Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Breaking: ಮುರಳೀಧರನ್ ಬಯೋಪಿಕ್ಗೆ ಗುಡ್ ಬೈ ಹೇಳಿದ ವಿಜಯ್ ಸೇತುಪತಿ
ಶ್ರೀಲಂಕಾ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ ಘೋಷಣೆ ಆದ ಸಂದರ್ಭದಿಂದಲೂ ಅದರ ಸುತ್ತ ವಿವಾದ ಅಂಟಿಕೊಂಡಿದೆ. ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಈ ಚಿತ್ರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ವಿಜಯ್ ಸೇತುಪತಿ ಈ ಸಿನಿಮಾ ಮಾಡಬಾರದು ಎಂದು ಒತ್ತಾಯ ಹಾಕುತ್ತಿದ್ದರು.
ವಿಜಯ್ ಸೇತುಪತಿ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಇದೀಗ, ಸ್ವತಃ ಮುತ್ತಯ್ಯ ಮುರಳೀಧರನ್ '800' ಚಿತ್ರದ ಕುರಿತು ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದ್ದು, ವಿಜಯ್ ಸೇತುಪತಿ ಅವರಿಗೆ ಈ ಸಿನಿಮಾ ಮಾಡದಂತೆ ಮನವಿ ಮಾಡಿದ್ದಾರೆ. ಮುರಳೀಧರನ್ ಹೇಳಿಕೆ ಬೆನ್ನಲ್ಲೆ ಸೇತುಪತಿ ಸಹ ಈ ಪ್ರಾಜೆಕ್ಟ್ನಿಂದ ಹೊರಬಂದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಿ....
ಬಯೋಪಿಕ್ ಮಾಡಲು ಕಾರಣ ಬಿಚ್ಚಿಟ್ಟ ಶ್ರೀಲಂಕಾ ಕ್ರಿಕೆಟಿಗ, ವಿವಾದದ ಬಗ್ಗೆ ಮುರಳೀಧರನ್ ಸ್ಪಷ್ಟನೆ
ನಟಿಸಬೇಡಿ ಎಂದು ಮನವಿ ಮಾಡಿದ ಮುತ್ತಯ್ಯ
''800'' ಹೆಸರಿನಲ್ಲಿ ತಯಾರಾಗಬೇಕಿದ್ದ ಶ್ರೀಲಂಕಾದ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಬಯೋಪಿಕ್ನಿಂದ ಚಿತ್ರದಿಂದ ನಟ ವಿಜಯ್ ಸೇತುಪತಿ ಹಿಂದೆ ಸರಿಯಬೇಕೆಂದು ಮನವಿ ಮಾಡಿದ್ದಾರೆ. ಬಯೋಪಿಕ್ ಸಿನಿಮಾ ಎದುರಿಸುತ್ತಿರುವ ವಿವಾದ ಕುರಿತು ಅಧಿಕೃತ ಹೇಳಿಕೆ ನೀಡಿರುವ ಮುರಳೀಧರನ್ ''ವಿಜಯ್ ಸೇತುಪತಿ ಅವರಿಗೆ ತೊಂದರೆ ಆಗುವುದು ನನಗೆ ಇಷ್ಟ ಇಲ್ಲ, ಈ ಸಿನಿಮಾದಿಂದ ಹಿಂದೆ ಸರಿಯಿರಿ'' ಎಂದು ಕೇಳಿದ್ದಾರೆ.
ವಿಜಯ್ ಸೇತುಪತಿ ಸಮ್ಮತಿ
ಮುತ್ತಯ್ಯ ಮುರಳೀಧರನ್ ಅವರ ಅಧಿಕೃತ ಹೇಳಿಕೆ ಬಿಡುಗಡೆಯಾದ ಬಳಿಕ ಅದನ್ನು ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ನಟ ವಿಜಯ್ ಸೇತುಪತಿ ''ಥ್ಯಾಂಕ್ಸ....ಗುಡ್ ಬೈ'' ಎಂದು ಹೇಳಿದ್ದಾರೆ. ಹಾಗಾಗಿ, 800 ಚಿತ್ರದಿಂದ ಸೇತುಪತಿ ಹಿಂದೆ ಸರಿದಿರುವುದನ್ನು ಖಚಿತಪಡಿಸಿದ್ದಾರೆ ಎಂದು ಅಭಿಮಾನಿಗಳು ನಂಬಿದ್ದಾರೆ.
ವಿಜಯ್ ಸೇತುಪತಿ ಬೆಂಬಲಕ್ಕೆ ನಿಂತ ರಾಧಿಕಾ: ಅವರು ಕೇಳಿದ್ರಲ್ಲಿ ಲಾಜಿಕ್ ಇದೆ!
ಮುರಳೀಧರನ್ ಹೇಳಿಕೆಯಲ್ಲಿ ಏನಿದೆ?
''ನನ್ನ ಆತ್ಮಚರಿತ್ರೆಯ ಚಿತ್ರ ''800''ರ ಸುತ್ತ ತಮಿಳುನಾಡಿನಲ್ಲಿ ಉಂಟಾದ ವಿವಾದದ ಬಗ್ಗೆ ನನ್ನ ಹೇಳಿಕೆ ಬಿಡುಗಡೆ ಮಾಡುತ್ತಿದ್ದೇನೆ. ''800'' ಚಿತ್ರವನ್ನು ತೊರೆಯುವಂತೆ ನಟ ವಿಜಯ್ ಸೇತುಪತಿ ಅವರಿಗೆ ಅನೇಕರು ಒತ್ತಡ ಹೇರುತ್ತಿರುವುದು ನನಗೆ ತಿಳಿದಿದೆ. ವಿಜಯ್ ಸೇತುಪತಿ ಅವರ ವೃತ್ತಿಜೀವನದಲ್ಲಿ ಅನಗತ್ಯವಾಗಿ ಅಡ್ಡಿಯಾಗಬಾರದು ಎಂದು ಪರಿಗಣಿಸಿ ಚಿತ್ರದಿಂದ ಹಿಂದೆ ಸರಿಯುವಂತೆ ನಾನು ವಿನಂತಿಸುತ್ತೇನೆ'' ಎಂದು ಕೇಳಿಕೊಂಡಿದ್ದಾರೆ.
ಯುವ ಕ್ರಿಕೆಟಿಗರಿಗೆ ಇದು ಸ್ಫೂರ್ತಿ
''ಪ್ರತಿ ಬಾರಿಯೂ ನನಗೆ ಬರುವ ಅಡೆತಡೆಗಳಿಂದ ನಾನು ಎಂದಿಗೂ ಆಯಾಸವಾಗುವುದಿಲ್ಲ. ಅದನ್ನೆಲ್ಲ ಮೀರಿ ನಾನು ಈ ಹಂತವನ್ನು ತಲುಪಲು ಸಾಧ್ಯವಾಯಿತು. ಭವಿಷ್ಯದ ಪೀಳಿಗೆಗೆ ಮತ್ತು ಯುವ ಕ್ರಿಕೆಟಿಗರಿಗೆ ಇದು ಸ್ಫೂರ್ತಿ ನೀಡುತ್ತದೆ ಎಂಬ ಭರವಸೆಯಿಂದ ನನ್ನ ಆತ್ಮಚರಿತ್ರೆಯನ್ನು ಚಿತ್ರೀಕರಿಸಲು ಒಪ್ಪಿಕೊಂಡೆ. ಅದೂ ಈಗ ನಿರ್ಬಂಧಗಳಿಗೆ ಒಳಪಟ್ಟಿದೆ.
Recommended Video
ಎಲ್ಲರಿಗೂ ಧನ್ಯವಾದಗಳು
''ಖಂಡಿತವಾಗಿಯೂ ಈ ಎಲ್ಲ ಅಡೆತಡೆಗಳನ್ನು ಅವರು ಬಗೆಹರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಪ್ರಕಟಣೆ ಶೀಘ್ರದಲ್ಲೇ ಬರಲಿದೆ ಎಂದು ನಿರ್ಮಾಣ ಸಂಸ್ಥೆ ನನಗೆ ಭರವಸೆ ನೀಡಿದೆ ಮತ್ತು ಅವರ ಎಲ್ಲ ಪ್ರಯತ್ನಗಳನ್ನು ನಾನು ಬೆಂಬಲಿಸುತ್ತೇನೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ಈ ಪರಿಸ್ಥಿತಿಯಲ್ಲಿ ಬೆಂಬಲ ನೀಡಿದ ಎಲ್ಲ ಪತ್ರಿಕಾ ಸ್ನೇಹಿತರು, ರಾಜಕೀಯ ವ್ಯಕ್ತಿಗಳು, ತಮಿಳು ಚಲನಚಿತ್ರ ನಿರ್ಮಾಪಕರು, ವಿಜಯ್ ಸೇತುಪತಿ ಅಭಿಮಾನಿಗಳು ಮತ್ತು ಸಾರ್ವಜನಿಕರಿಗೆ, ವಿಶೇಷವಾಗಿ ತಮಿಳುನಾಡಿನ ಜನರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು'' ಎಂದು ಮುರಳೀಧರನ್ ತಿಳಿಸಿದ್ದಾರೆ.