚಿತ್ರದ ನಿರ್ದೇಶಕ ಕೆ.ವಿ ಆನಂದ್ ನಿಧನ
ತಮಿಳು ಸಿನಿಮಾರಂಗದ ಖ್ಯಾತ ನಿರ್ದೇಶಕ ಕೆ.ವಿ ಆನಂದ್ ಇಂದು (ಏಪ್ರಿಲ್ 30) ಬೆಳಗ್ಗೆ 3 ಗಂಟೆ ಸುಮಾರಿಗೆ ಚೆನ್ನೈನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 54 ವರ್ಷದ ಖ್ಯಾತ ನಿರ್ದೇಶಕ ಕೆ.ವಿ ಆನಂದ್ ಅವರ ಹಠಾತ್ ನಿಧನದ ಸುದ್ದಿ ತಮಿಳು ಚಿತ್ರರಂಗಕ್ಕೆ ಶಾಕ್ ನೀಡಿದೆ.
ಫೋಟೋ ಜರ್ನಲಿಸ್ಟ್ ಆಗಿ ವೃತ್ತಿ ಜೀವನ ಪ್ರಾರಂಭಿಸಿದ್ದ ಆನಂದ್ ಬಳಿಕ ಛಾಯಾಗ್ರಾಹಕರಾಗಿ ಮಲಯಾಳಂ ಚಿತ್ರರಂಗ ಪ್ರವೇಶ ಮಾಡಿದ್ದರು. ಮಲಯಾಳಂ, ಹಿಂದಿ, ತಮಿಳು ಸಿನಿಮಾರಂಗದಲ್ಲಿ ಕೆಲಸ ಮಾಡಿರುವ ಆನಂದ್ ಬಳಿಕ 2005ರಲ್ಲಿ ತಮಿಳಿನ ಕನ ಕಂದೇನ್ ಸಿನಿಮಾ ಮೂಲಕ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿದ್ದರು.
ಬಳಿಕ ಆನಂದ್ ತಮಿಳಿನಲ್ಲಿ ಅಯಾನ್, ಕೋ, ಮಾಟ್ರಾನ್, ಅನೆಗನ್ ಕಾಪ್ಪಾನ್ ಅಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. 2019ರಲ್ಲಿ ಬಿಡುಗಡೆಯಾದ ಸೂರ್ಯ ನಟನೆಯ ಕಾಪ್ಪಾನ್ ಸಿನಿಮಾ ಕೆ.ವಿ ಆನಂದ್ ದೇಶದ ಗಮನ ಸೆಳೆದಿದ್ದರು. ರೈತರ ಜಮೀನಿಗೆ ಮಿಡತೆ ದಾಳಿ ಇಡುವ ಬಗ್ಗೆ ಇದ್ದ ಸಿನಿಮಾವಾಗಿತ್ತು. ಚಿತ್ರದಲ್ಲಿ ಖ್ಯಾತ ನಟ ಮೋಹನ್ ಲಾಲ್ ಕೂಡ ಪ್ರಮುಖ ಪಾತ್ರದಲ್ಲಿ ಮಿಂಚಿದ್ದರು.
Recommended Video
ಕೆ.ವಿ ಆನಂದ್ ಚೊಚ್ಚಲ ಸಿನಿಮಾದ ಛಾಯಾಗ್ರಾಹಣ ಅತ್ಯುತ್ತಮ ಛಾಯಾಗ್ರಾಹಕ ರಾಷ್ಟ್ರಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಆನಂದ್ ನಿಧನಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.