Don't Miss!
- News ಕೊಳ್ಳೇಗಾಲ ಶಾಸಕರ ಕಾರು ಅಪಘಾತ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುದುರೆ ಸವಾರಿ ವೇಳೆ ಗಾಯಗೊಂಡ ನಟಿ ತ್ರಿಷಾ ಕೃಷ್ಣನ್
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕುದುರೆ ಸವಾರಿ ಕಲಿಯುವ ವೇಳೆ ಗಾಯಗೊಂಡಿದ್ದಾರೆ ಎನ್ನವ ಸುದ್ದಿ ಕೇಳಿ ಬರುತ್ತಿದೆ. ತ್ರಿಷಾ ಸದ್ಯ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶದ ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾಗಾಗಿ ತ್ರಿಷಾ ಕುದುರೆ ಸವಾರಿ ಕಲಿಯುತ್ತಿದ್ದಾರೆ. ತರಬೇತಿ ವೇಳೆ ತ್ರಿಷಾ ಕೈಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಇತ್ತೀಚಿಗೆ ತ್ರಿಷಾ ತನ್ನ ಮುದ್ದಿನ ಕುದುರೆ ಜೊತೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಸಿನಿಮಾಗಾಗಿ ತ್ರಿಷಾ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಲಾಕ್ ಡೌನ್ ಗೂ ಮೊದಲೇ ಚಿತ್ರದ ಚಿತ್ರೀಕರಣ ಪ್ರಾರಂಭಮಾಡಿರುವ ಸಿನಿಮಾತಂಡ ಲಾಕ್ ಬಳಿಕ ಇನ್ನೂ ಶೂಟಿಂಗ್ ಶುರುಮಾಡಿಲ್ಲ. ಆದರೆ ಕಲಾವಿದರು ಪಾತ್ರದ ತಯಾರಿಯಲ್ಲಿ ನಿರತರಾಗಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ 7 ಪೋಸ್ಟ್ ಗಳನ್ನು ಬಿಟ್ಟು ಎಲ್ಲಾ ಡಿಲೀಟ್ ಮಾಡಿದ ನಟಿ ತ್ರಿಷಾ
ಬಹುತಾರಗಣವಿರುವ ಈ ಸಿನಿಮಾದಲ್ಲಿ ತ್ರಿಷಾ ಚೋಳ ರಾಣಿ ಕುಂದವಾಯಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವಿಶೇಷ ಎಂದರೆ ಚಿತ್ರದಲ್ಲಿ ನಟಿ ಐಶ್ವರ್ಯ ರೈ ಸಹ ನಟಿಸುತ್ತಿದ್ದಾರೆ. ಮೂಲಗಳ ಪ್ರಕಾರ ಐಶ್ವರ್ಯ ರೈ ನಂದಿನಿ ದೇವಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದು ನೆಗೆಟಿವ್ ಪಾತ್ರ ಎನ್ನಲಾಗುತ್ತಿದೆ. ತ್ರಿಷಾ ಮತ್ತು ಐಶ್ವರ್ಯ ಅವರ ಮುಖಾಮುಖಿಯಾಗುವ ಪ್ರಬಲ ದೃಶ್ಯಗಳು ಈ ಸಿನಿಮಾದಲ್ಲಿ ಇದಿಯಂತೆ.
ಇನ್ನೂ ಸಿನಿಮಾದಲ್ಲಿ ತಮಿಳು ನಟ ಕಾರ್ತಿ, ಜಯಂ ರವಿ ನಾಯಕನಾಗಿ ನಟಿಸುತ್ತಿದ್ದಾರೆ. ಕಾರ್ತಿ ವಾಂಧಿಯಾ ದೇವನ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಜಯಂ ರವಿ ರಾಜರಾಜ ಚೋಳನ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಇನ್ನೂ ನಟ ಚಿಯಾನ್ ವಿಕ್ರಮ್ ಆದಿತ್ಯ ಕರಿಕಾಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
Recommended Video
ಸದ್ಯ ಚಿತ್ರೀಕರಣಕ್ಕೆ ಬ್ರೇಕ್ ಹಾಕಿರುವ ಸಿನಿಮಾತಂಡ ದೀಪಾವಳಿಯ ಬಳಿಕ ಚಿತ್ರೀಕರಣ ಪ್ರಾರಂಭ ಮಾಡುವ ಸಾದ್ಯತೆ ಇದೆ. ಈಗಾಗಲೇ ಎಲ್ಲರೂ ಪಾತ್ರಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನೇಕ ವರ್ಷಗಳ ಬಳಿಕ ನಟಿ ಐಶ್ವರ್ಯ ರೈ ತಮಿಳು ಚಿತ್ರರಂಗದಲ್ಲಿ ನಟಿಸುತ್ತಿದ್ದಾರೆ. ಭಾರಿ ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಮುಂದಿನ ವರ್ಷ ತೆರೆಗೆ ಬರುವ ಸಾದ್ಯತೆ ಇದೆ.