Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನ ಖ್ಯಾತ ಹಾಸ್ಯ ನಟ ಅಯ್ಯಪ್ಪನ್ ಗೋಪಿ ನಿಧನ
ತಮಿಳಿನ ಖ್ಯಾತ ನಟ ಹಾಸ್ಯ ನಟ ಅಯ್ಯಪ್ಪನ್ ಗೋಪಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಜನಿ ಮುರುಗನ್ ಸಿನಿಮಾ ಮೂಲಕ ಖ್ಯಾತಿಗಳಿಸಿದ್ದ ನಟ ಅಯ್ಯಪ್ಪನ್ ಗೋಪಿ ಇನ್ನು ನೆನಪು ಮಾತ್ರ.
ಮಾರಕ ಕೊರೊನಾ ವೈರಸ್ ಹಾವಳಿಯ ನಡುವೆ ದಕ್ಷಿಣ ಭಾರತ ಅನೇಕ ಸಿನಿಮಾ ಮಂದಿ ಕೊನೆಯುಸಿರೆಳೆದಿದ್ದಾರೆ. ಸಾಕಷ್ಟು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇತ್ತೀಚಿಗಷ್ಟೆ ನಟ ಅಯ್ಯಪ್ಪನ್ ಗೋಪಿ ಸ್ನೇಹಿತ ಮತ್ತು ನಟ ಪವನ್ ರಾಜ್ ನಿಧನರಾದ ಬೆನ್ನಲ್ಲೇ ಅಯ್ಯಪ್ಪನ್ ಕೂಡ ಕೊನೆಯುಸಿರೆಳೆದಿರುವುದು ಅಭಿಮಾನಿಗಳಿಗೆ, ಸ್ನೇಹಿತರಿಗೆ ಆಘಾತ ತಂದಿದೆ.
ನಟ ಪರೇಶ್ ರಾವಲ್ ನಿಧನದ ಬಗ್ಗೆ ವಂದತಿ: ಟ್ವಿಟ್ಟರ್ನಲ್ಲಿ ತಿರುಗೇಟು
ಅಯ್ಯಪ್ಪನ್ ರಜಿನಿ ಮುರುಗನ್, ಧುಲ್ಲಕು ದುಡ್ಡು ಸೇರಿದಂತೆ ಇನ್ನು ಅನೇಕ ಹಿಟ್ ಸಿನಿಮಾಗಳಲ್ಲಿ ನಟಿಸಿ ತಮಿಳು ಪ್ರೇಕ್ಷಕರ ಮನಗೆದ್ದಿದರು. ಅಯ್ಯಪ್ಪನ್ ನಿಧನಕ್ಕೆ ಅಭಿಮಾನಿಗಳು ಮತ್ತು ಸ್ನೇಹಿತರು ಸಂತಾಪ ಸೂಚಿಸುತ್ತಿದ್ದಾರೆ. ಅಯ್ಯಪ್ಪನ್ ನಟನೆ ಜೊತೆಗೆ ನಿರ್ದೇಶಕರಾಗುವ ಕನಸು ಕೂಡ ಕಂಡಿದ್ದರು. ತನ್ನ ಕನಸು ಈಡೇರುವ ಮೊದಲ ಅಯ್ಯಪ್ಪನ್ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
Recommended Video
ತಮಿಳು ಸಿನಿಮಾರಂಗ ಇತ್ತೀಚಿಗೆ ಅನೇಕ ಗಣ್ಯರನ್ನು ಕಳೆದುಕೊಂಡಿದೆ. ನಟ ಮಾರನ್, ಪಾಂಡು, ವಿವೇಕ್, ನೆಲ್ಲೈ ಶಿವ, ಚೆಲ್ಲಾದುರೈ, ನಿರ್ದೇಶಕ ಕೆ.ವಿ ಆನಂದ್ ಸೇರಿದಂತೆ ಇನ್ನು ಅನೇಕ ಖ್ಯಾತ ನಾಮರು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.