Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಳಪತಿ ವಿಜಯ್ ಪುತ್ರಿ ದಿವ್ಯಾ ಚಿತ್ರರಂಗದ ಎಂಟ್ರಿಗೆ ತಯಾರಿ
ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇತ್ತೀಚಿಗಷ್ಟೆ ವಿಜಯ್ ದಂಪತಿ 21ನೇ ವರ್ಷದ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಖ್ಯಾತ ಜೋಡಿಗೆ ಶುಭಾಶಯಗಳ ಸುರಿಮಳೆಯೇ ಹರಿದುಬಂದಿದೆ. ವಿಜಯ್ ಕುಟುಂಬದ ಬಗ್ಗೆ ಅಪಾರ ಗೌರವ ಮತ್ತು ಪ್ರೀತಿ ವ್ಯಕ್ತಪಡಿಸುವ ಅಭಿಮಾನಿಗಳಿಗೆ ಸಂತೋಷದ ಸುದ್ದಿಯೊಂದು ಕೇಳಿಬರುತ್ತಿದೆ.
Recommended Video
ವಿಜಯ್ ಪುತ್ರಿ ದಿವ್ಯಾ ಸದ್ಯದಲ್ಲೇ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ. ವಿಜಯ್ ಮತ್ತು ಸಂಗೀತಾ ದಂಪತಿಗೆ ಇಬ್ಬರು ಮಕ್ಕಳು. ಜಾಸನ್ ಸಂಜಯ್ ಮತ್ತು ದಿವ್ಯಾ ಶಾ. ಈ ಮೊದಲು ವಿಜಯ್ ಪುತ್ರ ಜಾಸನ್ ಸಂಜಯ್ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಪುತ್ರಿ ಕೂಡ ಎಂಟ್ರಿ ಕೊಡ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತೀಚಿಗಷ್ಟೆ ಟ್ವಿಟ್ಟರ್ ಗೆ ಎಂಟ್ರಿ ಕೊಟ್ಟಿರುವ ದಿವ್ಯಾಗೆ ಫಾಲೋವರ್ಸ್ ಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ಲಾಕ್ ಡೌನ್ ನಲ್ಲಿ ಸದ್ಯ ಮನೆಯಲ್ಲಿಯೇ ಇರುವ ವಿಜಯ್ ಪುತ್ರಿ ಸಿನಿಮಾ ಕಡೆ ಆಸಕ್ತಿ ತೋರಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಟಾರ್ ಮಕ್ಕಳು ಅಂದ್ಮೇಲೆ ಸಿನಿಮಾರಂಗಕ್ಕೆ ಎಂಟ್ರಿ ಕೊಡುವುದರಲ್ಲಿ ಅಚ್ಚರಿ ಏನಿಲ್ಲ. ಆದರೆ ಇನ್ನೂ ಓದುತ್ತಿರುವ ದಿವ್ಯಾ, ಇಷ್ಟು ಬೇಗ ಬಣ್ಣದ ಲೋಕಕ್ಕೆ ಬರ್ತಾರಾ ಎನ್ನುವುದು ಅಚ್ಚರಿ ಮೂಡಿಸಿದೆ. ವಿಶೇಷ ಅಂದರೆ ದಿವ್ಯಾ, ವಿಜಯ್ ಅಭಿನಯದ ಸಿನಿಮಾದಲ್ಲಿ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ತೆರೆಮೇಲೂ ವಿಜಯ್ ಮಗಳಾಗಿ ದಿವ್ಯಾ ನಟಿಸಿದ್ದಾರೆ.
ವಿಜಯ್ ಪುತ್ರಿಯ ಸಿನಿಮಾ ಎಂಟ್ರಿ ಬಗ್ಗೆ ಕುಟುಂಬದವರು ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ. ಆದರೆ ವಿಜಯ್ ಪುತ್ರಿ ಸದ್ಯದಲ್ಲೇ ಬಣ್ಣ ಹಚ್ಚಲಿದ್ದಾರೆ ಎನ್ನುವ ಸುದ್ದಿ ಮಾತ್ರ ಹರಿದಾಡುತ್ತಿದೆ. 14 ವರ್ಷದ ದಿವ್ಯಾ ಅಪ್ಪನ ಹಾಗೆ ಸಿನಿಮಾರಂಗದಲ್ಲಿ ಸಕ್ರೀಯರಾಗುತ್ತಾರಾ? ಅಥವಾ ಓದು ಮುಂದುವರೆಸುತ್ತಾರಾ ಎನ್ನುವುದನ್ನು ಕಾದುನೋಡಬೇಕು.