Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನ ಖ್ಯಾತ ಹಾಸ್ಯ ನಟ ವಡಿವೇಲು ಬಾಲಾಜಿ ನಿಧನ: ಕುಟುಂಬಕ್ಕೆ ವಿಜಯ್ ಸೇತುಪತಿ ಆರ್ಥಿಕ ನೆರವು
ತಮಿಳು ಕಿರುತೆರೆಯ ಖ್ಯಾತ ಹಾಸ್ಯ ನಟ ವಡಿವೇಲು ಬಾಲಾಜಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 45 ವರ್ಷದ ನಟ ಬಾಲಾಜಿ ನಿನ್ನೆ (ಸೆಪ್ಟಂಬರ್ 10) ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಾಲಾಜಿ ನಿಧನಕ್ಕೆ ಅಭಿಮಾನಿಗಳು, ತಮಿಳು ನಟರು ಸಂತಾಪ ಸೂಚಿಸಿದ್ದಾರೆ.
ನಟ ವಿಜಯ್ ಸೇತುಪತಿ, ರೋಬೊ ಶಂಕರ್ ಸೇರಿದಂತೆ ಅನೇಕರು ವಡಿವೇಲು ಅಂತಿಮ ದರ್ಶನ ಪಡೆದು, ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ನಟ ಧನುಷ್ ವಡಿವೇಲು ಬಾಲಾಜಿ ಹಠಾತ್ ನಿಧನ ತೀವ್ರ ದುಃಖ ತಂದಿದೆ. ಆವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ. ವಡಿವೇಲು ಬಾಲಾಜಿ, ಪತ್ನಿ ಒಬ್ಬ ಮಗ ಮತ್ತು ಮಗಳನ್ನು ಅಗಲಿದ್ದಾರೆ. ಮುಂದೆ ಓದಿ...
ನಾನು ತುಂಬಾ ಕ್ರೂರ ವಿಲನ್: 'ಮಾಸ್ಟರ್' ಸಿನಿಮಾದ ಪಾತ್ರದ ಬಗ್ಗೆ ವಿಜಯ್ ಸೇತುಪತಿ ಮಾತು
ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು
ಕಿರುತೆರೆಯ ಮನರಂಜನಾ ಕಾರ್ಯಕ್ರಮಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದ ವಡಿವೇಲು ಬಾಲಾಜಿ ಅವರಿಗೆ ಕಳೆದ ಎರಡು ವಾರಗಳ ಹಿಂದೆ ಹೃದಯಾಘಾತವಾಗಿತ್ತು. ಬಳಿಕ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟು ಪಾರ್ಶ್ವವಾಯುವಿಗೆ ಕಾರಣವಾಯಿತು. ಅಲ್ಲಿಂದ ಅವರನ್ನು ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಹಣವಿಲ್ಲದೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ
ವೆಂಟಿಲೇಟರ್ ನಲ್ಲಿ ಬಾಲಾಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಖಾಸಗಿ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವಾಗದೆ, ಕುಟುಂಬದವರು ಬಾಲಾಜಿಯನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಅಲ್ಲು ಅರ್ಜುನ್ 'ಪುಷ್ಪ' ಸಿನಿಮಾದಿಂದ ಹೊರಬಂದ ನಟ ವಿಜಯ್ ಸೇತುಪತಿ ಹೇಳಿದ್ದೇನು?
ಕುಟುಂಬಕ್ಕೆ ನೆರವಾದ ವಿಜಯ್ ಸೇತುಪತಿ
ಲಾಕ್ ಡೌನ್ ಸಮಯದಲ್ಲಿ ವಡಿವೇಲು ಬಾಲಾಜಿ ಕುಟುಂಬ ತೀವ್ರ ಆರ್ಥಿಕ ಸಂಕಷ್ಟ ಎದುರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ನಟ ವಿಜಯ್ ಸೇತುಪತಿ ವಡಿವೇಲು ಬಾಲಾಜಿ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಅಲ್ಲದೆ ಯಾವುದೇ ಸಹಾಯ ಬೇಕಾದರು ಸಂಪರ್ಕಿಸುವಂತೆ ಹೇಳಿದ್ದಾರಂತೆ.
Recommended Video
ಹಿರಿಯ ನಟ ವಡಿವೇಲು ಅಭಿಮಾನಿ
ವಡಿವೇಲು ಬಾಲಾಜಿ ಕಿರುತೆರೆ ಜೊತೆಗೆ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಹಿರಿಯ ಹಾಸ್ಯನಟ ವಡಿವೇಲು ಅವರ ಅಭಿಮಾನಿಯಾಗಿರುವ ಬಾಲಾಜಿ, ಅವರನ್ನೇ ಅನುಕರಣೆ ಮಾಡುತ್ತ ಖ್ಯಾತಿ ಪಡೆದಿದ್ದರು. ಅಲ್ಲದೆ ಬಾಲಾಜಿ ಹೆಸರು ಜೊತೆ ವಡಿವೇಲು ಬಾಲಾಜಿ ಎಂದು ಸೇರಿಸಿಕೊಂಡಿದ್ದಾರೆ. ಬಾಲಾಜಿ ಕೊನೆಯದಾಗಿ 2018ರಲ್ಲಿ ನಯನತಾರಾ ಅಭಿನಯದ 'ಕೋಲಮಾವು ಕೋಕಿಲಾ' ಸಿನಿಮಾದಲ್ಲಿ ನಟಿಸಿದ್ದಾರೆ.