ಎಸ್‌ಪಿಬಿ ಅಗಲಿಕೆಗೆ ಜೈಪುರದಿಂದಲೇ ಸಂತಾಪ ಸೂಚಿಸಿದ ವಿಜಯ್ ಸೇತುಪತಿ, ರಾಧಿಕಾ

ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಗೆ ಇಡೀ ಭಾರತವೇ ಮರುಗಿದೆ. ತಮಿಳುನಾಡಿನ ತಮ್ಮ ತೋಟದ ಮನೆಯಲ್ಲಿ ಖ್ಯಾತ ಗಾಯಕ ಅಂತಿಮ ಸಂಸ್ಕಾರ ಮಾಡಲಾಯಿತು. ತಮಿಳು ನಟ ವಿಜಯ್ ಸೇರಿದಂತೆ ಹಲವು ಗಣ್ಯರು ಅಂತಿಮಯಾತ್ರೆಯಲ್ಲಿ ಭಾಗಿಯಾಗಿದ್ದರು.

ಎಸ್‌ಪಿಬಿ ಅವರ ಅಂತಿಮಯಾತ್ರೆಯಲ್ಲಿ ಭಾಗಿಯಾಗದ ಕಾರಣ ಜೈಪುರದಲ್ಲೇ ಸಂತಾಪ ಸೂಚಿಸಿದ್ದಾರೆ ತಮಿಳು ನಟ ವಿಜಯ್ ಸೇತುಪತಿ.

ವಿಜಯ್ ಸೇತುಪತಿ, ಹಿರಿಯ ನಟಿ ರಾಧಿಕಾ ಶರತ್ ಕುಮಾರ್, ರಾಜೇಂದ್ರ ಪ್ರಸಾದ್, ತಾಪ್ಸಿ ಪೆನ್ನು, ಯೋಗಿಬಾಬು ಅವರೆಲ್ಲರೂ ಚಿತ್ರೀಕರಣ ನಿಮಿತ್ತ ಜೈಪುರಕ್ಕೆ ತೆರಳಿದ್ದರು. ಈ ನಡುವೆ ಎಸ್‌ಪಿಬಿ ನಿಧನ ಸುದ್ದಿ ತಿಳಿದಿದೆ.

Vijay Sethupathi Pays tribute to SPB from shooting location from jaipur

ಈ ಹಿನ್ನೆಲೆ ಜೈಪುರದಲ್ಲಿಯೇ ಎಸ್‌ಪಿಬಿ ಅವರ ಭಾವಚಿತ್ರ ಇಟ್ಟು ಅಂತಿಮ ನಮನ ಸಲ್ಲಿಸಲಾಗಿದೆ. ದೀಪ ಹಚ್ಚುವ ಮೂಲಕ ಖ್ಯಾತ ಗಾಯಕನಿಗೆ ವಿದಾಯ ಹೇಳಿದ್ದಾರೆ. ಈ ಫೋಟೋವನ್ನು ರಾಧಿಕಾ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ''ಲೆಜೆಂಡ್‌ಗೆ ನಮ್ಮಿಂದ ವಿದಾಯ'' ಎಂದು ತಿಳಿಸಿದ್ದಾರೆ.

Recommended Video

SPB Special : Shree Harsha about the Legend ಅವರ ತರ ಜೀವನ ನಡೆಸೋಕೆ ಯಾರಿಂದಲೂ ಆಗಲ್ಲ | Filmibeat Kannada

ಸೆಪ್ಟೆಂಬರ್ 25 ರಂದು ಬಾಲಸುಬ್ರಹ್ಮಣ್ಯಂ ಅವರ ನಿಧನ ಸುದ್ದಿ ಗೊತ್ತಾಗುತ್ತಿದ್ದಂತೆ ರಾಧಿಕಾ ಶರತ್ ಕುಮಾರ್ ಮತ್ತು ರಾಜೇಂದ್ರ ಪ್ರಸಾದ್ ಟ್ವಿಟ್ಟರ್‌ ಮೂಲಕ ಬೇಸರ ವ್ಯಕ್ತಪಡಿಸಿದ್ದರು. ವಿಡಿಯೋ ಹಂಚಿಕೊಂಡಿದ್ದ ರಾಜೇಂದ್ರ ಪ್ರಸಾದ್ ಗೆಳೆಯನ ಅಗಲಿಕೆಗೆ ಕಣ್ಣೀರು ಹಾಕಿದ್ದರು.

More from Filmibeat

English summary
Vijay Sethupathi, Radhika, Taapsee Pannu & Rajendra Prasad bid floral tribute to legendary singer SP Balasubrahmanyam from the shooting location of their upcoming film.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X