Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರಂಜೀವಿ ಸಿನಿಮಾದ ಟೈಟಲ್ ರಿವೀಲ್: ಬಾಯಿತಪ್ಪಿ ಚಿತ್ರದ ಹೆಸರು ಹೇಳಿದ ಮೆಗಾಸ್ಟಾರ್
ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ಅಂದಮೇಲೆ ಕ್ರೇಜ್ ಸಿಕ್ಕಾಪಟ್ಟೆ ಇರುತ್ತೆ. ಇತ್ತೀಚಿಗಷ್ಟೆ ಸೈರಾ ನರಸಿಂಹ ರೆಡ್ಡಿ ಚಿತ್ರದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದ ಚಿರಂಜೀವಿ ಈಗ 152ನೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಚಿರಂಜೀವಿ 152ನೇ ಸಿನಿಮಾಗೆ ಕೊರಟಾಲ ಶಿವ ಆಕ್ಷನ್ ಕಟ್ ಹೇಳುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.
ಅಂದ್ಹಾಗೆ ಚಿರಂಜೀವಿ ಹೊಸ ಚಿತ್ರದ ಟೈಟಲ್ ಏನು ಎನ್ನುವುದು ಬಹಿರಂಗವಾಗಿರಲಿಲ್ಲ. ಟೈಟಲ್ ಏನಾಗಿರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಆದರೆ ಚಿರಂಜೀವಿ ಬಾಯಿತಪ್ಪಿ ಚಿತ್ರದ ಟೈಟಲ್ ರಿವೀಲ್ ಮಾಡಿದ್ದಾರೆ. ಚಿರು ಬಾಯಿಂದ ದಿಢೀರನೆ ಚಿತ್ರದ ಶೀರ್ಷಿಕೆ ಬಹಿರಂಗವಾಗಿರುವುದು ಚಿತ್ರತಂಡಕ್ಕೆ ನಿರಾಸೆ ಮೂಡಿಸಿದೆ. ಹಾಗಾದರೆ ಸಿನಿಮಾ ಟೈಟಲ್ ಏನು? ಮುಂದೆ ಓದಿ..
ಚಿರಂಜೀವಿ-ಮಹೇಶ್ ಬಾಬು ಮೆಗಾ ಸಿನಿಮಾ: ಧೂಳೆಬ್ಬಿಸಲಿದೆ ಪ್ರಾಜೆಕ್ಟ್!
'ಓ ಪಿಟ್ಟಿ ಕಥಾ' ಸಮಾರಂಭದಲ್ಲಿ ಭಾಗಿಯಾಗಿದ್ದ ಮೆಗಾಸ್ಟಾರ್
ಇತ್ತೀಚಿಗೆ ಮೆಗಾಸ್ಟಾರ್ ಚಿರಂಜೀವಿ, ಚಂದ್ರು ಮುದ್ದು ನಿರ್ದೇಶನದ 'ಓ ಪಿಟ್ಟಿ ಕಥಾ' ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರವೊಂದಕ್ಕೆ ಗೆಸ್ಟ್ ಆಗಿ ಆಗಮಿಸಿದ್ದರು. ಈ ಸಮಾರಂಭದಲ್ಲಿ ಮೆಗಾಸ್ಟಾರ್ 'ಓ ಪಿಟ್ಟಿ ಕಥಾ' ಸಿನಿಮಾದ ಬಗ್ಗೆ ಮಾತನಾಡುತ್ತ, ತನ್ನ ಹೊಸ ಸಿನಿಮಾದ ಟೈಟಲ್ ಅನ್ನು ಬಾಯಿತಪ್ಪಿ ಹೇಳಿದ್ದಾರೆ. ಚಿರು ಟೈಟಲ್ ರಿವೀಲ್ ಮಾಡಿದ್ದು ನೋಡಿ ಒಮ್ಮೆ ಎಲ್ಲರಿಗೂ ಅಚ್ಚರಿಯಾಯಿತು.
ಚಿರಂಜೀವಿ ಸಿನಿಮಾ ಟೈಟಲ್ ಏನು?
ಕಾರ್ಯಕ್ರಮದಲ್ಲಿ ಮಾತನಾಡುತ್ತ ಚಿರಂಜೀವಿ ತನ್ನ ಹೊಸ ಸಿನಿಮಾದ ಟೈಟಲ್ 'ಆಚಾರ್ಯ' ಎಂದು ಹೇಳಿದ್ದಾರೆ. ಇಂಟ್ರಸ್ಟಿಂಗ್ ಆಗಿರುವ ಟೈಟಲ್ ಕೇಳಿ ಚಿರು ಅಭಿಮಾನಿಗಳು ಸಂತಸ ಪಡುತ್ತಿದ್ದಾರೆ. ಅಂದ್ಹಾಗೆ ಆಚಾರ್ಯ ಈಗಾಗಲೆ ಚಿತ್ರೀಕರಣ ಪ್ರಾರಂಭಿಸಿದೆ. ಆದರೆ ಚಿತ್ರತಂಡ ಇದುರೆಗೂ ಚಿತ್ರದ ಟೈಟಲ್ ಅನ್ನು ಎಲ್ಲಿಯೂ ಬಹಿರಂಗ ಪಡಿಸಿರಲಿಲ್ಲ.
ಚಿರಂಜೀವಿ ಹೊಸ ಚಿತ್ರದಲ್ಲಿ ಸರ್ಪ್ರೈಸ್ ನೀಡಿದ ರಾಮ್ ಚರಣ್!
ತಂಡದ ಬಳಿ ಕ್ಷಮೆ ಕೇಳಿದ ಚಿರಂಜೀವಿ
ಚಿತ್ರೀಕರಣ ಪ್ರಾರಂಭವಾಗಿ ಅನೇಕ ದಿನಗಳಾದರು ಚಿತ್ರತಂಡ ಟೈಟಲ್ ಅನ್ನು ರಿವೀಲ್ ಮಾಡದೆ ಗುಟ್ಟಾಗಿ ಕಾಪಾಡಿಕೊಂಡು ಬಂದಿತ್ತು. ಚಿರಂಜೀವಿ ಬಾಯಿಂದನೆ ಬಹಿರಂಗವಾಗಿರುವುದ ಚಿತ್ರಡಕ್ಕೆ ಕೊಂಚ ಬೇಸರವೊಂಟು ಮಾಡಿದೆ. ದೊಡ್ಡ ಕಾರ್ಯಕ್ರಮ ಮಾಡಿ ಟೈಟಲ್ ಅನನ್ನು ಅದ್ಧೂರಿಯಾಗಿ ರಿವೀಲ್ ಮಾಡಬೇಕು ಎಂದುಕೊಂಡಿದ್ದ ತಂಡಕ್ಕೆ ನಿರಾಸೆಯಾಗಿದ್ದರಿಂದ ಚಿರಂಜೀವಿ ಮಾಡಿದ ತಪ್ಪಿಗೆ ಚಿತ್ರತಂಡ ಬಳಿ ಕ್ಷಮೆ ಕೇಳಿದ್ದಾರಂತೆ.
ಮೆಗಾಸ್ಟಾರ್ ಚಿರಂಜೀವಿ ಕಣ್ಣಲ್ಲಿ ನೀರು ತರಿಸಿದ 'RX100' ನಟ ಕಾರ್ತಿಕೇಯ
ಚಿರುಗೆ ತ್ರೀಷಾ ನಾಯಕಿ
ಸದ್ಯ ಚಿರಂಜೀವಿ ಅಂಡ್ ಟೀಂ ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಈಗಾಗಲೆ ಚಿತ್ರೀಕರಣ ಅಡ್ಡಾದಿಂದ ಚಿರಂಜೀವಿ ಲುಕ್ ರಿವೀಲ್ ಆಗಿದೆ. ಚಿರಂಜೀವಿ ಮಧ್ಯವಯಸ್ಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಕ್ಸಲೀಯ ಸಮಾಜ ಸುಧಾರಕನಾಗಿ ಬದಲಾಗುವ ಪಾತ್ರವಂತೆ. ಚಿರುಗೆ ನಾಯಕಿಯಾಗಿ ತ್ರಿಷಾ ಕೃಷ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಖಳ ನಟನಾಗಿ ಸೋನು ಸೂದ್ ಮಿಂಚಲಿದ್ದಾರೆ ಎಂದು ಹೇಳಲಾಗುತ್ತಿದೆ.