Just In
Don't Miss!
- News
"ಸಿಡಿ ಸ್ಫೋಟ" ದೂರಿನಿಂದ ದೂರ ಸರಿಯುವ ಕಲ್ಲಹಳ್ಳಿ ಮಾರ್ಗ ಬಂದ್?
- Sports
ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ, ದಿನಾಂಕ, ಸಮಯ ಹಾಗೂ ಸ್ಥಳ
- Finance
20 ತಿಂಗಳ ಬಳಿಕ ಗರಿಷ್ಠ ಮಟ್ಟ ತಲುಪಿದ ಕಚ್ಚಾ ತೈಲ ಬೆಲೆ
- Lifestyle
ಯಾವಾಗ ಅವಳಿ ಮಕ್ಕಳಾಗುವ ಸಾಧ್ಯತೆ ಹೆಚ್ಚು?
- Automobiles
ಬಿಡುಗಡೆಯಾಗಲಿದೆ ಲಾಂಗ್ ವೀಲ್ಹ್ಬೆಸ್ ಹೊಂದಿರುವ ಲ್ಯಾಂಡ್ ರೋವರ್ ಡಿಫೆಂಡರ್
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಸ್ಕರ್ ಸ್ಪರ್ಧೆಗೆ ದಕ್ಷಿಣ ಭಾರತದ ಮತ್ತೊಂದು ಸಿನಿಮಾ
ಸಿನಿಮಾ ಮಟ್ಟಿಗೆ ವಿಶ್ವದ ಸರ್ವೋತ್ತಮ ಪ್ರಶಸ್ತಿ ಎನ್ನಲಾಗುವ ಆಸ್ಕರ್ ಪ್ರಶಸ್ತಿಗೆ ಈ ಬಾರಿ ಎರಡು ದಕ್ಷಿಣ ಭಾರತದ ಸಿನಿಮಾಗಳು ಸ್ಪರ್ಧೆಗೆ ಹೊರಟಿವೆ.
ಮಲಯಾಳಂ ನ 'ಜಲ್ಲಿಕಟ್ಟು' ಸಿನಿಮಾವನ್ನು ಭಾರತದಿಂದ ಆಸ್ಕರ್ ಗೆ ಅಧಿಕೃತ ಆಯ್ಕೆ ರೂಪದಲ್ಲಿ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ದಕ್ಷಿಣ ಭಾರತದ ಸಿನಿಮಾ ಆಸ್ಕರ್ ಸ್ಪರ್ಧೆಗೆ ಹೊರಟಿದೆ.
ಕನ್ನಡಿಗನ ಕತೆ ಹೊಂದಿರುವ ಸೂರ್ಯ ನಟಿಸಿ ಸುಧಾ ಕೊಂಗರ ನಿರ್ದೇಶನದ 'ಸೂರರೈ ಪೊಟ್ರು' ಸಿನಿಮಾ ಆಸ್ಕರ್ಗೆ ಸ್ಪರ್ಧೆಯಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದೆ.
ಕನ್ನಡಿಗ ಕ್ಯಾಪ್ಟರ್ ಗೋಪಿನಾಥ್ ಅವರ ಜೀವನವನ್ನು ಸಿನಿಮಾ ಆಗಿಸಿದ್ದಾರೆ ನಿರ್ದೇಶಕಿ ಸುಧಾ ಕೊಂಗರ. ಸಿನಿಮಾದಲ್ಲಿ ನಟ ಸೂರ್ಯ, ಅಪರ್ಣಾ ಬಾಲಮುರಳಿ, ಪರೇಶ್ ರಾವಲ್, ಮೋಹನ್ಬಾಬು ಇನ್ನೂ ಹಲವರು ನಟಿಸಿದ್ದಾರೆ.
Big News: ಆಸ್ಕರ್ ಸ್ಪರ್ಧೆಗೆ ಆಯ್ಕೆಯಾದ ದಕ್ಷಿಣ ಭಾರತದ ಸಿನಿಮಾ
ಕೊರೊನಾ ಕಾರಣಕ್ಕೆ ಆಸ್ಕರ್ ಸ್ಪರ್ಧೆಯ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಒಟಿಟಿಗಳಲ್ಲಿ ಬಿಡುಗಡೆ ಆದ ಸಿನಿಮಾಗಳೂ ಸಹ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂಬ ನಿಯಮ ತರಲಾಗಿದೆ.
ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ, ನಟಿ, ಸಂಗೀತ, ನಿರ್ದೇಶನ, ಅತ್ಯುತ್ತಮ ಕತೆ ವಿಭಾಗದಲ್ಲಿ ಸ್ಪರ್ಧೆ ಮಾಡಲಿದೆ. ಆಸ್ಕರ್ ನ ಆಯ್ಕೆದಾರರು ಸಿನಿಮಾವನ್ನು ನೋಡಿ ಮುಂದಿನ ಸುತ್ತಿಗೆ ಆಯ್ಕೆ ಮಾಡಲಿದ್ದಾರೆ.
ಸೂರರೈ ಪೊಟ್ರು ಸಿನಿಮಾ ಆಸ್ಕರ್ ಮಾತ್ರವೇ ಅಲ್ಲದೆ ಗೋಲ್ಡನ್ ಗ್ಲೋಬ್ ಸ್ಪರ್ಧೆಯಲ್ಲಿಯೂ ಭಾಗವಹಿಸಲಿದೆ.