Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತ್ಯಾಚಾರಿಗಳನ್ನು ಗಲ್ಲಿಗೇರಿಸಬಾರದು ಎಂದ ಪವನ್ ಕಲ್ಯಾಣ್ ವಿರುದ್ಧ ಭುಗಿಲೆದ್ದ ಆಕ್ರೋಶ
ಹೈದರಾಬಾದ್ ನಲ್ಲ ನಡೆದ ಪಶು ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ತೆಲುಗು ನಟ ಮತ್ತು ಜನಸೇನ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ನೀಡಿದ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತೀಚಿಗೆ ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ಮಟ್ಟಕ್ಕೆ ಹೋಗಬಾರದು, ಆರೋಪಿಗಳನ್ನು ಗಲ್ಲಿಗೇರಿಸಲು ನನ್ನ ಸಹಮತ ಇಲ್ಲ ಎಂದು ಹೇಳಿದ್ದಾರೆ.
ಪವನ್ ಹೇಳಿಕೆ ಖಂಡಿಸಿ ಅನೇಕರು ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದ್ದಾರೆ. ಪವನ್ ಕಲ್ಯಾಣ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ, ಇದು ಮಹಿಳೆಯರ ಬಗ್ಗೆ ಅವಹೇಳನಕಾರಿಯಾದ ಹೇಳಿಕೆಯಾಗಿದೆ ಎಂದು ಅನೇಕರು ಆಕ್ರೋಶ ಹೊರಹಾಕಿತ್ತಿದ್ದಾರೆ. ಇಡೀ ದೇಶವೆ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆಯಾಗಬೇಕೆಂದು ಒತ್ತಾಯಿಸುತ್ತಿದ್ದಾರೆ ಪವನ್ ಕಲ್ಯಾಣ್ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅಭಿಮಾನಿಗಳಿಗೆ ನಿರಾಸೆ ಮಾಡಿದ ಪವನ್ ಕಲ್ಯಾಣ್!
ಇತ್ತೀಚಿಗೆ ಪವನ್ ಕಲ್ಯಾಣ್ ಜನಸೇನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ "ಸಹೋದರಿ ಪಶು ವೈದ್ಯೆ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಇಡೀ ದೇಶವೆ ಒತ್ತಾಯಿಸುತ್ತಿದೆ. ಆದರೆ ನನ್ನ ಪ್ರಕಾರ ಜನ ಯಾಕೆ ಇಷ್ಟು ತೀವ್ರ ಮಟ್ಟಕ್ಕೆ ಯೋಚಿಸುತ್ತಿದ್ದಾರೆ. ಈ ರೀತಿಯ ಘಟನೆಗಳ ಸಂದರ್ಭದಲ್ಲಿ ಗಲ್ಲಿಗೇರಿಸುವಂತ ಬೇಡಿಕೆಗಳನ್ನು ಮಾಡಬಾರದು" ಎಂದು ಹೇಳಿದ್ದಾರೆ.
"ಯಾರನ್ನು ಕೊಲ್ಲುವ ಹಕ್ಕು ನಮಗೆ ಇಲ್ಲ. ಆರೋಪಿಗಳನ್ನು ಗಲ್ಲಿಗೇರಿಸುವ ಅಗತ್ಯವಿಲ್ಲ. ಅವರಿಗೆ ಕಬ್ಬಿಣದ ಸರಳುಗಳಿಂದ ಹೊಡೆದು ಶಿಕ್ಷೆಕೊಡಬೇಕು. ಸಿಂಗಾಪುರ ಮಾದರಿಯಲ್ಲಿ ಶಿಕ್ಷೆ ವಿಧಿಸಬೇಕು. ಆರೋಪಿಗಳನ್ನು ಗಲ್ಲಿಗೇರಿಸಿ ಎಂದು ಒತ್ತಾಯಿಸುವುದು ತಪ್ಪು" ಎಂದು ಹೇಳಿದ್ದಾರೆ.
ಪವನ್ ಹೇಳಿಕೆಗೆ ಭಾರಿ ವಿರೋದ ವ್ಯಕ್ತವಾಗುತ್ತಿದೆ. ವೈ ಎಸ್ ಆರ್ ಪಿ ಕಾಂಗ್ರೇಸ್ ಮುಖ್ಯಸ್ಥ ಮಾತನಾಡಿ ಪವನ್ ಹೇಳಿಕೆ ಅವರ ಮಾನಸಿಕ ಸ್ಥಿತಿಯನ್ನು ತೋರಿಸುತ್ತಿದೆ, ಇಡೀ ದೇಶವೆ ಗಲ್ಲು ಶಿಕ್ಷೆಯಾಗಬೇಕೆಂದು ಒತ್ತಾಯಿಸುತ್ತಿದ್ದರೆ ಅವರು ಈ ರೀತಿಯ ಬೇಜಾವಾಬ್ದಾರಿಯುತ ಹೇಳಿಕೆ ನೀಡುವುದು ತಪ್ಪು ಎಂದು ಹೇಳಿದ್ದಾರೆ.
ಇನ್ನು ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವೆ ಪವನ್ ಕಲ್ಯಾಣ್ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ. ಅನೇಕ ರಾಜಕೀಯ ವ್ಯಕ್ತಿಗಳು ಮತ್ತು ನೆಟ್ಟಿಗರು ಪವನ್ ಹೇಳಿಕೆಯನ್ನು ವಿರೋಧಿಸಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.