Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೋದರ ಮಾವನನ್ನು ಕಳೆದುಕೊಂಡ ದುಃಖದಲ್ಲಿ ನಟ ಅಲ್ಲು ಅರ್ಜುನ್
ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಸೋದರ ಮಾವನನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅಲ್ಲು ಅರ್ಜುನ್ ಮಾವ ಮುತ್ತಮಸೆಟ್ಟಿ ರಾಜೇಂದ್ರ ಪ್ರಸಾದ್ ನಿನ್ನೆ ಮೃತಪಟ್ಟಿದ್ದಾರೆ. ರಾಜೇಂದ್ರ ಪ್ರಸಾದ್ ಸ್ವಗೃಹ ವಿಜಯವಾಡದಲ್ಲಿ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ನಟ ಅಲ್ಲು ಅರ್ಜುನ್ ಮತ್ತು ಪತ್ನಿ ಸ್ನೇಹಾ ಸೇರಿದಂತೆ ಇಡೀ ಕುಟುಂಬ ವಿಜಯವಾಡಕ್ಕೆ ತೆರಳಿದೆ.
ರಾಜೇಂದ್ರ ಪ್ರಸಾದ್, ಅಲ್ಲು ಅರ್ಜುನ್ ತಾಯಿಯ ಸಹೋದರ. ಕುಟುಂಬ ಸದಸ್ಯರೊಬ್ಬರನ್ನು ಕಳೆದುಕೊಂಡ ದುಃಖದಲ್ಲಿದ್ದ ಇಡೀ ಅಲ್ಲು ಕುಟುಂಬ ಹೈದರಾಬಾದ್ ಏರ್ ಪೋರ್ಟ್ ನಲ್ಲಿ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ನಟ ಅಲ್ಲು ಅರ್ಜುನ್ ಮಾವನ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದರು. ಅಲ್ಲು ತುಂಬ ಇಷ್ಟಪಡುತ್ತಿದ್ದ ವ್ಯಕ್ತಿ ರಾಜೇಂದ್ರ ಪ್ರಸಾದ್ ಎಂದು ಹೇಳಲಾಗುತ್ತಿದೆ.
ಅಲ್ಲು ಅರ್ಜುನ್ ಬಗ್ಗೆ ಅಚ್ಚರಿ ಟ್ವೀಟ್, ಆಮೇಲೆ ಡಿಲೀಟ್: ವರ್ಮಾ ವಿರುದ್ಧ ಮೆಗಾ ಫ್ಯಾನ್ಸ್ ಆಕ್ರೋಶ
ಕುಟುಂಬದ ಜೊತೆ ಮಾತ್ರವಲ್ಲದೆ ಮಾವ ರಾಜೇಂದ್ರ ಪ್ರಸಾದ್ ಅಲ್ಲು ಅರ್ಜುನ್ ಸಿನಿಮಾ ಜೀವನದಲ್ಲೂ ಜೊತೆಯಾಗಿದ್ದರು. ಸಾಕಷ್ಟು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಸುಕುಮಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಸಿನಿಮಾಗೂ ರಾಜೇಂದ್ರ ಪ್ರಸಾದ್ ಒನ್ ಆಫ್ ದಿ ನಿರ್ಮಾಪಕ ಆಗಿದ್ದರಂತೆ.
ಅಲ್ಲು ಸದ್ಯ ಅಲಾ ವೈಕುಂಟಪುರಂಲೋ ಸಿನಿಮಾ ಸಕ್ಸಸ್ ಖುಷಿಯಲ್ಲಿ ಇದ್ದರು. ಬಾಕ್ಸ್ ಆಫೀಸ್ ನಲ್ಲಿ ಈ ಸಿನಿಮಾ ಧೂಳ್ ಎಬ್ಬಿಸುತ್ತಿದೆ. ಇದರ ಜೊತೆಗೆ ಸದ್ಯ ಸೆಟ್ಟೇರಬೇಕಿರುವ ನಿರ್ದೇಶಕ ಸುಕುಮಾರ್ ಜೊತೆಗಿನ ಸಿನಿಮಾದ ಬ್ಯುಸಿಯಲ್ಲಿ ಇದ್ದರು. ಆದರೆ ದಿಢೀರ್ ಬಂದ ನಿಧನದ ಸುದ್ದಿ ಅಲ್ಲು ಕುಟುಂಬಕ್ಕೆ ಆಘಾತ ತಂದಿದೆ.