Don't Miss!
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ಸಿನಿಮಾ ನಿರ್ಮಾಪಕ ಕೆ ಬಾಲು ನಿಧನ
ತಮಿಳು ಸಿನಿಮಾ ನಿರ್ಮಾಪಕ ಕೆ.ಬಾಲು ನಿನ್ನೆ (ಜನವರಿ 1) ರಂದು ರಾತ್ರಿ ನಿಧನ ಹೊಂದಿದ್ದಾರೆ. ಅವರು ಕೆಲವು ದಿನಗಳ ಮುಂದೆ ಕೊರೊನಾ ವೈರಸ್ ಸೋಕಿಗೆ ತುತ್ತಾಗಿದ್ದರು. ಆದರೆ ಅವರ ಸಾವು ಹೃದಯಾಘಾತದಿಂದ ಆಗಿದೆ ಎಂದು ವೈದ್ಯರು ಹೇಳಿದ್ದಾರೆ. ಅವರ ಅಂತಿಮ ಸಂಸ್ಕಾರ ಇಂದು ಚೆನ್ನೈನ ಬೆಸೆಂಟ್ ನಗರದಲ್ಲಿ ನಡೆಯಲಿದೆ.
ಕೆಪಿ ಫಿಲಮ್ಸ್ ಹೆಸರಿನ ಪ್ರೊಡಕ್ಷನ್ ಹೌಸ್ ಹೊಂದಿದ್ದ ಕೆ.ಬಾಲು ಕೆಲವು ಉತ್ತಮ ತಮಿಳು ಸಿನಿಮಾಗಳನ್ನು ನಿರ್ಮಿಸಿದ್ದರು. ಕೆಲವು ಸಿನಿಮಾಗಳಿಗೆ ಸಹಾಯಕ ನಿರ್ಮಾಪಕರಾಗಿ, ವಿತರಕರಾಗಿ ಕಾರ್ಯ ನಿರ್ವಹಿಸಿದ್ದರು.
ಕೆ.ಬಾಲು ನಿಧನಕ್ಕೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ. ನಟ ಶರತ್ ಕುಮಾರ್ ಟ್ವೀಟ್ ಮಾಡಿ, 'ಕೆ.ಬಾಲು ನಿಧನ ಸುದ್ದಿ ಕೇಳಿ ಆಘಾತವಾಗಿದೆ. ಅವರ ಸಾವು ಚಿತ್ರರಂಗದಲ್ಲಿ ನಿರ್ವಾತ ಸೃಷ್ಟಿಸಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನನ್ನ ಮತ್ತು ನನ್ನ ಕುಟುಂಬದ ಕಡೆಯಿಂದ ಸಂತಾಪಗಳು' ಎಂದಿದ್ದಾರೆ.
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಧನಂಜಯ್ ಸಹ ಟ್ವೀಟ್ ಮಾಡಿದ್ದು, 'ಕೆ ಬಾಲು ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಬಹಳ ಬೇಸರದ ಸುದ್ದಿಯಿದು. ಅವರ ಆತ್ಮಕ್ಕೆ ಶಾಂತಿ ಸಿಗಲಿ' ಎಂದಿದ್ದಾರೆ.
Recommended Video
ಕೆ.ಬಾಲು ಅವರು 1991 ರಲ್ಲಿ ಚಿನ್ನತಂಬಿ, 1992 ರಲ್ಲಿ ಪಂಡಿತುರೈ, 1996 ರಲ್ಲಿ ಪಂಚಾಲಂಕುರಿಚಿ ಹಾಗೂ ಇನ್ನೂ ಕೆಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಕೆಲವು ಸಿನಿಮಾಗಳಿಗೆ ಸಹ ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದಾರೆ.