Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಸ್ಪಿಬಿ ಅಗಲಿಕೆಗೆ ಜೈಪುರದಿಂದಲೇ ಸಂತಾಪ ಸೂಚಿಸಿದ ವಿಜಯ್ ಸೇತುಪತಿ, ರಾಧಿಕಾ
ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಗೆ ಇಡೀ ಭಾರತವೇ ಮರುಗಿದೆ. ತಮಿಳುನಾಡಿನ ತಮ್ಮ ತೋಟದ ಮನೆಯಲ್ಲಿ ಖ್ಯಾತ ಗಾಯಕ ಅಂತಿಮ ಸಂಸ್ಕಾರ ಮಾಡಲಾಯಿತು. ತಮಿಳು ನಟ ವಿಜಯ್ ಸೇರಿದಂತೆ ಹಲವು ಗಣ್ಯರು ಅಂತಿಮಯಾತ್ರೆಯಲ್ಲಿ ಭಾಗಿಯಾಗಿದ್ದರು.
ಎಸ್ಪಿಬಿ ಅವರ ಅಂತಿಮಯಾತ್ರೆಯಲ್ಲಿ ಭಾಗಿಯಾಗದ ಕಾರಣ ಜೈಪುರದಲ್ಲೇ ಸಂತಾಪ ಸೂಚಿಸಿದ್ದಾರೆ ತಮಿಳು ನಟ ವಿಜಯ್ ಸೇತುಪತಿ.
ವಿಜಯ್ ಸೇತುಪತಿ, ಹಿರಿಯ ನಟಿ ರಾಧಿಕಾ ಶರತ್ ಕುಮಾರ್, ರಾಜೇಂದ್ರ ಪ್ರಸಾದ್, ತಾಪ್ಸಿ ಪೆನ್ನು, ಯೋಗಿಬಾಬು ಅವರೆಲ್ಲರೂ ಚಿತ್ರೀಕರಣ ನಿಮಿತ್ತ ಜೈಪುರಕ್ಕೆ ತೆರಳಿದ್ದರು. ಈ ನಡುವೆ ಎಸ್ಪಿಬಿ ನಿಧನ ಸುದ್ದಿ ತಿಳಿದಿದೆ.
ಈ ಹಿನ್ನೆಲೆ ಜೈಪುರದಲ್ಲಿಯೇ ಎಸ್ಪಿಬಿ ಅವರ ಭಾವಚಿತ್ರ ಇಟ್ಟು ಅಂತಿಮ ನಮನ ಸಲ್ಲಿಸಲಾಗಿದೆ. ದೀಪ ಹಚ್ಚುವ ಮೂಲಕ ಖ್ಯಾತ ಗಾಯಕನಿಗೆ ವಿದಾಯ ಹೇಳಿದ್ದಾರೆ. ಈ ಫೋಟೋವನ್ನು ರಾಧಿಕಾ ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದು, ''ಲೆಜೆಂಡ್ಗೆ ನಮ್ಮಿಂದ ವಿದಾಯ'' ಎಂದು ತಿಳಿಸಿದ್ದಾರೆ.
Recommended Video
ಸೆಪ್ಟೆಂಬರ್ 25 ರಂದು ಬಾಲಸುಬ್ರಹ್ಮಣ್ಯಂ ಅವರ ನಿಧನ ಸುದ್ದಿ ಗೊತ್ತಾಗುತ್ತಿದ್ದಂತೆ ರಾಧಿಕಾ ಶರತ್ ಕುಮಾರ್ ಮತ್ತು ರಾಜೇಂದ್ರ ಪ್ರಸಾದ್ ಟ್ವಿಟ್ಟರ್ ಮೂಲಕ ಬೇಸರ ವ್ಯಕ್ತಪಡಿಸಿದ್ದರು. ವಿಡಿಯೋ ಹಂಚಿಕೊಂಡಿದ್ದ ರಾಜೇಂದ್ರ ಪ್ರಸಾದ್ ಗೆಳೆಯನ ಅಗಲಿಕೆಗೆ ಕಣ್ಣೀರು ಹಾಕಿದ್ದರು.