Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಇಬ್ಬರು ನಟರು ಅಲ್ಲು ಅರ್ಜುನ್ ಸ್ಫೂರ್ತಿ
Recommended Video
ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ 'ಅಲ ವೈಕುಂಠಪುರಮುಲೋ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮ ಇತ್ತೀಚಿಗಷ್ಟೆ ನಡೆದಿದೆ.
ಈ ಚಿತ್ರದ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ತನಗೆ ಸ್ಫೂರ್ತಿ ನೀಡಿದ ನಟರ ಬಗ್ಗೆ ಮಾತನಾಡಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಮೆಗಾ ಸ್ಟಾರ್ ಚಿರಂಜೀವಿ ನನಗೆ ದೊಡ್ಡ ಸ್ಫೂರ್ತಿ ಎಂದಿದ್ದಾರೆ.
ತನ್ನದೇ ಸಿನಿಮಾ ಬಗ್ಗೆ ಟ್ವೀಟ್ ಮಾಡಿ ಟ್ರೋಲ್ ಆದ ಅಲ್ಲು ಅರ್ಜುನ್
''ಚಿರಂಜೀವಿ ರವರ ನಂತರ ನಾನು ತುಂಬ ತುಂಬ ತುಂಬ ಅಭಿಮಾನಿಸುವ ನಟ ರಜನಿಕಾಂತ್. ಅವರು ನನಗೆ ದೊಡ್ಡ ಸ್ಫೂರ್ತಿ. ಅಂತಹ ರಜನಿಕಾಂತ್ ಅವರ ಸಿನಿಮಾ 'ದರ್ಬಾರ್' ಬಿಡುಗಡೆ ಆಗುತ್ತಿದೆ. ಆ ಸಿನಿಮಾಗೆ ಶುಭವಾಗಲಿ'' ಎಂದಿದ್ದಾರೆ.
''ನಿರ್ದೇಶಕ ಮುರುಗದಾಸ್ ನನಗೆ ಬಹಳ ಇಷ್ಟ. ಅವರು ಮತ್ತು ರಜನಿಕಾಂತ್ ಸರ್ ಕಾಂಬಿನೇಶನ್ ನಲ್ಲಿ ದರ್ಬಾರ್ ಸಿನಿಮಾ ಬರುತ್ತಿದೆ. ಸಂಕ್ರಾಂತಿಗೆ ಆ ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ಆ ಸಿನಿಮಾ ಗೆಲ್ಲಲಿ.'' ಎಂದು ಅಲ್ಲು ಅರ್ಜುನ್ ವಿಶ್ ಮಾಡಿದ್ದಾರೆ.
ಅಲ್ಲು ಅರ್ಜುನ್ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರ ಬಹಿರಂಗ
'ಅಲ ವೈಕುಂಠಪುರಮುಲೋ' ಸಿನಿಮಾ ಜನವರಿ 12 ರಂದು ಬಿಡುಗಡೆ ಆಗುತ್ತಿದೆ. ಜನವರಿ 9 ರಂದು 'ದರ್ಬಾರ್' ಚಿತ್ರ ತೆರೆಗೆ ಬರುತ್ತಿದೆ. 'ದರ್ಬಾರ್' ತೆಲುಗಿನಲ್ಲಿಯೂ ಬಿಡುಗಡೆ ಆಗುತ್ತಿದ್ದು, ಎರಡು ಚಿತ್ರಗಳ ನಡುವೆ ಸ್ಪರ್ಧೆ ನಡೆಯಲಿದೆ. ತಮ್ಮ ಸಿನಿಮಾದ ಜೊತೆಗೆ ಬರುತ್ತಿರುವ 'ದರ್ಬಾರ್' ಚಿತ್ರಕ್ಕೂ ಒಳ್ಳೆಯದಾಗಲಿ ಎಂದು ಅಲ್ಲು ಅರ್ಜುನ್ ಕೇಳಿಕೊಂಡಿದ್ದಾರೆ.