Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೆಜೆಂಡರಿ ನಿರ್ಮಾಪಕ ಆರ್.ಬಿ ಚೌಧರಿ ವಿರುದ್ಧ ನಟ ವಿಶಾಲ್ ದೂರು
ತಮಿಳಿನ ಖ್ಯಾತ ನಟ, ನಿರ್ಮಾಪಕ ವಿಶಾಲ್ ಲೈಂಗಿಕ ಕಿರುಕುಳ ಆರೋಪ ಎದುರಿಸಿದ ಬೆನ್ನಲ್ಲೇ ಲೆಜೆಂಡರಿ ನಿರ್ದೇಶಕ ಆರ್.ಬಿ ಚೌಧರಿ ವಿರುದ್ಧ ದೂರು ನೀಡಿದ್ದಾರೆ. ಚೆನ್ನೈನ ಟಿ.ನಗರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ನೀಡಿದ್ದು, ಕಾಲಿವುಡ್ ನಲ್ಲಿ ಅಚ್ಚರಿ ಮೂಡಿಸಿದೆ.
ನಟ ವಿಶಾಲ್ ಆಗಾಗ ವಿವಾದಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಇದೀಗ ನಿರ್ಮಾಪಕ ಆರ್ ಬಿ ಚೌಧರಿ ವಿರುದ್ಧ ಸಿಡಿದೆದ್ದು ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ. ಆರ್ ಬಿ ಚೌಧರಿ ಬಳಿ ಸಾಲ ಪಡೆದಿದ್ದ ವಿಶಾಲ್ ಸಾಲವನ್ನು ಮರುಪಾವತಿಸಿದ ಬಳಿಕವೂ ದಾಖಲೆಗಳನ್ನು ಪಾವಸ್ ಮಾಡಿಲ್ಲ ಎಂದು ದೂರಿದ್ದಾರೆ.
ವಿಶಾಲ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ 'ಮನಸೆಲ್ಲಾ ನೀನೆ' ನಟಿ
ಈ ಬಗ್ಗೆ ಟ್ವೀಟ್ ಮಾಡಿರುವ ವಿಶಾಲ್, 'ಇರುಂಬು ತಿರೈ ಚಿತ್ರಕ್ಕಾಗಿ ಸಾಲವನ್ನು ಮರುಪಾವತಿಸಿ ತಿಂಗಳಾದರು ಚೆಕ್, ಬಾಂಡ್ ಮತ್ತು ಪ್ರಾಮಿಸರಿಗಳನ್ನು ಆರ್.ಬಿ ಚೌಧರಿ ಹಿಂದಿರುಗಿಸಿಲ್ಲ. ಏನಾದರೂ ಕಾರಣಗಳನ್ನು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಕೊನೆಯದಾಗಿ ದಾಖಲೆಗಳು ಮಿಸ್ ಆಗಿವೆ ಎಂದು ಹೇಳಿದ್ದಾರೆ. ಹೀಗಾಗಿ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ' ಎಂದು ಹೇಳಿದ್ದಾರೆ.
Recommended Video
ಇತ್ತೀಚಿಗಷ್ಟೆ ನಟ ವಿಶಾಲ್ ವಿರುದ್ಧ ಕನ್ನಡದ 'ಮನಸೆಲ್ಲಾ ನೀನೆ' ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಗಾಯತ್ರಿ ರಘುರಾಮ್ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ನಟ ವಿಶಾಲ್ ಕುರಿತು ಸರಣಿ ಟ್ವೀಟ್ ಮಾಡಿದ್ದ ಗಾಯತ್ರಿ ರಘುರಾಮ್, 'ವಿಶಾಲ್ ಹಾಗೂ ಗೆಳೆಯರು ಚಿತ್ರೋದ್ಯಮಕ್ಕೆ ಬರುವ ಹೊಸ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಸಿಕೊಂಡು ಬಿಸಾಡುವ ಪ್ರವೃತ್ತಿ ಇವರದ್ದು' ಎಂದು ಗಂಭೀರ ಆರೋಪ ಮಾಡಿದ್ದರು.