Don't Miss!
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಎಸ್ಪಿಬಿ ಬೇಗ ಹಾಡುವಂತಾಗಲಿ....' ಮಂಗಳಮುಖಿಯರು ಪ್ರಾರ್ಥನೆ
ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರು ಆದಷ್ಟೂ ಬೇಗ ಮತ್ತೆ ಹಾಡುವಂತಾಗಲಿ ಎಂದು ಮಂಗಳಮುಖಿಯರು ಇಂದು ಆಸ್ಪತ್ರೆ ಎದುರು ಪ್ರಾರ್ಥನೆ ಮಾಡಿರುವ ಘಟನೆ ವರದಿಯಾಗಿದೆ.
Recommended Video
ಎಸ್ಪಿಬಿ ದಾಖಲಾಗಿರುವ ಎಂಜಿಎಂ ಆಸ್ಪತ್ರೆ ಬಳಿ ಬಂದ ಮಂಗಳಮುಖಿಯರು, ಬಾಲಸುಪ್ರಬ್ರಹ್ಮಣ್ಯಂ ಅವರು ಬೇಗ ಚೇತರಿಸಿಕೊಳ್ಳಲಿ, ಗುಣಮುಖರಾಗಿ ಬೇಗ ಡಿಸ್ಚಾರ್ಜ್ ಆಗಲಿ, ಮೊದಲಿನಂತೆ ಹಾಡುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
'ಅಣ್ಣಯ್ಯ ಬೇಗ ಬನ್ನಿ...' ಎಸ್ಪಿಬಿ ಕುರಿತು ಚಿರಂಜೀವಿ ಭಾವುಕ
ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ವಿಯನ್ ಧರ್ಮದ ಮಂಗಳಮುಖಿಯರು ಎಲ್ಲರೂ ಒಟ್ಟಾಗಿ ಯೇಸು ಕ್ರಿಸ್ತ, ಅಲ್ಲಾ ಹಾಗೂ ರಾಮ ಹೆಸರಿನಲ್ಲಿ ಪ್ರಾರ್ಥನೆ ಮಾಡಿದ್ದು ವಿಶೇಷವಾಗಿತ್ತು.
ಕೊರೊನಾ ವೈರಸ್ಗೆ ತುತ್ತಾಗಿರುವ ಗಾಯಕ ಎಸ್ಪಿಬಿ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಅವರನ್ನು ಐಸಿಯುಗೆ ಶಿಫ್ಟ್ ಮಾಡಿ ಗಮನ ಚಿಕಿತ್ಸೆ ಮುಂದುವರಿಸಲಾಗಿತ್ತು. ಸ್ವತಃ ವೈದ್ಯರು ಸಹ ಎಸ್ಪಿಬಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ಮಾಹಿತಿ ನೀಡಿದ್ದರು.
ಇದೀಗ, ಎಸ್ಪಿಬಿ ಆರೋಗ್ಯದಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಕಳೆದ ಮೂರು ದಿನಕ್ಕೆ ಹೋಲಿಸಿಕೊಂಡರೆ ಸದ್ಯದ ಸ್ಥಿತಿ ಉತ್ತಮ ಎನ್ನಬಹುದು. ವೈದ್ಯರು ಸಹ ಪಾಸಿಟಿವ್ ಆಗಿದ್ದಾರೆ ಎಂದು ತಿಳಿದು ಬಂದಿದೆ.