Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳುನಾಡು ಚಿತ್ರಮಂದಿರಗಳ ಮೇಲೆ ನಿರ್ಬಂಧ: ಧನುಷ್, ವಿಜಯ್ ಸೇತುಪತಿ ಸಿನಿಮಾಗಳಿಗೆ ಸಂಕಷ್ಟ
ದೇಶದೆಲ್ಲೆಡೆ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿವೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಕೊರೊನಾದ ಎರಡನೇ ಅಲೆಯನ್ನು ತಡೆಯಲು ಹಲವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿವೆ.
ಮಹಾರಾಷ್ಟ್ರದಲ್ಲಿ ಚಿತ್ರಮಂದಿರಗಳನ್ನು ಬಂದ್ ಮಾಡಲಾಗಿದೆ, ಕರ್ನಾಟಕದಲ್ಲಿ 50% ಸೀಟು ಭರ್ತಿಗಷ್ಟೆ ಅವಕಾಶ ನೀಡಲಾಗಿದೆ. ಇಂದಿನಿಂದ ಪಕ್ಕದ ತಮಿಳುನಾಡಿನಲ್ಲಿ ಸಹ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಲಾಗಿದೆ.
ನಾಳೆಯಿಂದ (ಏಪ್ರಿಲ್ 09) ತಮಿಳುನಾಡಿನ ಚಿತ್ರಮಂದಿರಗಳಲ್ಲಿ 50% ಸೀಟು ಭರ್ತಿಗಷ್ಟೆ ಅವಕಾಶ ನೀಡಲಾಗಿದೆ. ಕಳೆದ ಎರಡು ತಿಂಗಳಿಂದಲೂ ತಮಿಳುನಾಡಿನ ಚಿತ್ರಮಂದಿರಗಳು 100% ಸೀಟು ಸಾಮರ್ಥ್ಯ ಬಳಸಿ ಕಾರ್ಯ ನಿರ್ವಹಿಸುತ್ತಿದ್ದವು. ಈಗ ಸರ್ಕಾರವು ಹೊರಡಿಸಿರುವ ಹೊಸ ಮಾರ್ಗಸೂಚಿಯಂತೆ 50% ಸೀಟುಗಳನ್ನಷ್ಟೆ ಭರ್ತಿ ಮಾಡಬಹುದಾಗಿದೆ.
ತಮಿಳುನಾಡು ಸರ್ಕಾರದ ಈ ನಿರ್ಧಾರದಿಂದ ಹಲವಾರು ತಮಿಳು ಸಿನಿಮಾಗಳು ಸಂಕಷ್ಟಕ್ಕೆ ಸಿಲುಕಿವೆ. ಧನುಷ್ ನಟನೆಯ 'ಕರ್ಣನ್' ಸಿನಿಮಾ ನಾಳೆ ಬಿಡುಗಡೆ ಆಗಲಿಕ್ಕಿದೆ. ಏಪ್ರಿಲ್ 14 ರಂದು ವಿಜಯ್ ಸೇತುಪತಿ-ಶ್ರುತಿ ಹಾಸನ್ ನಟನೆಯ 'ಲಾಭಂ' ಹಾಗೂ ಚಿಯಾನ್ ವಿಕ್ರಂ, ಕ್ರಿಕೆಟಿಗ ಇರ್ಫಾನ್ ಪಠಾಣ್ ನಟನೆಯ 'ಕೋಬ್ರಾ' ಸಿನಿಮಾ ಬಿಡುಗಡೆ ಆಗಲಿದೆ. ಕಂಗನಾ ರನೌತ್ ನಟನೆಯ 'ತಲೈವಿ' ಏಪ್ರಿಲ್ 23 ಕ್ಕೆ ಬಿಡುಗಡೆ ಆಗಲಿದೆ. ಇವು ಮಾತ್ರವಲ್ಲದೆ ಇನ್ನೂ ಹಲವು ಸಿನಿಮಾಗಳು ಇದೇ ತಿಂಗಳಲ್ಲಿ ಬಿಡುಗಡೆ ಆಗಲು ತಯಾರಾಗಿವೆ. ಸರ್ಕಾರದ ಹೊಸ ಆದೇಶದಿಂದ ಈ ಸಿನಿಮಾಗಳು ಸಂಕಷ್ಟ ಎದುರಿಸಲಿವೆ.
ತಮಿಳುನಾಡು ವಿಧಾನಸಭೆ ಚುನಾವಣೆಗೆ ಏಪ್ರಿಲ್ 06 ರಂದು ಮತದಾನ ನಡೆದಿದೆ. ಮತದಾನ ಮುಗಿದ ಬಳಿಕ ಸರ್ಕಾರವು ಈ ನಿರ್ಧಾರ ಕೈಗೊಂಡಿರುವುದು ಗಮನಿಸಬಹುದಾದ ಅಂಶ.
Recommended Video
ಚಿತ್ರಮಂದಿರಗಳ ಮೇಲೆ ನಿರ್ಬಂಧ ಇರುವಾಗಲೇ ವಿಜಯ್ ನಟನೆಯ 'ಮಾಸ್ಟರ್' ಸಿನಿಮಾ ಬಿಡುಗಡೆ ಆಗಿ ಕೋಟ್ಯಂತರ ಹಣ ಗಳಿಸಿ ದಾಖಲೆ ಬರೆದಿತ್ತು.