Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಸ್ಕರ್ ಸ್ಪರ್ಧೆಗೆ ದಕ್ಷಿಣ ಭಾರತದ ಮತ್ತೊಂದು ಸಿನಿಮಾ
ಸಿನಿಮಾ ಮಟ್ಟಿಗೆ ವಿಶ್ವದ ಸರ್ವೋತ್ತಮ ಪ್ರಶಸ್ತಿ ಎನ್ನಲಾಗುವ ಆಸ್ಕರ್ ಪ್ರಶಸ್ತಿಗೆ ಈ ಬಾರಿ ಎರಡು ದಕ್ಷಿಣ ಭಾರತದ ಸಿನಿಮಾಗಳು ಸ್ಪರ್ಧೆಗೆ ಹೊರಟಿವೆ.
ಮಲಯಾಳಂ ನ 'ಜಲ್ಲಿಕಟ್ಟು' ಸಿನಿಮಾವನ್ನು ಭಾರತದಿಂದ ಆಸ್ಕರ್ ಗೆ ಅಧಿಕೃತ ಆಯ್ಕೆ ರೂಪದಲ್ಲಿ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ದಕ್ಷಿಣ ಭಾರತದ ಸಿನಿಮಾ ಆಸ್ಕರ್ ಸ್ಪರ್ಧೆಗೆ ಹೊರಟಿದೆ.
ಕನ್ನಡಿಗನ ಕತೆ ಹೊಂದಿರುವ ಸೂರ್ಯ ನಟಿಸಿ ಸುಧಾ ಕೊಂಗರ ನಿರ್ದೇಶನದ 'ಸೂರರೈ ಪೊಟ್ರು' ಸಿನಿಮಾ ಆಸ್ಕರ್ಗೆ ಸ್ಪರ್ಧೆಯಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದೆ.
ಕನ್ನಡಿಗ ಕ್ಯಾಪ್ಟರ್ ಗೋಪಿನಾಥ್ ಅವರ ಜೀವನವನ್ನು ಸಿನಿಮಾ ಆಗಿಸಿದ್ದಾರೆ ನಿರ್ದೇಶಕಿ ಸುಧಾ ಕೊಂಗರ. ಸಿನಿಮಾದಲ್ಲಿ ನಟ ಸೂರ್ಯ, ಅಪರ್ಣಾ ಬಾಲಮುರಳಿ, ಪರೇಶ್ ರಾವಲ್, ಮೋಹನ್ಬಾಬು ಇನ್ನೂ ಹಲವರು ನಟಿಸಿದ್ದಾರೆ.
Big News: ಆಸ್ಕರ್ ಸ್ಪರ್ಧೆಗೆ ಆಯ್ಕೆಯಾದ ದಕ್ಷಿಣ ಭಾರತದ ಸಿನಿಮಾ
ಕೊರೊನಾ ಕಾರಣಕ್ಕೆ ಆಸ್ಕರ್ ಸ್ಪರ್ಧೆಯ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಒಟಿಟಿಗಳಲ್ಲಿ ಬಿಡುಗಡೆ ಆದ ಸಿನಿಮಾಗಳೂ ಸಹ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂಬ ನಿಯಮ ತರಲಾಗಿದೆ.
ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ, ನಟಿ, ಸಂಗೀತ, ನಿರ್ದೇಶನ, ಅತ್ಯುತ್ತಮ ಕತೆ ವಿಭಾಗದಲ್ಲಿ ಸ್ಪರ್ಧೆ ಮಾಡಲಿದೆ. ಆಸ್ಕರ್ ನ ಆಯ್ಕೆದಾರರು ಸಿನಿಮಾವನ್ನು ನೋಡಿ ಮುಂದಿನ ಸುತ್ತಿಗೆ ಆಯ್ಕೆ ಮಾಡಲಿದ್ದಾರೆ.
Recommended Video
ಸೂರರೈ ಪೊಟ್ರು ಸಿನಿಮಾ ಆಸ್ಕರ್ ಮಾತ್ರವೇ ಅಲ್ಲದೆ ಗೋಲ್ಡನ್ ಗ್ಲೋಬ್ ಸ್ಪರ್ಧೆಯಲ್ಲಿಯೂ ಭಾಗವಹಿಸಲಿದೆ.