Don't Miss!
- Sports IPL ಬಿಡಿ, WPLನಲ್ಲಿ ಆರ್ಸಿಬಿಗೆ ಗೆದ್ದ ಮೊತ್ತಕ್ಕೂ ಸಮವಿಲ್ಲ PSL ವಿಜೇತರಿಗೆ ಸಿಕ್ಕ ಬಹುಮಾನ
- News Mysore Candidate : ಮೈಸೂರಿನಲ್ಲಿ ಬಿಜೆಪಿಯಿಂದ ರಾಜವಂಶಸ್ಥ- ಕಾಂಗ್ರೆಸ್ ಲೆಕ್ಕಾಚಾರವೇನು?
- Lifestyle ಕೆಜಿಎಫ್ ಎಲ್ ಡೊರಾಡೊ ಕಥೆ ಕೇಳಿದ್ದೀರಾ? ಇದು ಸಮುದ್ರದಲ್ಲಿ ಮುಳುಗಿದ ಎಲ್ ಡೊರಾಡೊ ಹಡಗಿನ ಕಥೆ..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Automobiles ಕಾಶ್ಮೀರ ಟು ಕನ್ಯಾಕುಮಾರಿ ಟ್ರಿಪ್ ಮುಗಿಸಿದ ಎಲೆಕ್ಟ್ರಿಕ್ ಸ್ಕೂಟರ್: ಗೇಮ್ ಚೇಂಜರ್ ಅಖಾಡಕ್ಕೆ
- Technology iPhone: ಐಫೋನ್ 16 ನಲ್ಲಿ ಆಪಲ್ನಿಂದ ನಿರೀಕ್ಷಿಸಬಹುದಾದ ದೊಡ್ಡ ನವೀಕರಣಗಳಿವು!ಇಷ್ಟ ಆಗದೇ ಇರದು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು-ತಮಿಳಿನಲ್ಲಿ ರೀಮೇಕ್ ಆಗಲಿದೆ ಕನ್ನಡದ ಹಿಟ್ ಚಿತ್ರ 'ಆ ಕರಾಳ ರಾತ್ರಿ'
ಕನ್ನಡದ ಹಿಟ್ ಚಿತ್ರ ಆ ಕರಾಳ ರಾತ್ರಿ ಪರಭಾಷೆಗೆ ಕಾಲಿಡುತ್ತಿದೆ. 2018ರಲ್ಲಿ ಬಿಡುಗಡೆಯಾದ ಈ ಚಿತ್ರ ವಿಮರ್ಶಾತ್ಮಕವಾಗಿ ಪ್ರಶಂಸೆ ಪಡೆದುಕೊಂಡಿತ್ತು. ಈ ಚಿತ್ರಕ್ಕೆ 'ಅತ್ಯುತ್ತಮ ಸಿನಿಮಾ' ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸಿಕ್ಕಿತ್ತು.
Recommended Video
ನಿರ್ದೇಶಕ ದಯಾಳ್ ಪದ್ಮನಾಭನ್ಗೂ ಅತ್ಯುತ್ತಮ ನಿರ್ದೇಶಕ ರಾಜ್ಯ ಪ್ರಶಸ್ತಿ ಲಭಿಸಿತ್ತು. ಅನುಪಮಾ ಗೌಡ, ಕಾರ್ತಿಕ್ ಜಯರಾಂ, ವೀಣಾ ಸುಂದರ್, ರಂಗಾಯಣ ರಘು, ನವೀನ್ ಕೃಷ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಇದೀಗ, ಈ ಚಿತ್ರ ತೆಲುಗು ಮತ್ತು ತಮಿಳಿನಲ್ಲಿ ರೀಮೇಕ್ ಆಗುತ್ತಿದೆ. ಮುಂದೆ ಓದಿ...
'ಆ ಕರಾಳ ರಾತ್ರಿ' ವಿಮರ್ಶೆ: ಚಿಕ್ಕ ಹಾಗೂ ಚೊಕ್ಕ ಚಿತ್ರ
ಅಲ್ಲು ಅರವಿಂದ್ ನಿರ್ಮಾಣ
ಟಾಲಿವುಡ್ ಇಂಡಸ್ಟ್ರಿಯ ಖ್ಯಾತ ಹಾಗೂ ಯಶಸ್ವಿ ನಿರ್ಮಾಪಕ ಅಲ್ಲು ಅರವಿಂದ್ ತೆಲುಗಿನಲ್ಲಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ದಯಾಳ್ ಪದ್ಮನಾಭನ್ ಅವರೇ ಖುದ್ದು ತೆಲುಗಿನಲ್ಲಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಪಾತ್ರಗಳು ಬದಲಾಗಲಿದೆ
ದಯಾಳ್ ನಿರ್ದೇಶನದ ಜೊತೆಗೆ ನವೀನ್ ಕೃಷ್ಣ ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅನುಪಮಾ ಗೌಡ ಅವರ ತಾಯಿ ಪಾತ್ರ ನಿಭಾಯಿಸಿದ್ದ ವೀಣಾ ಸುಂದರ್ ಸಹ ತೆಲುಗಿನಲ್ಲಿ ಮುಂದುವರಿಯಲಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ತೆಲುಗೂ ಚಿತ್ರದಲ್ಲೂ ಇರಲಿದೆ. ಉಳಿದಂತೆ ಪಾತ್ರಗಳು ಬದಲಾಗಲಿದೆ.
ಸ್ಟಾರ್ ನಟಿಗೆ ಆಫರ್!
ಅನುಪಮಾ ಗೌಡ ನಟಿಸಿದ್ದ ಪಾತ್ರಕ್ಕಾಗಿ ತೆಲುಗಿನ ಸ್ಟಾರ್ ನಟಿಯರಿಗೆ ಆಫರ್ ಮಾಡಲಾಗಿದೆಯಂತೆ. ಶ್ರುತಿ ಹಾಸನ್, ತ್ರಿಷಾ ಕೃಷ್ಣನ್ ಅಥವಾ ಅಮಲಾ ಪೌಲ್ ಅವರನ್ನು ಕರೆತರುವ ಚಿಂತನೆ ಇದೆಯಂತೆ. ಆದರೆ, ಜೆಕೆ ಪಾತ್ರದ ಬಗ್ಗೆ ಮಾಹಿತಿ ಇಲ್ಲ.
ಸೆಪ್ಟೆಂಬರ್ನಲ್ಲಿ ಶೂಟಿಂಗ್ ಶುರು
ತೆಲುಗು ವರ್ಷನ್ ಸಿನಿಮಾದ ಚಿತ್ರೀಕರಣ ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿದೆ. ತಮಿಳಿನಲ್ಲೂ ದಯಾಳ್ ಪದ್ಮನಾಭನ್ ಅವರೇ ನಿರ್ದೇಶನ ಮಾಡಲಿದ್ದು, ರಮೇಶ್ ಪಿಳ್ಳೈ ಸಿನಿಮಾ ನಿರ್ಮಿಸಲಿದ್ದಾರೆ. ತೆಲುಗು ಬಳಿಕ ತಮಿಳಿನಲ್ಲಿ ಸಿನಿಮಾ ಆರಂಭವಾಗಲಿದೆ ಎಂದು ಹೇಳಲಾಗಿದೆ.