Don't Miss!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಇಬ್ಬರು ನಟರು ಅಲ್ಲು ಅರ್ಜುನ್ ಸ್ಫೂರ್ತಿ
Recommended Video
ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ 'ಅಲ ವೈಕುಂಠಪುರಮುಲೋ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮ ಇತ್ತೀಚಿಗಷ್ಟೆ ನಡೆದಿದೆ.
ಈ ಚಿತ್ರದ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ತನಗೆ ಸ್ಫೂರ್ತಿ ನೀಡಿದ ನಟರ ಬಗ್ಗೆ ಮಾತನಾಡಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಮೆಗಾ ಸ್ಟಾರ್ ಚಿರಂಜೀವಿ ನನಗೆ ದೊಡ್ಡ ಸ್ಫೂರ್ತಿ ಎಂದಿದ್ದಾರೆ.
ತನ್ನದೇ ಸಿನಿಮಾ ಬಗ್ಗೆ ಟ್ವೀಟ್ ಮಾಡಿ ಟ್ರೋಲ್ ಆದ ಅಲ್ಲು ಅರ್ಜುನ್
''ಚಿರಂಜೀವಿ ರವರ ನಂತರ ನಾನು ತುಂಬ ತುಂಬ ತುಂಬ ಅಭಿಮಾನಿಸುವ ನಟ ರಜನಿಕಾಂತ್. ಅವರು ನನಗೆ ದೊಡ್ಡ ಸ್ಫೂರ್ತಿ. ಅಂತಹ ರಜನಿಕಾಂತ್ ಅವರ ಸಿನಿಮಾ 'ದರ್ಬಾರ್' ಬಿಡುಗಡೆ ಆಗುತ್ತಿದೆ. ಆ ಸಿನಿಮಾಗೆ ಶುಭವಾಗಲಿ'' ಎಂದಿದ್ದಾರೆ.
''ನಿರ್ದೇಶಕ ಮುರುಗದಾಸ್ ನನಗೆ ಬಹಳ ಇಷ್ಟ. ಅವರು ಮತ್ತು ರಜನಿಕಾಂತ್ ಸರ್ ಕಾಂಬಿನೇಶನ್ ನಲ್ಲಿ ದರ್ಬಾರ್ ಸಿನಿಮಾ ಬರುತ್ತಿದೆ. ಸಂಕ್ರಾಂತಿಗೆ ಆ ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ಆ ಸಿನಿಮಾ ಗೆಲ್ಲಲಿ.'' ಎಂದು ಅಲ್ಲು ಅರ್ಜುನ್ ವಿಶ್ ಮಾಡಿದ್ದಾರೆ.
ಅಲ್ಲು ಅರ್ಜುನ್ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರ ಬಹಿರಂಗ
'ಅಲ ವೈಕುಂಠಪುರಮುಲೋ' ಸಿನಿಮಾ ಜನವರಿ 12 ರಂದು ಬಿಡುಗಡೆ ಆಗುತ್ತಿದೆ. ಜನವರಿ 9 ರಂದು 'ದರ್ಬಾರ್' ಚಿತ್ರ ತೆರೆಗೆ ಬರುತ್ತಿದೆ. 'ದರ್ಬಾರ್' ತೆಲುಗಿನಲ್ಲಿಯೂ ಬಿಡುಗಡೆ ಆಗುತ್ತಿದ್ದು, ಎರಡು ಚಿತ್ರಗಳ ನಡುವೆ ಸ್ಪರ್ಧೆ ನಡೆಯಲಿದೆ. ತಮ್ಮ ಸಿನಿಮಾದ ಜೊತೆಗೆ ಬರುತ್ತಿರುವ 'ದರ್ಬಾರ್' ಚಿತ್ರಕ್ಕೂ ಒಳ್ಳೆಯದಾಗಲಿ ಎಂದು ಅಲ್ಲು ಅರ್ಜುನ್ ಕೇಳಿಕೊಂಡಿದ್ದಾರೆ.