Don't Miss!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- News ಗೃಹ ಸಚಿವ ಡಾ. ಜಿ ಪರಮೇಶ್ವರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನ ಹಿರಿಯ ನಟ ಚೆಲ್ಲಾದುರೈ ನಿಧನ
ತಮಿಳು ಚಿತ್ರರಂಗಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ. ಖ್ಯಾತ ನಿರ್ದೇಶಕ ಕೆ.ವಿ ಆನಂದ್ ನಿಧನದ ಬೆನ್ನಲ್ಲೇ ಮತ್ತೊಂದು ಸಾವಿನ ಸುದ್ದಿ ಬರಸಿಡಿಲಿನಂತೆ ಬಡಿದಿದೆ. ತಮಿಳಿನ ಹಿರಿಯ ನಟ ಆರ್ ಎಸ್ ಜಿ ಚೆಲ್ಲಾದುರೈ ಗುರುವಾರ (ಏಪ್ರಿಲ್ 29) ಸಂಜೆ ಚೆನ್ನೈನ ತನ್ನ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
84 ವರ್ಷದ ಚೆಲ್ಲಾದುರೈ ಪೋಷಕ ನಟನಾಗಿ ಖ್ಯಾತಿಗಳಿಸಿದ್ದರು. ತಮಿಳಿನ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಜಯ್ ನಟನೆಯ ತೇರಿ, ಕತ್ತಿ ಮತ್ತು ನಟ ಧನುಷ್ ಅಭಿನಯದ ಮಾರಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಚೆಲ್ಲಾದುರೈ ಇನ್ನು ನೆನಪು ಮಾತ್ರ.
ಸೂರ್ಯ ನಟನೆಯ 'ಕಾಪ್ಪಾನ್' ಚಿತ್ರದ ನಿರ್ದೇಶಕ ಕೆ.ವಿ ಆನಂದ್ ನಿಧನ
ವಿಜಯ್ ನಾಯಕನಾಗಿ ಕಾಣಿಸಿಕೊಂಡಿದ್ದ ತೇರಿ ಸಿನಿಮಾದಲ್ಲಿ ಕಾಣೆಯಾದ ಮಗನನ್ನು ಹುಡುಕುವ ತಂದೆಯ ಪಾತ್ರದಲ್ಲಿ ಚೆಲ್ಲಾದುರೈ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಚೆಲ್ಲಾದುರೈ ಅಭಿನಯ ಪ್ರೇಕ್ಷಕರ ಮನಮುಟ್ಟುವಂತೆ ಇತ್ತು. ಚೆಲ್ಲಾದುರೈ ನಿಧನಕ್ಕೆ ತಮಿಳು ಸಿನಿಮಾರಂಗದ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
Recommended Video
ಕಳೆದ ಕೆಲವು ದಿನಗಳಲ್ಲಿ ಕಾಲಿವುಡ್ ಸಾಕಷ್ಟು ಮಂದಿಯನ್ನು ಕಳೆದುಕೊಂಡಿದೆ. ಇತ್ತೀಚಿಗಷ್ಟೆ ಖ್ಯಾತ ನಟ ವಿವೇಕ್ ಹೃದಯಾಘಾತದಿಂದ ನಿಧನರಾಗಿದ್ದರು. ವಿವೇಕ್ ಹಠಾತ್ ಅಗಲಿಕೆಯ ಶಾಕ್ ನಿಂದ ಹೊರಬರುವ ಮೊದಲೆ ಕಾಲಿವುಡ್ ಮತ್ತಿಬ್ಬರನ್ನು ಕಳೆದುಕೊಂಡಿದೆ.