Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜೆ ಚಿತ್ರಾ ಆತ್ಮಹತ್ಯೆ: ಗಂಡನ ಮೇಲೆ ಅನುಮಾನ ವ್ಯಕ್ತಪಡಿಸಿದ ನಟಿ ತಾಯಿ
ಕಿರುತೆರೆ ನಟಿ ವಿಜೆ ಚಿತ್ರಾ ಡಿಸೆಂಬರ್ 9 ರಂದು ಚೆನ್ನೈನ ಖಾಸಗಿ ಹೋಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ಶೂಟಿಂಗ್ ಮುಗಿಸಿ ಹೋಟೆಲ್ ರೂಮಿಗೆ ಬಂದಿದ್ದ ನಟಿ ನಂತರ ಸಾವನ್ನಪ್ಪಿದ್ದರು.
Recommended Video
ಕೇಸ್ ದಾಖಲಿಸಿಕೊಂಡ ಪೊಲೀಸರು ಆತ್ಮಹತ್ಯೆ ಎಂದು ಎಫ್ ಐ ಆರ್ ನಮೂದಿಸಿದರು. ಇದೀಗ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ್ದಾರೆ. ಈ ನಡುವೆ ವಿಜೆ ಚಿತ್ರಾ ಅವರ ತಾಯಿ ಹೊಸದಾಗಿ ಮದುವೆಯಾಗಿದ್ದ ನಟಿಯ ಗಂಡ ಹೇಮಂತ್ ಕುಮಾರ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮುಂದೆ ಓದಿ....
ನಟಿ-ನಿರೂಪಕಿ ಚಿತ್ರಾ ಆತ್ಮಹತ್ಯೆ: ಮುಖದ ಮೇಲೆ ಗಾಯ, ಹೆಚ್ಚಿದ ಅನುಮಾನ!
ದುಡ್ಡಿಗಾಗಿ ಮದುವೆ ಆಗಿದ್ದ!
ಆಗಸ್ಟ್ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ವಿಜೆ ಚಿತ್ರ ಮತ್ತು ಉದ್ಯಮಿ ಹೇಮಂತ್ ಕುಮಾರ್, ನಂತರ ಅಕ್ಟೋಬರ್ ತಿಂಗಳಲ್ಲಿ ರಿಜಿಸ್ಟರ್ ಮದುವೆ ಆಗಿದ್ದಾರೆ. ಆದ್ರೆ, ಈ ವಿವಾಹವನ್ನು ಗುಟ್ಟಾಗಿ ಇಟ್ಟು ಹೋಟೆಲ್ನಲ್ಲಿ ತಂಗಿದ್ದರು. ಈ ವೇಳೆ ನಟಿ ಸಾವಿಗೆ ಶರಣಾಗಿದ್ದು, ನಟಿಯ ತಾಯಿ ಹೇಮಂತ್ ಕುಮಾರ್ ಮೇಲೆ ಆರೋಪ ಮಾಡಿದ್ದಾರೆ. 'ದುಡ್ಡಿಗಾಗಿ ನನ್ನ ಮಗಳನ್ನು ಮದುವೆಯಾಗಿ ಕೊಂದಿದ್ದಾನೆ'' ಎಂದು ಶಂಕಿಸಿದ್ದಾರೆ.
ದೈಹಿಕವಾಗಿ ಹಿಂಸೆಗೆ ಒಳಗಾಗಿದ್ದಾಳೆ
''ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಅವಳನ್ನು ಧೈರ್ಯಶಾಲಿ ಮಹಿಳೆಯಾಗಿ ಬೆಳೆಸಿದ್ದೇನೆ. ಅವಳು ತುಂಬಾ ಪ್ರತಿಭಾವಂತೆ. ಅವಳ ದುಡ್ಡಿಗಾಗಿ ಹೇಮಂತ್ ಕುಮಾರ್ ಮದುವೆ ಆಗಿದ್ದಾನೆ ಎಂದು ಶಂಕಿಸುತ್ತಿದ್ದೇನೆ. ನನ್ನ ಮಗಳು ದೈಹಿಕ ಹಿಂಸಾಚಾರಕ್ಕೆ ಒಳಗಾಗಿದ್ದಾಳೆ ಎಂದು ನನಗೆ ಅನಿಸುತ್ತಿದೆ. ಆಕೆಯ ಮುಖದ ಮೇಲೆ ಗಾಯದ ಗುರುತುಗಳಿವೆ'' ಎಂದು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಪ್ರತಿಕ್ರಿಯೆಯಲ್ಲಿ ಚಿತ್ರಾ ತಾಯಿ ಆರೋಪಿಸಿದ್ದಾರೆ.
ಕಿರುತೆರೆಯ ಖ್ಯಾತ ನಟಿ ವಿ.ಜೆ ಚಿತ್ರಾ ಆತ್ಮಹತ್ಯೆಗೆ ಶರಣು
ನ್ಯಾಯಕ್ಕಾಗಿ ಹೋರಾಟ
ವಿಜೆ ಚಿತ್ರಾ ಅವರ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಕಡೆ ಮಗಳ ಸಾವಿನ ಮೇಲೆ ಅನುಮಾನ ವ್ಯಕ್ತಪಡಿಸಿರುವ ಕುಟುಂಬ ನ್ಯಾಯಕ್ಕಾಗಿ ಹೋರಾಟ ಮಾಡುತ್ತೇವೆ, ಕೇಸ್ ದಾಖಲಿಸುತ್ತೇವೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹೇಮಂತ್ ಕುಮಾರ್ ವಿಚಾರಣೆ
ಚಿತ್ರಾ ಸಾವಿನ ಸಂಬಂಧ ಪತಿ ಹೇಮಂತ್ ಕುಮಾರ್ ವಿಚಾರಣೆ ಮಾಡಲಾಗಿದೆ. ಹೋಟೆಲ್ನಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಸಹ ಸಂಗ್ರಹಿಸಿರುವ ಪೊಲೀಸರು ಮತ್ತೊಂದು ಸುತ್ತಿನ ವಿಚಾರಣೆಗಾಗಿ ಹೇಮಂತ್ ಕುಮಾರ್ ಅವರನ್ನ ಠಾಣೆಗೆ ಕರೆಸಲಾಗಿದೆ ಎಂಬ ಮಾಹಿತಿ ಇದೆ.
ಹೇಮಂತ್ ಕುಮಾರ್ ಹೇಳಿದ್ದೇನು?
ಚಿತ್ರಾ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪತಿ ಹೇಮಂತ್, 'ಚಿತ್ರೀಕರಣ ಮುಗಿಸಿ ವಾಪಸ್ ಆಗಿದ್ದ ಚಿತ್ರಾ ಸ್ನಾನ ಮುಗಿಸಿ ಬರುವುದಾಗಿ ಹೇಳಿ ಹೋದಳು. ತುಂಬಾ ಸಮಯವಾದರೂ ಬರಲಿಲ್ಲ, ಬಳಿಕ ಬಾಗಿಲು ಬಡಿಯಲು ಪ್ರಾರಂಭಿಸಿದೆ. ಬಾಗಿಲು ತೆಗೆಯಲಿಲ್ಲ. ಬಳಿಕ ಹೋಟೆಲ್ ಸಿಬ್ಬಂದಿಗೆ ತಿಳಿಸಿ ನಕಲಿ ಕೀ ಬಳಸಿ ಬಾಗಿಲು ತೆರೆದೆವು. ಚಿತ್ರಾ ನೇಣುಹಾಕಿಕೊಂಡಿದ್ದಳು' ಎಂದಿದ್ದಾರೆ.
ಕಿರುತೆರೆ ನಟಿ ಆತ್ಮಹತ್ಯೆ; ತನಿಖೆಯಿಂದ ಬಯಲಾಯ್ತು ಚಿತ್ರಾ ಗುಟ್ಟಾಗಿ ಮದುವೆಯಾಗಿದ್ದ ರಹಸ್ಯ