Don't Miss!
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- News 7th pay commission: ತುಟ್ಟಿ ಭತ್ಯೆ, ನಗರ ಪರಿಹಾರ ಭತ್ಯೆ, ಸೇವಾ ಭತ್ಯೆ ಸೇರಿದಂತೆ ಭತ್ಯೆಗಳ ಸಂಪೂರ್ಣ ವಿವರ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನ ಹಿರಿಯ ನಟ ಚೆಲ್ಲಾದುರೈ ನಿಧನ
ತಮಿಳು ಚಿತ್ರರಂಗಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ. ಖ್ಯಾತ ನಿರ್ದೇಶಕ ಕೆ.ವಿ ಆನಂದ್ ನಿಧನದ ಬೆನ್ನಲ್ಲೇ ಮತ್ತೊಂದು ಸಾವಿನ ಸುದ್ದಿ ಬರಸಿಡಿಲಿನಂತೆ ಬಡಿದಿದೆ. ತಮಿಳಿನ ಹಿರಿಯ ನಟ ಆರ್ ಎಸ್ ಜಿ ಚೆಲ್ಲಾದುರೈ ಗುರುವಾರ (ಏಪ್ರಿಲ್ 29) ಸಂಜೆ ಚೆನ್ನೈನ ತನ್ನ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
84 ವರ್ಷದ ಚೆಲ್ಲಾದುರೈ ಪೋಷಕ ನಟನಾಗಿ ಖ್ಯಾತಿಗಳಿಸಿದ್ದರು. ತಮಿಳಿನ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಜಯ್ ನಟನೆಯ ತೇರಿ, ಕತ್ತಿ ಮತ್ತು ನಟ ಧನುಷ್ ಅಭಿನಯದ ಮಾರಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಚೆಲ್ಲಾದುರೈ ಇನ್ನು ನೆನಪು ಮಾತ್ರ.
ಸೂರ್ಯ ನಟನೆಯ 'ಕಾಪ್ಪಾನ್' ಚಿತ್ರದ ನಿರ್ದೇಶಕ ಕೆ.ವಿ ಆನಂದ್ ನಿಧನ
ವಿಜಯ್ ನಾಯಕನಾಗಿ ಕಾಣಿಸಿಕೊಂಡಿದ್ದ ತೇರಿ ಸಿನಿಮಾದಲ್ಲಿ ಕಾಣೆಯಾದ ಮಗನನ್ನು ಹುಡುಕುವ ತಂದೆಯ ಪಾತ್ರದಲ್ಲಿ ಚೆಲ್ಲಾದುರೈ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಚೆಲ್ಲಾದುರೈ ಅಭಿನಯ ಪ್ರೇಕ್ಷಕರ ಮನಮುಟ್ಟುವಂತೆ ಇತ್ತು. ಚೆಲ್ಲಾದುರೈ ನಿಧನಕ್ಕೆ ತಮಿಳು ಸಿನಿಮಾರಂಗದ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
Recommended Video
ಕಳೆದ ಕೆಲವು ದಿನಗಳಲ್ಲಿ ಕಾಲಿವುಡ್ ಸಾಕಷ್ಟು ಮಂದಿಯನ್ನು ಕಳೆದುಕೊಂಡಿದೆ. ಇತ್ತೀಚಿಗಷ್ಟೆ ಖ್ಯಾತ ನಟ ವಿವೇಕ್ ಹೃದಯಾಘಾತದಿಂದ ನಿಧನರಾಗಿದ್ದರು. ವಿವೇಕ್ ಹಠಾತ್ ಅಗಲಿಕೆಯ ಶಾಕ್ ನಿಂದ ಹೊರಬರುವ ಮೊದಲೆ ಕಾಲಿವುಡ್ ಮತ್ತಿಬ್ಬರನ್ನು ಕಳೆದುಕೊಂಡಿದೆ.