Don't Miss!
- Automobiles Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- News Bengaluru Suburban Rail Project: ಹಳ್ಳ ಹಿಡಿದ ₹15,767 ಕೋಟಿ ವೆಚ್ಚದ ಕಾಮಗಾರಿ, ಜನಸಾಮಾನ್ಯರು ಹೇಳೋದೇನು ಗೊತ್ತಾ?
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೈಕಲ್ ನಲ್ಲಿ ಬಂದು ಮತಚಲಾಯಿಸಿ ಸಂಚಲನ ಮೂಡಿಸಿದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ನಟ ವಿಜಯ್
ತಮಿಳು ಸಿನಿಮಾರಂಗದ ಖ್ಯಾತ ನಟ ವಿಜಯ್ ವಿದೇಶಕ್ಕೆ ಪಯಣ ಬೆಳೆಸಿದ್ದಾರೆ. ನಿನ್ನೆ (ಏಪ್ರಿಲ್ 6) ರಾತ್ರಿ ದಳಪತಿ ಏರ್ ಪೋರ್ಟ್ ನಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಿನ್ನೆ (ಏಪ್ರಿಲ್ 6) ತಮಿಳುನಾಡು ವಿಧಾನಸಭೆ ಚುನಾವಣೆ ನಡೆದಿದ್ದು, ನಟ ವಿಜಯ್ ಸೈಕಲ್ ನಲ್ಲಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸುವ ಮೂಲಕ ಸಂಚಲನ ಮೂಡಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧ ವಿಜಯ್ ಅಸಮಾಧಾನ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ದಳಪತಿಯ ಪ್ರತಿಭಟನೆ ಎನ್ನುವ ಚರ್ಚೆ ಜೋರಾಗಿ ನಡೆದಿತ್ತು.
ಮತಚಲಾಯಿಸಲು ಸೈಕಲ್ ಏರಿ ಬಂದ ವಿಜಯ್; ಸ್ಪಷ್ಟನೆ ನೀಡಿದ ದಳಪತಿ ಟೀಂ
ಇದರ ಬೆನ್ನಲ್ಲೇ ವಿಜಯ್ ವಿದೇಶಕ್ಕೆ ಹಾರಿದ್ದಾರೆ. ಅಂದಹಾಗೆ ವಿಜಯ್ ವಿದೇಶಕ್ಕೆ ವಿಮಾನ ಹತ್ತಿರುವುದು ಸಿನಿಮಾ ಚಿತ್ರೀಕರಣಕ್ಕಾಗಿ. ಇತ್ತೀಚಿಗಷ್ಟೆ ದಳಪತಿ 65 ಸಿನಿಮಾ ಅನೌನ್ಸ್ ಆಗಿದ್ದು, ಮುಹೂರ್ತ ಕೂಡ ನಡೆದಿತ್ತು. ಇದೀಗ ಮೊದಲ ಹಂತದ ಚಿತ್ರೀಕರಣವನ್ನು ಜಾರ್ಜಿಯಾದಲ್ಲಿ ಮಾಡಲು ಸಿನಿಮಾತಂಡ ನಿರ್ಧರಿಸಿದೆ.
ಹಾಗಾಗಿ ರಾತ್ರಿ ವಿಜಯ್ ಮತ್ತು ತಂಡ ಜಾರ್ಜಿಯಾಗೆ ಹಾರಿದ್ದಾರೆ. ವಿಜಯ್ ಏರ್ ಪೋರ್ಟ್ ನಲ್ಲಿರುವ ಫೋಟೋವನ್ನು ಅಭಿಮಾನಿಗಳು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋ ಈಗ ಫ್ಯಾನ್ಸ್ ಪೇಜ್ ಗಳಲ್ಲಿ ಹರಿದಾಡುತ್ತಿದೆ.
ದಳಪತಿ 65 ಚಿತ್ರಕ್ಕೆ ನೆಲ್ಸನ್ ದಿಲೀಪ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಿಜಯ್ ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಪೂಜಾ ವಿಜಯ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಖತ್ ಎಕ್ಸಾಯಿಟ್ ಆಗಿರುವ ಪೂಜಾ ಚಿತ್ರೀಕರಣದಲ್ಲಿ ಭಾಗಿಯಾಗುವುದನ್ನು ಎದುರು ನೋಡುತ್ತಿದ್ದೀನಿ ಎಂದು ಟ್ವೀಟ್ ಮಾಡಿದ್ದರು.
Recommended Video
16 ದಿನಗಳ ಕಾಲ ವಿಜಯ್ ಮತ್ತು ತಂಡ ಜಾರ್ಜಿಯಾದಲ್ಲಿ ಚಿತ್ರೀಕರಣ ಮಾಡಲು ಪ್ಲಾನ್ ಮಾಡಿಕೊಂಡಿದೆ. ಬಳಿಕ ಮತ್ತೆ ಚೆನ್ನೈಗೆ ವಾಪಸ್ ಆಗಲಿದೆ. ಮೇ ತಿಂಗಳಿಂದ ಚೆನ್ನೈನಲ್ಲಿ 2ನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ. ವಿಜಯ್ ಕೊನೆಯದಾಗಿ ಮಾಸ್ಟರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.