Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನ ಖ್ಯಾತ ಹಾಸ್ಯ ನಟ ಅಯ್ಯಪ್ಪನ್ ಗೋಪಿ ನಿಧನ
ತಮಿಳಿನ ಖ್ಯಾತ ನಟ ಹಾಸ್ಯ ನಟ ಅಯ್ಯಪ್ಪನ್ ಗೋಪಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಜನಿ ಮುರುಗನ್ ಸಿನಿಮಾ ಮೂಲಕ ಖ್ಯಾತಿಗಳಿಸಿದ್ದ ನಟ ಅಯ್ಯಪ್ಪನ್ ಗೋಪಿ ಇನ್ನು ನೆನಪು ಮಾತ್ರ.
ಮಾರಕ ಕೊರೊನಾ ವೈರಸ್ ಹಾವಳಿಯ ನಡುವೆ ದಕ್ಷಿಣ ಭಾರತ ಅನೇಕ ಸಿನಿಮಾ ಮಂದಿ ಕೊನೆಯುಸಿರೆಳೆದಿದ್ದಾರೆ. ಸಾಕಷ್ಟು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇತ್ತೀಚಿಗಷ್ಟೆ ನಟ ಅಯ್ಯಪ್ಪನ್ ಗೋಪಿ ಸ್ನೇಹಿತ ಮತ್ತು ನಟ ಪವನ್ ರಾಜ್ ನಿಧನರಾದ ಬೆನ್ನಲ್ಲೇ ಅಯ್ಯಪ್ಪನ್ ಕೂಡ ಕೊನೆಯುಸಿರೆಳೆದಿರುವುದು ಅಭಿಮಾನಿಗಳಿಗೆ, ಸ್ನೇಹಿತರಿಗೆ ಆಘಾತ ತಂದಿದೆ.
ನಟ ಪರೇಶ್ ರಾವಲ್ ನಿಧನದ ಬಗ್ಗೆ ವಂದತಿ: ಟ್ವಿಟ್ಟರ್ನಲ್ಲಿ ತಿರುಗೇಟು
ಅಯ್ಯಪ್ಪನ್ ರಜಿನಿ ಮುರುಗನ್, ಧುಲ್ಲಕು ದುಡ್ಡು ಸೇರಿದಂತೆ ಇನ್ನು ಅನೇಕ ಹಿಟ್ ಸಿನಿಮಾಗಳಲ್ಲಿ ನಟಿಸಿ ತಮಿಳು ಪ್ರೇಕ್ಷಕರ ಮನಗೆದ್ದಿದರು. ಅಯ್ಯಪ್ಪನ್ ನಿಧನಕ್ಕೆ ಅಭಿಮಾನಿಗಳು ಮತ್ತು ಸ್ನೇಹಿತರು ಸಂತಾಪ ಸೂಚಿಸುತ್ತಿದ್ದಾರೆ. ಅಯ್ಯಪ್ಪನ್ ನಟನೆ ಜೊತೆಗೆ ನಿರ್ದೇಶಕರಾಗುವ ಕನಸು ಕೂಡ ಕಂಡಿದ್ದರು. ತನ್ನ ಕನಸು ಈಡೇರುವ ಮೊದಲ ಅಯ್ಯಪ್ಪನ್ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
Recommended Video
ತಮಿಳು ಸಿನಿಮಾರಂಗ ಇತ್ತೀಚಿಗೆ ಅನೇಕ ಗಣ್ಯರನ್ನು ಕಳೆದುಕೊಂಡಿದೆ. ನಟ ಮಾರನ್, ಪಾಂಡು, ವಿವೇಕ್, ನೆಲ್ಲೈ ಶಿವ, ಚೆಲ್ಲಾದುರೈ, ನಿರ್ದೇಶಕ ಕೆ.ವಿ ಆನಂದ್ ಸೇರಿದಂತೆ ಇನ್ನು ಅನೇಕ ಖ್ಯಾತ ನಾಮರು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.