Don't Miss!
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- News Dr.Rajkumar: ಹುಟ್ಟೂರಲ್ಲಿ ಮುತ್ತುರಾಜಣ್ಣನ ನೆನಪುಗಳು ನೂರಾರು.. ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳು ಇಲ್ಲಿವೆ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೈಕಲ್ ನಲ್ಲಿ ಬಂದು ಮತಚಲಾಯಿಸಿ ಸಂಚಲನ ಮೂಡಿಸಿದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ನಟ ವಿಜಯ್
ತಮಿಳು ಸಿನಿಮಾರಂಗದ ಖ್ಯಾತ ನಟ ವಿಜಯ್ ವಿದೇಶಕ್ಕೆ ಪಯಣ ಬೆಳೆಸಿದ್ದಾರೆ. ನಿನ್ನೆ (ಏಪ್ರಿಲ್ 6) ರಾತ್ರಿ ದಳಪತಿ ಏರ್ ಪೋರ್ಟ್ ನಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಿನ್ನೆ (ಏಪ್ರಿಲ್ 6) ತಮಿಳುನಾಡು ವಿಧಾನಸಭೆ ಚುನಾವಣೆ ನಡೆದಿದ್ದು, ನಟ ವಿಜಯ್ ಸೈಕಲ್ ನಲ್ಲಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸುವ ಮೂಲಕ ಸಂಚಲನ ಮೂಡಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧ ವಿಜಯ್ ಅಸಮಾಧಾನ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ದಳಪತಿಯ ಪ್ರತಿಭಟನೆ ಎನ್ನುವ ಚರ್ಚೆ ಜೋರಾಗಿ ನಡೆದಿತ್ತು.
ಮತಚಲಾಯಿಸಲು ಸೈಕಲ್ ಏರಿ ಬಂದ ವಿಜಯ್; ಸ್ಪಷ್ಟನೆ ನೀಡಿದ ದಳಪತಿ ಟೀಂ
ಇದರ ಬೆನ್ನಲ್ಲೇ ವಿಜಯ್ ವಿದೇಶಕ್ಕೆ ಹಾರಿದ್ದಾರೆ. ಅಂದಹಾಗೆ ವಿಜಯ್ ವಿದೇಶಕ್ಕೆ ವಿಮಾನ ಹತ್ತಿರುವುದು ಸಿನಿಮಾ ಚಿತ್ರೀಕರಣಕ್ಕಾಗಿ. ಇತ್ತೀಚಿಗಷ್ಟೆ ದಳಪತಿ 65 ಸಿನಿಮಾ ಅನೌನ್ಸ್ ಆಗಿದ್ದು, ಮುಹೂರ್ತ ಕೂಡ ನಡೆದಿತ್ತು. ಇದೀಗ ಮೊದಲ ಹಂತದ ಚಿತ್ರೀಕರಣವನ್ನು ಜಾರ್ಜಿಯಾದಲ್ಲಿ ಮಾಡಲು ಸಿನಿಮಾತಂಡ ನಿರ್ಧರಿಸಿದೆ.
ಹಾಗಾಗಿ ರಾತ್ರಿ ವಿಜಯ್ ಮತ್ತು ತಂಡ ಜಾರ್ಜಿಯಾಗೆ ಹಾರಿದ್ದಾರೆ. ವಿಜಯ್ ಏರ್ ಪೋರ್ಟ್ ನಲ್ಲಿರುವ ಫೋಟೋವನ್ನು ಅಭಿಮಾನಿಗಳು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋ ಈಗ ಫ್ಯಾನ್ಸ್ ಪೇಜ್ ಗಳಲ್ಲಿ ಹರಿದಾಡುತ್ತಿದೆ.
ದಳಪತಿ 65 ಚಿತ್ರಕ್ಕೆ ನೆಲ್ಸನ್ ದಿಲೀಪ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಿಜಯ್ ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಪೂಜಾ ವಿಜಯ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಖತ್ ಎಕ್ಸಾಯಿಟ್ ಆಗಿರುವ ಪೂಜಾ ಚಿತ್ರೀಕರಣದಲ್ಲಿ ಭಾಗಿಯಾಗುವುದನ್ನು ಎದುರು ನೋಡುತ್ತಿದ್ದೀನಿ ಎಂದು ಟ್ವೀಟ್ ಮಾಡಿದ್ದರು.
Recommended Video
16 ದಿನಗಳ ಕಾಲ ವಿಜಯ್ ಮತ್ತು ತಂಡ ಜಾರ್ಜಿಯಾದಲ್ಲಿ ಚಿತ್ರೀಕರಣ ಮಾಡಲು ಪ್ಲಾನ್ ಮಾಡಿಕೊಂಡಿದೆ. ಬಳಿಕ ಮತ್ತೆ ಚೆನ್ನೈಗೆ ವಾಪಸ್ ಆಗಲಿದೆ. ಮೇ ತಿಂಗಳಿಂದ ಚೆನ್ನೈನಲ್ಲಿ 2ನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ. ವಿಜಯ್ ಕೊನೆಯದಾಗಿ ಮಾಸ್ಟರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.